Don't Miss!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ವಿಚಾರದಲ್ಲೂ ಉತ್ತರ ಕರ್ನಾಟಕದ ನಿರ್ಲಕ್ಷ್ಯ ಯಾಕೆ? ನಿರ್ದೇಶಕ ಮಂಸೋರೆ ಪ್ರಶ್ನೆ
ಕೊರೊನಾ ವೈರಸ್ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕನ್ನಡ ಚಿತ್ರರಂಗ ಚಿತ್ರೀಕರಣ ಸೇರಿದಂತೆ ಸಿನಿಮಾ ಸಂಬಂಧಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಚಿತ್ರಮಂದಿರಗಳೂ ಬಂದ್ ಆಗಿವೆ. ಈಗ ಸಂಪೂರ್ಣ ಮನರಂಜನಾ ಮಾಧ್ಯಮವೇ ಸ್ಥಗಿತಗೊಳ್ಳುವ ಸೂಚನೆ ನೀಡಿದೆ.
ಕೆಲವು ನಟ-ನಟಿಯರು ಆರೋಗ್ಯ ಕಾಪಾಡಿಕೊಳ್ಳಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂದು ಜನರಿಗೆ ಮುಂಜಾಗ್ರತಾ ಕ್ರಮಗಳನ್ನು ತಿಳಿಸುತ್ತಿದ್ದಾರೆ. ಈ ನಡುವೆ 'ಹರಿವು', 'ನಾತಿಚರಾಮಿ' ಸಿನಿಮಾಗಳ ಖ್ಯಾತಿಯ ನಿರ್ದೇಶಕ ಮಂಸೋರೆ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದ್ದಾರೆ. ದೇಶದ ಕೊರೊನಾ ವೈರಸ್ ಮೊದಲ ಸಾವು ವರದಿಯಾಗಿದ್ದೇ ಕರ್ನಾಟಕದ ಕಲಬುರಗಿಯಲ್ಲಿ. ಅಲ್ಲಿ ಇನ್ನೂ ಕೆಲವು ಪ್ರಕರಣಗಳು ಪತ್ತೆಯಾಗಿವೆ. ಹೀಗಿದ್ದರೂ ಈ ಭಾಗದಲ್ಲಿ ಒಂದೇ ಒಂದು ಪರೀಕ್ಷಾ ಕೇಂದ್ರ ಇಲ್ಲದೆ ಇರುವುದು ಅವರಲ್ಲಿ ಕಳವಳ ಮೂಡಿಸಿದೆ.
|
ಮನುಷ್ಯರೆಂದು ಪರಿಗಣಿಸಿ
ಉತ್ತರ ಕರ್ನಾಟಕದ ಭಾಗದ ಜನತೆಯ ಬಗ್ಗೆ ಯಾಕಿಷ್ಟು ಬೇಜವಾಬ್ದಾರಿ ಧೋರಣೆ. ಮೊದಲ ಸಾವು ಸಂಭವಿಸಿರುವುದು ಕಲ್ಬುರ್ಗಿಯಲ್ಲಿ. ಮೊದಲ ಆದ್ಯತೆ ಆ ಭಾಗದ ಜನರಿಗೆ ಯಾಕಿಲ್ಲಾ. ಆ ಭಾಗದ ಜನರನ್ನು ಮನುಷ್ಯರೆಂದು ಯಾವಾಗ ಪರಿಗಣಿಸುತ್ತೀರಿ? ಎಂದು ಮಂಸೋರೆ ಪ್ರಶ್ನಿಸಿದ್ದಾರೆ.
ಚಿತ್ರೀಕರಣ ಬಂದ್
ಮಾರ್ಚ್ 19 ರಿಂದ ಮಾರ್ಚ್ 31ರವರೆಗೆ ಸಿನಿಮಾ, ಟಿ.ವಿ.ಶೋ ಮತ್ತು ವೆಬ್ ಸೀರೀಸ್ಗಳ ಚಿತ್ರೀಕರಣ ಸ್ಥಗಿತಗೊಳ್ಳಲಿವೆ. ವೆಸ್ಟರ್ನ್ ಇಂಡಿಯನ್ ಸಿನಿ ಎಂಪ್ಲಾಯೀಸ್ ಫೆಡರೇಷನ್, ಇಂಡಿಯನ್ ಫಿಲ್ಮ್ ಆಂಡ್ ಟೆಲಿವಿಷನ್ ಡೈರೆಕ್ಟರ್ಸ್ ಅಸೋಸಿಯೇಷನ್ ಮತ್ತು ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸಂಘಟನೆಗಳು ಈ ನಿರ್ಧಾರ ತೆಗೆದುಕೊಂಡಿವೆ.
ಚಿತ್ರೀಕರಣ ಬಂದ್
ಮಾರ್ಚ್ 19 ರಿಂದ ಮಾರ್ಚ್ 31ರವರೆಗೆ ಸಿನಿಮಾ, ಟಿ.ವಿ.ಶೋ ಮತ್ತು ವೆಬ್ ಸೀರೀಸ್ಗಳ ಚಿತ್ರೀಕರಣ ಸ್ಥಗಿತಗೊಳ್ಳಲಿವೆ. ವೆಸ್ಟರ್ನ್ ಇಂಡಿಯನ್ ಸಿನಿ ಎಂಪ್ಲಾಯೀಸ್ ಫೆಡರೇಷನ್, ಇಂಡಿಯನ್ ಫಿಲ್ಮ್ ಆಂಡ್ ಟೆಲಿವಿಷನ್ ಡೈರೆಕ್ಟರ್ಸ್ ಅಸೋಸಿಯೇಷನ್ ಮತ್ತು ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸಂಘಟನೆಗಳು ಈ ನಿರ್ಧಾರ ತೆಗೆದುಕೊಂಡಿವೆ.
ಚಿತ್ರರಂಗಕ್ಕೆ ಭಾರಿ ನಷ್ಟ
ಸಿನಿಮಾ ಪ್ರದರ್ಶನ ರದ್ದು ಮತ್ತು ಚಿತ್ರೀಕರಣ ಸ್ಥಗಿತದ ಕಾರಣ ಹಾಲಿವುಡ್ ಈಗಾಗಲೇ ಸುಮಾರು 7 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದೆ. ಚಿತ್ರಮಂದಿರಗಳು ಸ್ಥಗಿತಗೊಳ್ಳುವುದು ಮುಂದುವರಿದರೆ ಇನ್ನೂ 10 ಬಿಲಿಯನ್ ಡಾಲರ್ಗೂ ಅಧಿಕ ನಷ್ಟ ಅನುಭವಿಸಬೇಕಾಗುತ್ತದೆ. ಕನ್ನಡ ಚಿತ್ರರಂಗ ಕಳೆದ ಒಂದು ವಾರದಲ್ಲಿ ಸುಮಾರು 6-70ಕೋಟಿ ರೂದಷ್ಟು ನಷ್ಟ ಅನುಭವಿಸಿದ್ದು, ದಕ್ಷಿಣ ಚಿತ್ರರಂಗ 3,500 ಕೋಟಿ ರೂ ನಷ್ಟ ಅನುಭವಿಸುವ ಭೀತಿಯಲ್ಲಿದೆ.