Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ರಕರ್ತೆ ಜೊತೆ ಟೋಪಿವಾಲ ನಿರ್ದೇಶಕ ಶ್ರೀನಿ ವಿವಾಹ
ಕನ್ನಡದ ಪ್ರತಿಭಾವಂತ ನಿರ್ದೇಶಕ ಶ್ರೀನಿ ಅಲಿಯಾಸ್ ಎಮ್ ಜೆ ಶ್ರೀನಿವಾಸ್ ಮದುವೆಗೆ ಸಿದ್ಧವಾಗಿದ್ದಾರೆ. 'ಶ್ರೀನಿವಾಸ ಕಲ್ಯಾಣ' ಸಿನಿಮಾ ನಿರ್ದೇಶನ ಮಾಡಿದ್ದ ಇವರು ಈಗ ತಮ್ಮ ಕಲ್ಯಾಣ ಮಾಡಿಕೊಳ್ಳುತ್ತಿದ್ದಾರೆ.
ಪತ್ರಕರ್ತೆ ಶ್ರುತಿ ಎಂಬುವವರ ಜೊತೆಗೆ ಶ್ರೀನಿ ವಿವಾಹ ನಡೆಯಲಿದೆ. ಶ್ರೀನಿ ಹಾಗೂ ಶ್ರುತಿ ಇಬ್ಬರದ್ದು ಲವ್ ಮ್ಯಾರೇಜ್. ತುಂಬ ವರ್ಷಗಳಿಂದ ಇಬ್ಬರು ಪರಿಚಯ ಹೊಂದಿದ್ದು, ಒಳ್ಳೆಯ ಸ್ನೇಹ ಇತ್ತು. ಬಳಿಕ ಆ ಸ್ನೇಹ ಪ್ರೇಮಕ್ಕೆ ತಿರುಗಿ ಮದುವೆಯ ಹಂತಕ್ಕೆ ಬಂದಿದೆ.
ಡಾ ರಾಜ್ ಮೊಮ್ಮಗನ ಆರತಕ್ಷತೆಯಲ್ಲಿ ಕಾಣಿಸಿಕೊಂಡ ಸರ್ಪ್ರೈಸ್ ಅತಿಥಿಗಳು
ಶ್ರೀನಿ ಹಾಗೂ ಶ್ರುತಿ ಪ್ರೀತಿಗೆ ಇಬ್ಬರ ಮನೆಯಲ್ಲಿ ಸಮ್ಮತಿ ಸೂಚಿಸಿ, ಮದುವೆ ಮಾಡುತ್ತಿದ್ದಾರೆ. ಪತ್ರಕರ್ತೆ ಶ್ರುತಿ ಒಳ್ಳೆಯ ಬರಹಗಾರ್ತಿಯಾಗಿದ್ದು, ಅವರ ಬರವಣಿಗೆ ಶ್ರೀನಿಗೆ ತುಂಬ ಇಷ್ಟವಂತೆ.
ಇದೇ ತಿಂಗಳ 30 ರಂದು ಶ್ರೀನಿ ಹಾಗೂ ಶ್ರುತಿ ವಿವಾಹ ನೆರವೇರಲಿದೆ. ಮೈಸೂರಿನಲ್ಲಿ ಮದುವೆ ಕಾರ್ಯಕ್ರಮಗಳು ನಡೆಯಲಿದೆ.
ಅಂದಹಾಗೆ, ನಟ ಉಪೇಂದ್ರ ಜೊತೆಗೆ ಕೆಲಸ ಮಾಡುತ್ತಿದ್ದ ಶ್ರೀನಿ 'ಟೋಪಿವಾಲ' ಸಿನಿಮಾದ ಮೂಲಕ ನಿರ್ದೇಶಕರಾದರು. ಬಳಿಕ 'ಶ್ರೀನಿವಾಸ ಕಲ್ಯಾಣ' ಹಾಗೂ 'ಬೀರ್ ಬಲ್' ಚಿತ್ರಗಳಲ್ಲಿ ನಟನೆ ಹಾಗೂ ನಿರ್ದೇಶನ ಎರಡನ್ನು ಮಾಡಿದರು. ಸದ್ಯ, 'ರಂಗನಾಯಕಿ' ಚಿತ್ರದಲ್ಲಿ ಇವರು ನಟಿಸುತ್ತಿದ್ದಾರೆ.