Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ರಕರ್ತೆ ಜೊತೆ ಟೋಪಿವಾಲ ನಿರ್ದೇಶಕ ಶ್ರೀನಿ ವಿವಾಹ
ಕನ್ನಡದ ಪ್ರತಿಭಾವಂತ ನಿರ್ದೇಶಕ ಶ್ರೀನಿ ಅಲಿಯಾಸ್ ಎಮ್ ಜೆ ಶ್ರೀನಿವಾಸ್ ಮದುವೆಗೆ ಸಿದ್ಧವಾಗಿದ್ದಾರೆ. 'ಶ್ರೀನಿವಾಸ ಕಲ್ಯಾಣ' ಸಿನಿಮಾ ನಿರ್ದೇಶನ ಮಾಡಿದ್ದ ಇವರು ಈಗ ತಮ್ಮ ಕಲ್ಯಾಣ ಮಾಡಿಕೊಳ್ಳುತ್ತಿದ್ದಾರೆ.
ಪತ್ರಕರ್ತೆ ಶ್ರುತಿ ಎಂಬುವವರ ಜೊತೆಗೆ ಶ್ರೀನಿ ವಿವಾಹ ನಡೆಯಲಿದೆ. ಶ್ರೀನಿ ಹಾಗೂ ಶ್ರುತಿ ಇಬ್ಬರದ್ದು ಲವ್ ಮ್ಯಾರೇಜ್. ತುಂಬ ವರ್ಷಗಳಿಂದ ಇಬ್ಬರು ಪರಿಚಯ ಹೊಂದಿದ್ದು, ಒಳ್ಳೆಯ ಸ್ನೇಹ ಇತ್ತು. ಬಳಿಕ ಆ ಸ್ನೇಹ ಪ್ರೇಮಕ್ಕೆ ತಿರುಗಿ ಮದುವೆಯ ಹಂತಕ್ಕೆ ಬಂದಿದೆ.
ಡಾ ರಾಜ್ ಮೊಮ್ಮಗನ ಆರತಕ್ಷತೆಯಲ್ಲಿ ಕಾಣಿಸಿಕೊಂಡ ಸರ್ಪ್ರೈಸ್ ಅತಿಥಿಗಳು
ಶ್ರೀನಿ ಹಾಗೂ ಶ್ರುತಿ ಪ್ರೀತಿಗೆ ಇಬ್ಬರ ಮನೆಯಲ್ಲಿ ಸಮ್ಮತಿ ಸೂಚಿಸಿ, ಮದುವೆ ಮಾಡುತ್ತಿದ್ದಾರೆ. ಪತ್ರಕರ್ತೆ ಶ್ರುತಿ ಒಳ್ಳೆಯ ಬರಹಗಾರ್ತಿಯಾಗಿದ್ದು, ಅವರ ಬರವಣಿಗೆ ಶ್ರೀನಿಗೆ ತುಂಬ ಇಷ್ಟವಂತೆ.
ಇದೇ ತಿಂಗಳ 30 ರಂದು ಶ್ರೀನಿ ಹಾಗೂ ಶ್ರುತಿ ವಿವಾಹ ನೆರವೇರಲಿದೆ. ಮೈಸೂರಿನಲ್ಲಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ.
ಅಂದಹಾಗೆ, ನಟ ಉಪೇಂದ್ರ ಜೊತೆಗೆ ಕೆಲಸ ಮಾಡುತ್ತಿದ್ದ ಶ್ರೀನಿ 'ಟೋಪಿವಾಲ' ಸಿನಿಮಾದ ಮೂಲಕ ನಿರ್ದೇಶಕರಾದರು. ಬಳಿಕ 'ಶ್ರೀನಿವಾಸ ಕಲ್ಯಾಣ' ಹಾಗೂ 'ಬೀರ್ ಬಲ್' ಚಿತ್ರಗಳಲ್ಲಿ ನಟನೆ ಹಾಗೂ ನಿರ್ದೇಶನ ಎರಡನ್ನು ಮಾಡಿದರು. ಸದ್ಯ, 'ರಂಗನಾಯಕಿ' ಚಿತ್ರದಲ್ಲಿ ಇವರು ನಟಿಸುತ್ತಿದ್ದಾರೆ.