Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮೇಶ್ ಜಾರಕಿಹೊಳಿ ನಿವಾಸಕ್ಕೆ ಇಂದ್ರಜಿತ್ ಲಂಕೇಶ್ ಭೇಟಿ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತಂಡ ತನಿಖೆ ಆರಂಭಿಸಿದ್ದು, ಸಿಡಿ ರೂವಾರಿಗಳ ಬೆನ್ನು ಬಿದ್ದಿದೆ.
ಈ ನಡುವೆ ಕನ್ನಡ ಚಲನಚಿತ್ರ ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್ ಅವರು ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸಿಡಿ ಪ್ರಕರಣದ ಬಹಳ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿಸಿರುವ ಈ ಸಮಯದಲ್ಲಿ ರಮೇಶ್ ಜಾರಕಿಹೊಳಿ ಮನೆಗೆ ಇಂದ್ರಜಿತ್ ಭೇಟಿ ಸಹಜವಾಗಿ ಕುತೂಹಲ ಹೆಚ್ಚಿಸಿದೆ.
ಸಿಡಿ ಸ್ಫೋಟ ಪ್ರಕರಣ: ಜಾರಕಿಹೊಳಿ ಎಸ್ಐಟಿಗೆ ಕೊಟ್ಟ ನಾಲ್ಕು ಪುಟ ಹೇಳಿಕೆಯಲ್ಲಿ ಬಿಚ್ಚಿಟ್ಟ ರಹಸ್ಯ ಏನು ?
ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಇಂದ್ರಜಿತ್ ಸುಮಾರು ಅರ್ಧಗಂಟೆ ಕಾಲ ಚರ್ಚೆ ನಡೆಸಿದ್ದಾರೆ. ಜಾರಕಿಹೊಳಿ ನಿವಾಸದಿಂದ ವಾಪಸ್ ಹೋಗುವಾಗಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ.
ಈ ಹಿಂದೆ ಡ್ರಗ್ಸ್ ಪ್ರಕರಣದ ತನಿಖೆ ವೇಳೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೆಚ್ಚು ಸುದ್ದಿಯಲ್ಲಿದ್ದರು. ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ, ಕೆಲವು ಸೆಲೆಬ್ರಿಟಿಗಳು ಡ್ರಗ್ ಜಾಲದಲ್ಲಿ ತೊಡಗಿಕೊಂಡಿದ್ದಾರೆ ಎಂದು ದೂರು ನೀಡಿದ್ದರು.
ರಮೇಶ್ ಜಾರಕಿಹೊಳಿ ದೂರು ಆಧರಿಸಿ ದಾಖಲಿಸಿರುವ ಎಫ್ಐಆರ್ನಲ್ಲಿ ಏನಿದೆ?
Recommended Video
ಈಗ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿರುವ ಸಂದರ್ಭದಲ್ಲಿ ಇಂದ್ರಜಿತ್ ಲಂಕೇಶ್ ಭೇಟಿ ಸಹಜವಾಗಿ ಚರ್ಚೆಗೆ ಕಾರಣವಾಗಿದೆ. ಸಿಡಿ ಪ್ರಕರಣ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.