Don't Miss!
- News ತುಮಕೂರಿನಲ್ಲಿ ತಣ್ಣಗಾಯ್ತಾ ಬಿಜೆಪಿ ಬಂಡಾಯ; ಮಾಧುಸ್ವಾಮಿಗೆ ಬಿಜೆಪಿ ಕೊಟ್ಟ ಆಫರ್ ಏನು ಗೊತ್ತಾ?
- Finance ಟರ್ಮ್ ಇನ್ಶೂರೆನ್ಸ್ ಖರೀದಿಸುವಾಗ ಈ 5 ವಿಷಯ ಅರಿತುಕೊಳ್ಳಿ
- Technology Oppo: ಒಪ್ಪೋ A3 ಪ್ರೊ ಸ್ಮಾರ್ಟ್ಫೋನ್ ಲಾಂಚ್! 67W ಫಾಸ್ಟ್ ಚಾರ್ಜಿಂಗ್ ಸೌಲಭ್ಯ... ಬೆಲೆ ಎಷ್ಟು?
- Sports RCB vs SRH ಪಂದ್ಯದಿಂದ ನಾನೇ ಹಿಂದೆ ಸರಿದೆ ಎಂದ ಗ್ಲೆನ್ ಮ್ಯಾಕ್ಸ್ವೆಲ್; ಕಾರಣವೇನು?
- Automobiles ಹಣದ ವಿಚಾರವಾಗಿ ಜಗಳ: ಬರೋಬ್ಬರಿ 1 ಕೋಟಿ ರೂ. ಮೌಲ್ಯದ ಕಾರಿಗೆ ಬೆಂಕಿಯಿಟ್ಟ ಸ್ನೇಹಿತರು
- Lifestyle ಒಂದೇ ಒಂದು ಟೊಮೆಟೋ ಇಲ್ಲದೆ ಈ ಚಟ್ನಿ ಮಾಡಿ..! ಸಿಕ್ಕಾಪಟ್ಟೆ ರುಚಿ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ, ಡಿಸೈನರ್ ಮಸ್ತಾನ್ ಕೊರೊನಾಗೆ ಬಲಿ
ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿಗೆ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಸ್ಯಾಂಡಲ್ ವುಡ್ ನಿಂದ ಮತ್ತೊಂದು ಆಘಾತಕಾರ ಸುದ್ದಿ ಹೊರಬಂದಿದ್ದು, ಖ್ಯಾತ ಡಿಸೈನರ್ ಮತ್ತು ನಿರ್ದೇಶಕ ಮಸ್ತಾನ್ ಕೊರೊನಾಗೆ ಬಲಿಯಾಗಿದ್ದಾರೆ.
ನಿರ್ದೇಶಕ ಮಸ್ತಾನ್ ಇತ್ತೀಚಿಗೆ ಕೊರೊನಾ ಪಾಸಿಟಿವ್ನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೆಸರು ಘಟ್ಟ ಬಳಿ ಇರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನ ರಾತ್ರಿ (ಏಪ್ರಿಲ್ 21) ನಿಧನರಾಗಿದ್ದಾರೆ.
ಕೊರೊನಾ ಸೋಂಕಿಗೆ ಬಲಿಯಾದ ಚಂದನವನದ ಯುವ ನಟ, ನಿರ್ಮಾಪಕ ಅರ್ಜುನ್ ಮಂಜುನಾಥ್
ಮಸ್ತಾನ್ ಅವರಿಗೆ 63 ವರ್ಷ ವಯಸ್ಸಾಗಿತ್ತು. ಸುಮಾರು 4 ದಶಕಗಳಿಂದ ಚಿತ್ರರಂಗದಲ್ಲಿ ಪೋಸ್ಟರ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದ ಮಸ್ತಾನ್ 2000ಕ್ಕೂ ಅಧಿಕ ಚಿತ್ರಗಳಿಗೆ ಡಿಸೈನರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಡಿಸೈನರ್ ಮಾತ್ರವಲ್ಲದೇ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದಾರೆ.
ಮೋಹನ್ ನಟನೆಯ ಶುಕ್ಲಂಬರಧರಂ, ಕಲ್ಲೇಶಿ ಮಲ್ಲಿಶಿ, ಮತ್ತು ನೀತು ಶೆಟ್ಟಿ, ನೇಹಾ ಪಾಟಿಲ್ ನಟನೆಯ ಸಿತಾರ ಸಿನಿಮಾಗಳಿಗೆ ಮಸ್ತಾನ್ ಆಕ್ಷನ್ ಕಟ್ ಹೇಳಿದ್ದಾರೆ. ಮಸ್ತಾನ್ ನಿಧನಕ್ಕೆ ಸ್ನೇಹಿತರ, ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
Recommended Video
ಇತ್ತೀಚಿಗಷ್ಟೆ ಸ್ಯಾಂಡಲ್ವುಡ್ನ ಯುವ ನಿರ್ಮಾಪಕ ಮತ್ತು ನಟ ಅರ್ಜುನ್ ಮಂಜುನಾಥ್ ಕೋವಿಡ್ಗೆ ಬಲಿಯಾಗಿದ್ದರು. ಇದೀಗ ಚಂದನವನದ ನಿರ್ದೇಶಕ ಮಸ್ತಾನ್ ಅವರನ್ನು ಕಳೆದುಕೊಂಡಿರುವುದು ನಿಜಕ್ಕೂ ದುಃಖದ ವಿಷಯ.