Don't Miss!
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗದಲ್ಲಿ ಸೆಟ್ಟೇರಿತು 'ಭರತ-ಬಾಹುಬಲಿ'ಯ ಸಿನಿಮಾ
ಯಾವುದೇ ಭಾಷೆಯಲ್ಲಿ ಐತಿಹಾಸಿಕ ಹಿನ್ನಲೆ ಇರುವ ಸಿನಿಮಾಗಳು ಬಿಡುಗಡೆ ಆದ ನಂತರ ಚಿತ್ರ ನೋಡಿದ ಪ್ರೇಕ್ಷಕರು ಹೇಳುವ ಮಾತು ಇದು ಬಾಹುಬಲಿ ತರ ಇಲ್ಲ ಬಿಡಿ. ಏನ್ ಮೇಕಿಂಗ್ ಎಷ್ಟು ಚೆನ್ನಾಗಿತ್ತು ಸಿನಿಮಾ ಎನ್ನುವ ಮಾತುಗಳನ್ನಾಡುತ್ತಾರೆ.
ಪೌರಾಣಿಕ ಚಿತ್ರವಾದರೂ ಅಷ್ಟೇ ಬಾಹುಬಲಿ ತರ ಇರುತ್ತಾ? ಅವರಂತೆ ನಿಮಗ್ಯಾಕೆ ಸಿನಿಮಾ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತ ಪ್ರಶ್ನೆ ಮಾಡುತ್ತಾರೆ. ಬಾಹುಬಲಿ ಹೆಸರಿನಲ್ಲೇ ಸ್ಯಾಂಡಲ್ ವುಡ್ ನಲ್ಲೊಂದು ಚಿತ್ರ ಸೆಟ್ಟೇರಲು ರೆಡಿ ಆಗಿದೆ.
ಮಾಸ್ಟರ್ ಪೀಸ್ ನಂತಹ ಕಮರ್ಷಿಯಲ್ ಸಿನಿಮಾವನ್ನ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ನೀಡಿದ ನಿರ್ದೇಶಕ ಮಂಜು ಮಾಂಡವ್ಯ ಭರತ-ಬಾಹುಬಲಿ ಚಿತ್ರವನ್ನ ಡೈರೆಕ್ಟ್ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಹಾಗಾದ್ರೆ ಇದು ತೆಲುಗಿನ ಬಾಹುಬಲಿ ಚಿತ್ರವನ್ನ ಮೀರಿಸುತ್ತಾ? ಐತಿಹಾಸಿಕ ಚಿತ್ರನಾ? ಸಿನಿಮಾದಲ್ಲಿ ಯಾರ್ಯಾರು ಅಭಿನಯಿಸುತ್ತಾರೆ? ಇವೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ಮುಂದೆ ಓದಿ
ಮಂಜು ಮಾಂಡವ್ಯ ನಿರ್ದೇಶನದಲ್ಲಿ ಭರತ-ಬಾಹುಬಲಿ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಸಿನಿಮಾವನ್ನ ನಿರ್ದೇಶನ ಮಾಡಿದ್ದ ಮಂಜು ಮಾಂಡವ್ಯ ತಮ್ಮ ಡೈರೆಕ್ಷನ್ ನಲ್ಲಿ ಮೂಡಿ ಬರುತ್ತಿರುವ ಎರಡನೇ ಚಿತ್ರವನ್ನ ಅನೌನ್ಸ್ ಮಾಡಿದ್ದಾರೆ. ಭರತ-ಬಾಹುಬಲಿ ಅನ್ನುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಮಂಜು ತಯಾರಿ ನಡೆಸಿದ್ದಾರೆ.
ನಿರ್ದೇಶನದ ಜೊತೆಯಲ್ಲಿ ನಟನೆಯ ಜವಾಬ್ದಾರಿ
ರಾಜಹುಲಿ ಸಿನಿಮಾದಲ್ಲಿ ಚಿಕ್ಕದೊಂದು ಪಾತ್ರವನ್ನ ನಿರ್ವಹಿಸಿದ್ದ ಮಂಜುಮಾಂಡವ್ಯ ಭರತ-ಬಾಹುಬಲಿ ಸಿನಿಮಾದ ಮೂಲಕ ಚಿತ್ರರಂಗದಲ್ಲಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಭರತ-ಬಾಹುಬಲಿ ಚಿತ್ರವನ್ನ ನಿರ್ದೇಶನ ಮಾಡುವುದರ ಜೊತೆಯಲ್ಲಿ ಸಿನಿಮಾದಲ್ಲಿ ಅಭಿನಯವನ್ನೂ ಮಾಡಲಿದ್ದಾರೆ.
ಬಾಹುಬಲಿ ಪಾತ್ರದಲ್ಲಿ ಚಿಕ್ಕಣ್ಣ
ಭರತ-ಬಾಹುಬಲಿ ಸಿನಿಮಾದಲ್ಲಿ ಬಾಹುಬಲಿ ಪಾತ್ರವನ್ನ ಕಾಮಿಡಿ ಸ್ಟಾರ್ ಚಿಕ್ಕಣ್ಣ ನಿರ್ವಹಿಸುತ್ತಿದ್ದಾರೆ. ಇನ್ನು ಭರತನಾಗಿ ನಿರ್ದೇಶಕ ಮಂಜು ಮಾಂಡವ್ಯ ಕಾಣಿಸಿಕೊಳ್ಳಲಿದ್ದಾರೆ. ಮಾಸ್ಟರ್ ಪೀಸ್ ನಂತಯೇ ಇಂದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾ ಆಗಲಿದೆ.
ಒಳ್ಳೆ ಮೆಸೆಜ್ ಜೊತೆ ಮನೋರಂಜನೆ
ಐಶ್ವರ್ಯ ಫಿಲ್ಮ್ಸ್ ಪ್ರೊಡಕ್ಷನ್ಸ್ ನಲ್ಲಿ ನಿರ್ಮಾಣವಾಗುತ್ತಿರುವ ಭರತ-ಬಾಹುಬಲಿ ಸಿನಿಮಾ ಪಕ್ಕಾ ಕಮರ್ಷಿಯಲ್ ಚಿತ್ರ. ಮಾರ್ಚ್ ನಿಂದ ಚಿತ್ರೀಕರಣ ಶುರುವಾಗಲಿದ್ದು ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಭರತ-ಬಾಹುಬಲಿ ಸಿನಿಮಾದಲ್ಲಿ ಯಾವುದೇ ಪೌರಾಣಿಕ ಅಥವಾ ಐತಿಹಾಸಿಕ ಕತೆಯ ಹಿನ್ನಲೆ ಇರುವುದಿಲ್ಲ.