Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ'ದ ವಿರುದ್ಧ ನಿರ್ದೇಶಕ ಮಂಸೋರೆ ಬೇಸರ
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೆ ತಿಂಗಳು ಫೆಬ್ರವರಿ 26ರಿಂದ ಮಾರ್ಚ್ 4 ವರೆಗೆ ಒಟ್ಟು 7 ದಿನಗಳಕಾಲ ಚಲನಚಿತ್ರೋತ್ಸವ ನಡೆಯಲಿದೆ. ಆದರೆ ಇದರ ನಡವೆ ಈಗ ಚಿತ್ರೋತ್ಸವದ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ.
ಹೌದು, ನಿರ್ದೇಶಕ ಮಂಸೋರೆ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಚಲನಚಿತ್ರೋತ್ಸವದಲ್ಲಿ ಕನ್ನಡದ ಅದ್ಭುತ ಚಿತ್ರಗಳಾದ ಗಂಟುಮೂಟೆ ಮತ್ತು ಅರಿಷಡ್ವರ್ಗ ಈ ಎರಡು ಚಿತ್ರಗಳನ್ನು ಕಡೆಗಣಿಸಿರುವ ಬಗ್ಗೆ ಬೇಸರ ಹೊರಹಾಕಿ ದೀರ್ಘವಾಗಿ ಬರೆದುಕೊಂಡಿದ್ದಾರೆ.
ಎಷ್ಟೋ ಹೊಸ ತಲೆಮಾರಿನ ಯುವ ನಿರ್ದೇಶಕರಿಗೆ ಸ್ಫೂರ್ತಿ ನೀಡುವ ವೇದಿಕೆ ಈ ಚಲನಚಿತ್ರೋತ್ಸವ. ಇದು ಬೆಂಗಳೂರಿನ ಹೆಮ್ಮೆ. ಆದರೆ ಈ ಬಾರಿ ಚಿತ್ರೋತ್ಸವದಲ್ಲಿ ಕನ್ನಡದ ಅತ್ತ್ಯುತ್ತಮ ಸಿನೆಮಾಗಳನ್ನು ಕಡೆಗಣಿಸಿರುವುದು ಬೇಸರತಂದಿದೆ ಎಂದು ಹೇಳಿದ್ದಾರೆ.
ಮಂಸೋರೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು ಹೀಗೆ, "ನನಗೆ ಸಿನೆಮಾ ನಿರ್ದೇಶನದ ಬಗ್ಗೆ ಆಸಕ್ತಿ ಬೆಳೆದಿದ್ದು, ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಿಲು ಪ್ರೇರೇಪಿಸಿದ್ದು, ಯಾರ ಬಳಿಯೂ ಸಹ ನಿರ್ದೇಶಕನಾಗಿ ಕೆಲಸ ಮಾಡಿ ಅನುಭವವಿಲ್ಲದ ನನಗೆ ನಿರ್ದೇಶಕನಾಗಲು ಧೈರ್ಯ ತುಂಬಿದ್ದು ಬೆಂಗಳೂರು ಚಲಚಿತ್ರೋತ್ಸವ" ಎಂದು ಹೇಳಿದ್ದಾರೆ.
ಇನ್ನು "ಹೊಸ ತಲೆಮಾರಿನ ಅದೆಷ್ಟೋ ಯುವ ನಿರ್ದೇಶಕರಿಗೆ ಸ್ಪೂರ್ತಿ ನೀಡುವ ವೇದಿಕೆ ಈ ಚಲನಚಿತ್ರೋತ್ಸವ. ಇದು ನಮ್ಮ ಬೆಂಗಳೂರಿನ ಹೆಮ್ಮೆ. ಇಂತಹ ಚಿತ್ರೋತ್ಸವದಲ್ಲಿ ಈ ಬಾರಿ ಕನ್ನಡದ ಎರಡು ಅತ್ತ್ಯುತ್ತಮ ಸಿನೆಮಾಗಳನ್ನು ಕನ್ನಡ ಸಿನೆಮಾ ಸ್ಪರ್ಧೆ ಇಂದ ಹೊರಗಿಟ್ಟಿರುವುದು ವಯಕ್ತಿಕವಾಗಿ ನನಗೆ ಬೇಸರ ತರಿಸಿದೆ.
ಈ ಎರಡೂ ಸಿನಿಮಾಗಳು ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದವು. ಆದರೆ ತಮ್ಮ ಸ್ವಂತ ನೆಲದಲ್ಲೇ ಕಡೆಗಣಿಸಲ್ಪಟ್ಟಿದ" ಎಂದು ಹೇಳಿಕೊಂಡಿದ್ದಾರೆ.
ಅಂದ್ಹಾಗೆ ಗಂಟುಮೂಟೆ ಮತ್ತು ಅರಿಷಡ್ವರ್ಗ ಚಿತ್ರಗಳು ಹಲವು ಚಿತ್ರೋತ್ಸವಕ್ಕೆ ಆಯ್ಕೆಯಾಗಿದ್ದ ಕನ್ನಡದ ಚಿತ್ರಗಳು. ಆದರೆ ಇಂತಹ ಅದ್ಭುತ ಚಿತ್ರಗಳನ್ನು ಕನ್ನಡದಲ್ಲಿಯೆ ಕಡೆಗಣಿಸುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.
12ನೇ ಚಿತ್ರೋತ್ಸವ ಇದಾಗಿದ್ದು ಈ ಬಾರಿ 50 ದೇಶಗಳ 200 ಚಿತ್ರಗಳು ಪ್ರದರ್ಶನವಾಗಲಿದೆ. ಒಟ್ಟು 14 ವಿಭಾಗಗಳಿರುತ್ತವೆ. ವಿಶ್ವ ಸಿನಿಮಾ, ಚಿತ್ರ ಭಾರತಿ, ಭಾರತೀಯ ಚಿತ್ರಗಳ ಸ್ಪರ್ಧಾ ವಿಭಾಗ, ಏಷಿಯನ್ ಸಿನಿಮಾ, ಆತ್ಮಚರಿತ್ರೆ ಆಧಾರಿತ ಸಿನಿಮಾಗಳು, ಸಾಕ್ಷ್ಯಚಿತ್ರಗಳನ್ನು ವೀಕ್ಷಿಸಬಹುದಾಗಿದೆ.