Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೊಚ್ಚಲ ಪ್ರತಿಭೆಗಳಿಗೆ ಬೆನ್ನುಲುಬಾದ ಮಹೇಶ್ ಬಾಬು
ನಿರ್ದೇಶಕ ಮಹೇಶ್ ಬಾಬು ಅವರು ಸ್ಯಾಂಡಲ್ ವುಡ್ ಗೆ ಕಾಲಿಡುವ ಹೊಸ ಪ್ರತಿಭೆಗಳಿಗೆ ಒಂಥರಾ ಗಾಡ್ ಫಾದರ್ ಇದ್ದಂತೆ. ತಮ್ಮ ನಿರ್ದೇಶನದ ಹಲವು ಚಿತ್ರಗಳಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಮಹೇಶ್ ಬಾಬು ಅವರು ಸಹ ನಿರ್ದೇಶಕರಾಗಿ ಸಿನಿಮಾ ಮಾಡಿದಾಗ ನಟಿ ರಮ್ಯಾ ಮತ್ತು ರಕ್ಷಿತಾ ಅವರಿಗೆ ಬ್ರೇಕ್ ನೀಡಿದ್ದರು. ತದನಂತರ ಸ್ವತಂತ್ರ ನಿರ್ದೇಶಕರಾದ ಮೇಲೆ ನಟಿ ಐಂದ್ರಿತಾ ರೇ, ನಟಿ ಕೃತಿ ಖರಬಂದ ಮತ್ತು ನಿಕ್ಕಿ ಗಲ್ರಾನಿ ಸೇರಿದಂತೆ ಹಲವರಿಗೆ ಅವಕಾಶ ನೀಡಿ ಅವರ ಸಿನಿಮಾ ವೃತ್ತಿ ಜೀವನಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ.[ದರ್ಶನ್ ಗೆ ಜೋಡಿಯಾದ ಮಿಸ್ಸೆಸ್ ಇಂಡಿಯಾ]
ಇದೀಗ ಮತ್ತೆ ತಮ್ಮ ಹೊಸ ಚಿತ್ರದ ಮೂಲಕ ಇಬ್ಬರು ನವ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡುತ್ತಿದ್ದಾರೆ. 'ಕ್ರೇಜಿ ಬಾಯ್' ಎಂಬ ಚಿತ್ರದೊಂದಿಗೆ ನವ ನಟ ದಿಲೀಪ್ ಪ್ರಕಾಶ್ ಮತ್ತು ನಟಿ ಆಶಿಕ ರಂಗನಾಥ್ ಅವರನ್ನು ಗಾಂಧಿನಗರಕ್ಕೆ ಕರೆ ತಂದಿದ್ದಾರೆ.
ಈಗಾಗಲೇ ಚಿತ್ರದ ಆಡಿಯೋ ರಿಲೀಸ್ ಆಗಿದ್ದು, ಇನ್ನೇನು ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ. ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ತಮಿಳು ಕಾಮಿಡಿ ನಟ ಸಂತಾನಂ ಅವರು ಆಗಮಿಸಿ ಹೊಸ ಪ್ರತಿಭೆಗಳಿಗೆ ಶುಭ ಹಾರೈಸಿದ್ದಾರೆ. ಅಲ್ಲದೇ ಈ ಚಿತ್ರ ಸೆಟ್ಟೇರುವಾಗ ಕೂಡ ದರ್ಶನ್ ಅವರೇ ಕ್ಲ್ಯಾಪ್ ಮಾಡಿದ್ದರು ಅನ್ನೋದು ವಿಶೇಷ.
'ನಾನು ಹೊಸಬರಿಗೆ ಅವಕಾಶ ಕೊಡುವಾಗ ದೊಡ್ಡ ದೊಡ್ಡ ಸಂಭಾಷಣೆ ಅಥವಾ ಅಳು-ನಗುವಂತಹ ಚಿಕ್ಕ-ಚಿಕ್ಕ ಪರೀಕ್ಷೆಗಳನ್ನು ಮಾಡುವುದಿಲ್ಲ. ಬದ್ಲಾಗಿ ಬರೀ ಫೋಟೋ ಶೂಟ್ ಮಾಡಿ ಪ್ರತಿಭೆಗಳನ್ನು ಆರಿಸುತ್ತೇನೆ' ಎಂದು ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಹೇಶ್ ಬಾಬು ತಿಳಿಸಿದ್ದಾರೆ.