Don't Miss!
- News Lok Sabha election 2024: ಟಿಡಿಪಿ ಅಭ್ಯರ್ಥಿ 5,785 ಕೋಟಿ ಒಡೆಯ
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
Dhruva Sarja: ಪ್ರೇಮ್-ಧ್ರುವ ಚಿತ್ರಕ್ಕೆ ಮುಹೂರ್ತ ಫಿಕ್ಸ್, ಅಭಿಮಾನಿಗಳೆ ಅತಿಥಿಗಳು!
ನಟ ಧ್ರುವ ಸರ್ಜಾ ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಮಾಡುವತ್ತ ಹೆಜ್ಜೆ ಇಟ್ಟಿದ್ದಾರೆ. ಸದ್ಯ 'ಮಾರ್ಟಿನ್' ಚಿತ್ರದಲ್ಲಿ ಧ್ರುವ ಸರ್ಜಾ ಬ್ಯುಸಿಯಾಗಿದ್ದಾರೆ. ಅದಾಗಲೇ ಅವರ ಮುಂದಿನ ಚಿತ್ರ ಪ್ರಕಟ ಆಗಿದೆ. ಈ ಚಿತ್ರಕ್ಕೆ ನಿರ್ದೇಶಕ ಪ್ರೇಮ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ತಡ ಮಾಡದೆ ಚಿತ್ರದ ಕೆಲಸಗಳನ್ನು ಆರಂಭಿಸಲು ಚಿತ್ರತಂಡ ಸಜ್ಜಾಗಿದೆ.
ಇನ್ನು 'ಏಕ್ ಲವ್ ಯಾ' ಸಿನಿಮಾ ಬಿಡುಗಡೆಯಾದ ಬಳಿಕ ಪ್ರೇಮ್ ಮುಂದಿನ ನಡೆಯ ಬಗ್ಗೆ ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿದ್ದವು. 'ಏಕ್ ಲವ್ ಯಾ' ಚಿತ್ರ ರಿಲೀಸ್ ಬೆನ್ನಲ್ಲೇ ಧ್ರುವ ಸರ್ಜಾಗೆ ಪ್ರೇಮ್ ನಿರ್ದೇಶನ ಮಾಡುತ್ತಾರೆ ಎನ್ನುವ ಸುದ್ದಿ ಹೊರ ಬಂದಿತ್ತು. ಈಗ ಈ ಸುದ್ದಿ ಪಕ್ಕಾ ಆಗಿದೆ. ಪ್ರೇಮ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ದರ್ಶನ್ಗೆ ಹೇಳಿದ್ದ ಕಥೆ ಧ್ರುವಗೆ ಮಾಡುತ್ತಿದ್ದಾರಾ ಜೋಗಿ ಪ್ರೇಮ್? ಈ ಚಿತ್ರಕ್ಕಿದೆ ಭೂಗತಲೋಕದ ನಂಟು
ಪ್ರೇಮ್ ಅಂದರೆ ಡಿಫ್ರೆಂಟ್ ಅಂತ ಅರ್ಥ. ಧ್ರುವ ಅಂದರೆ ಮಾಸ್ ಅಂತ ಅರ್ಥ. ಹಾಗಾಗಿ ಈ ಇಬ್ಬರು ಒಂದಾದರೆ ಸಿನಿಮಾ ಹೇಗೆ ಇರಬಹುದು ಎನ್ನುವ ಕುತೂಹಲ ಹೆಚ್ಚಾಗಿದೆ. ಇನ್ನು ಪ್ರೇಮ್ ಈ ಬಾರಿ ಅಂಡರ್ ವರ್ಲ್ಡ್ ಕಥೆ ಕೈಗೆತ್ತಿ ಕೊಂಡಿದ್ದಾರೆ. ಹಾಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇದೆ.
ಏಪ್ರಿಲ್ 24ಕ್ಕೆ ಪ್ರೇಮ್- ಧ್ರುವ ಚಿತ್ರ ಲಾಂಚ್!
ಇದೆ ಏಪ್ರಿಲ್ 24ಕ್ಕೆ ಧ್ರುವ ಮತ್ತು ಪ್ರೇಮ್ ಹೊಸ ಚಿತ್ರ ಲಾಂಚ್ ಆಗಲಿದೆ. ಈ ಬಗ್ಗೆ ನಿರ್ದೇಶಕ ಪ್ರೇಮ್ ಟ್ವೀಟ್ ಮಾಡಿ ವಿಚಾರ ಹಂಚಿಕೊಂಡಿದ್ದಾರೆ. ಚಿತ್ರದ ಮುಹೂರ್ತ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಕೊಟ್ಟಿದ್ದಾರೆ. "ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ, 24ರಂದು ಬೆಳಿಗ್ಗೆ 9:30ಕ್ಕೆ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆಯೋ ಮುಹೂರ್ತಕ್ಕೆ ನೀವೇ ಮುಖ್ಯ ಅತಿಥಿ, ಬನ್ನಿ ಒಟ್ಟಿಗೆ ಹಬ್ಬ ಮಾಡೋಣ, ನಿಮ್ಮ ಆಶೀರ್ವಾದ ಸದಾ ಹೀಗೆ ಇರಲಿ, ಹರಸಿ ಹಾರೈಸಿ. ಸ್ಥಳ: ಮೈಸೂರು ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸನ್ನಿಧಿ." ಎಂದು ಪ್ರೇಮ್ ಟ್ವಿಟ್ ಮಾಡಿದ್ದಾರೆ.
