Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾದಲ್ಲಿ ಈ ಡೈಲಾಗ್ ಬಳಸಿದ್ದಕ್ಕೆ ಮಣಿರತ್ನಂಗೆ ಬಾಂಬ್ ಕರೆ.!
ಮಣಿರತ್ನಂ ನಿರ್ದೇಶನದಲ್ಲಿ ಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಚೆಕ್ಕ ಚಿವಂದ ವಾನಂ' ಚಿತ್ರದ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದ್ದು, ಬಾಕ್ಸ್ ಅಫೀಸ್ ನಲ್ಲೂ ಭರ್ಜರಿ ಗಳಿಕೆ ಕಾಣುತ್ತಿದೆ. ಈ ಮಧ್ಯೆ ನಿರ್ದೇಶಕ ಮಣಿರತ್ನಂ ಅವರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಚೆನ್ನೈನ ಅಭಿರಾಂಪುರದಲ್ಲಿರುವ ಮಣಿರತ್ನಂ ಅವರ ಕಚೇರಿಗೆ ಕಿಡಿಗೇಡಿಗಳು ಕರೆ ಮಾಡಿದ್ದು, 'ಚೆಕ್ಕ ಚಿವಂದ ವಾನಂ' ಚಿತ್ರದಲ್ಲಿ ಬಳಸಲಾಗಿರುವ ಸಂಭಾಷಣೆಯೊಂದನ್ನ ಸಿನಿಮಾದಿಂದ ತೆಗೆಯಿರಿ, ಇಲ್ಲವಾದಲ್ಲಿ ಬಾಂಬ್ ಹಾಕ್ತೀವಿ ಎಂದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.
ಮತ್ತೆ ಕನ್ನಡ ಸಿನಿಮಾ ಮಾಡ್ತಾರಾ ನಿರ್ದೇಶಕ ಮಣಿರತ್ನಂ.?
ಮಣಿರತ್ನಂ ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ದಾವಿಸಿದ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದ್ದು, ಮಣಿರತ್ನಂ ಅವರಿಗೆ ಭದ್ರತೆ ಒದಗಿಸಲಾಗಿದೆಯಂತೆ.
ಈ ಹಿಂದೆ ಮಣಿರತ್ನಂ ಅವರು ವಿವಾದಾತ್ಮಕ ಸಂಭಾಷಣೆಯನ್ನ ಚಿತ್ರದಿಂದ ತೆಗೆಯಬೇಕೆಂದು ಕೆಲವು ಸಮುದಾಯಗಳು ಬೇಡಿಕೆಯಿಟ್ಟಿತ್ತಂತೆ. ಇದನ್ನ ಗಮನಿಸಿದ ಪೊಲೀಸರು ಅವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮಣಿರತ್ನಂ - ಸುಹಾಸಿನಿ ದಂಪತಿಗೆ ಈ ದಿನ ಮರೆಯಲಾಗದ ಸುದಿನ
ಅಂದ್ಹಾಗೆ, 'ಚೆಕ್ಕ ಚಿವಂದ ವಾನಂ' ಸಿನಿಮಾ ಗ್ಯಾಂಗ್ ಸ್ಟರ್ ಕುರಿತಾದ ಚಿತ್ರವಾಗಿದ್ದು, ಅಂಡರ್ ವರ್ಲ್ಡ್ ಕಥೆಯನ್ನ ಒಳಗೊಂಡಿದೆ. ಅರವಿಂದ ಸ್ವಾಮಿ, ಸಿಂಬು, ವಿಜಯ್ ಸೇತುಪತಿ, ಅರುಣ್ ವಿಜಯ್, ಜ್ಯೋತಿಕಾ, ಅಧಿತಿ ರಾವ್ ಹೈದರಿ, ದಯನ್ ಈರಪ್ಪ ಅಂತಹ ಬಹುದೊಡ್ಡ ತಾರಬಳ ಚಿತ್ರದಲ್ಲಿ ಕಾಣಿಸಿಕೊಂಡಿದೆ. ಸೆಪ್ಟೆಂಬರ್ 29 ರಂದು ಈ ಸಿನಿಮಾ ರಿಲೀಸ್ ಆಗಿತ್ತು.