Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾದಲ್ಲಿ ಈ ಡೈಲಾಗ್ ಬಳಸಿದ್ದಕ್ಕೆ ಮಣಿರತ್ನಂಗೆ ಬಾಂಬ್ ಕರೆ.!
ಮಣಿರತ್ನಂ ನಿರ್ದೇಶನದಲ್ಲಿ ಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಚೆಕ್ಕ ಚಿವಂದ ವಾನಂ' ಚಿತ್ರದ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಬಾಕ್ಸ್ ಅಫೀಸ್ ನಲ್ಲೂ ಭರ್ಜರಿ ಗಳಿಕೆ ಕಾಣುತ್ತಿದೆ. ಈ ಮಧ್ಯೆ ನಿರ್ದೇಶಕ ಮಣಿರತ್ನಂ ಅವರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಚೆನ್ನೈನ ಅಭಿರಾಂಪುರದಲ್ಲಿರುವ ಮಣಿರತ್ನಂ ಅವರ ಕಚೇರಿಗೆ ಕಿಡಿಗೇಡಿಗಳು ಕರೆ ಮಾಡಿದ್ದು, 'ಚೆಕ್ಕ ಚಿವಂದ ವಾನಂ' ಚಿತ್ರದಲ್ಲಿ ಬಳಸಲಾಗಿರುವ ಸಂಭಾಷಣೆಯೊಂದನ್ನ ಸಿನಿಮಾದಿಂದ ತೆಗೆಯಿರಿ, ಇಲ್ಲವಾದಲ್ಲಿ ಬಾಂಬ್ ಹಾಕ್ತೀವಿ ಎಂದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.
ಮತ್ತೆ ಕನ್ನಡ ಸಿನಿಮಾ ಮಾಡ್ತಾರಾ ನಿರ್ದೇಶಕ ಮಣಿರತ್ನಂ.?
ಮಣಿರತ್ನಂ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ದಾವಿಸಿದ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಮಣಿರತ್ನಂ ಅವರಿಗೆ ಭದ್ರತೆ ಒದಗಿಸಲಾಗಿದೆಯಂತೆ.
ಈ ಹಿಂದೆ ಮಣಿರತ್ನಂ ಅವರು ವಿವಾದಾತ್ಮಕ ಸಂಭಾಷಣೆಯನ್ನ ಚಿತ್ರದಿಂದ ತೆಗೆಯಬೇಕೆಂದು ಕೆಲವು ಸಮುದಾಯಗಳು ಬೇಡಿಕೆಯಿಟ್ಟಿತ್ತಂತೆ. ಇದನ್ನ ಗಮನಿಸಿದ ಪೊಲೀಸರು ಅವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮಣಿರತ್ನಂ - ಸುಹಾಸಿನಿ ದಂಪತಿಗೆ ಈ ದಿನ ಮರೆಯಲಾಗದ ಸುದಿನ
ಅಂದ್ಹಾಗೆ, 'ಚೆಕ್ಕ ಚಿವಂದ ವಾನಂ' ಸಿನಿಮಾ ಗ್ಯಾಂಗ್ ಸ್ಟರ್ ಕುರಿತಾದ ಚಿತ್ರವಾಗಿದ್ದು, ಅಂಡರ್ ವರ್ಲ್ಡ್ ಕಥೆಯನ್ನ ಒಳಗೊಂಡಿದೆ. ಅರವಿಂದ ಸ್ವಾಮಿ, ಸಿಂಬು, ವಿಜಯ್ ಸೇತುಪತಿ, ಅರುಣ್ ವಿಜಯ್, ಜ್ಯೋತಿಕಾ, ಅಧಿತಿ ರಾವ್ ಹೈದರಿ, ದಯನ್ ಈರಪ್ಪ ಅಂತಹ ಬಹುದೊಡ್ಡ ತಾರಬಳ ಚಿತ್ರದಲ್ಲಿ ಕಾಣಿಸಿಕೊಂಡಿದೆ. ಸೆಪ್ಟೆಂಬರ್ 29 ರಂದು ಈ ಸಿನಿಮಾ ರಿಲೀಸ್ ಆಗಿತ್ತು.