'ಮಾರ್ಟಿನ್' ಅಡ್ಡಾದಲ್ಲಿ ನಡೀತಿರೋದೇನು: ಧ್ರುವ ಸರ್ಜಾ ಲುಕ್ ಬದಲಿಸಿದ್ದು ಯಾಕ?
ಈ ಮೂಲಕ ಮುಹೂರ್ತ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನಿಸಲಾಗಿದ್ದು, ಅವರೆ ಈ ಕಾರ್ಯಕ್ರಮದ ಅತಿಥಿಗಳು ಆಗಿರಲಿದ್ದಾರೆ. ಹಾಗಾಗಿ ನೀವೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗ ಬೇಕು ಎಂದು ಕೊಂಡರೆ ನಿಮಗೆ ಯಾವುದೇ ಅಡ್ಡಿ ಇರುವುದಿಲ್ಲ. 24ರಂದು ಸೀದಾ ಮೈಸೂರಿಗೆ ಹೋಗಿ ಕಾರ್ಯಕ್ರಮದಲ್ಲಿ ಭಾಗಿ ಆಗ ಬಹುದು.
ಯುದ್ಧದ ಮುನ್ನುಡಿ ಇಲ್ಲಿಂದ ಆರಂಭ”
— PREM❣️S (@directorprems) April 18, 2022
24ರಂದು ಬೆಳಿಗ್ಗೆ 9:30ಕ್ಕೆ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಡೆಯೋ ಮುಹೂರ್ತಕ್ಕೆ ನೀವೇ ಮುಖ್ಯ ಅತಿಥಿ, ಬನ್ನಿ ಒಟ್ಟಿಗೆ ಹಬ್ಬ ಮಾಡೋಣ, ನಿಮ್ಮಆಶೀರ್ವಾದ ಸದಾ ಹೀಗೆ ಇರಲಿ; ಹರಸಿ ಹಾರೈಸಿ🙏🏻
ಸ್ಥಳ:#ಮೈಸೂರು
ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸನ್ನಿಧಿ #kvn @DhruvaSarja #prems #mysore pic.twitter.com/3cJcU4QMfl
ಇನ್ನು ಈ ಸಂದೇಶದ ಜೊತೆಗೆ ಪ್ರೇಮ್ ಪೋಸ್ಟರ್ ಕೂಡ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಈ ಪೋಸ್ಟರ್ ಪತನಗೊಂಡ ಕೋಟೆ ಬಾಗಿಲಿನ ಚಿತ್ರ ಹೊಂದಿದೆ. ಕೋಟೆಯ ಮೇಲೆ 1970 ಎಂದು ಬರೆಯಲಾಗಿದೆ. ಇದು ಕೂಡ ಕುತೂಹಲಕ್ಕೆ ಕಾರಣ ಆಗಿದೆ.
ಧ್ರುವ ಸರ್ಜಾಗೆ ಆಕ್ಷನ್ ಹೇಳುತ್ತಿರುವ ಸಿನಿಮಾಗೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಲಾಂಚ್ ದಿನವೇ ಟೈಟಲ್ ಫಿಕ್ಸ್ ಆಗುವ ಸಾಧ್ಯತೆ ಇದೆ. ಈ ಚಿತ್ರದ ಮೂಲಕ ಕೊತ್ವಾಲ್ ರಾಮಚಂದ್ರ ಹಾಗೂ ಎಂ ಪಿ ಜೈರಾಜ್ ಕಾಲದ ಭೂಗತಲೋಕದ ಕತೆಯೊಂದನ್ನು ತೆರೆಮೇಲೆ ತರಲು ಹೊರಟಿದ್ದಾರೆ ಅನ್ನುವ ಮಾತುಗಳು ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. 70ರ ದಶಕಕ್ಕೆ ಹೋಲುವ ಸೆಟ್ಟನ್ನು ನಿರ್ಮಿಸಲಾಗುತ್ತಿದ್ದು, ಇದು ಭೂಗಲೋಕದ ಕಥೆಯನ್ನು ಹೇಳುತ್ತಿದ್ದಾರೆ ಎನ್ನಲಾಗಿದೆ.