Don't Miss!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ಧಾರ್ಥ ಮಾಡಿದ್ದ ಸಹಾಯ ನೆನೆದ ನಾಗತಿಹಳ್ಳಿ ಚಂದ್ರಶೇಖರ್
ಕಾಫಿ ಕಿಂಗ್ ಸಿದ್ಧಾರ್ಥ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಹ ಸಿದ್ಧಾರ್ಥ ಸಹಾಯವನ್ನು ನೆನೆದಿದ್ದಾರೆ.
ಟ್ವಿಟ್ಟರ್ ನಲ್ಲಿ ಸಿದ್ಧಾರ್ಥ ಬಗ್ಗೆ ಬರೆದುಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್ ''ಗೆಳೆಯರೇ, ಗೌತಮನ ಹೆಸರಿಟ್ಟುಕೊಂಡು ನೀವು ಹೀಗೆ ಮಾಡಬಹುದೇ? ಬದುಕಲು ನೂರು ದಾರಿಗಳಿರಲಿಲ್ಲವೇ?'' ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ರಾಜ್ ಕುಟುಂಬದ ಕಷ್ಟದ ದಿನದಲ್ಲಿ ಕೈ ಹಿಡಿದಿದ್ದ ಸಿದ್ಧಾರ್ಥ್
ಸಿದ್ಧಾರ್ಥ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಕೂಡ ಒಮ್ಮೆ ಸಿದ್ಧಾರ್ಥ ಅವರ ಸಹಾಯ ಪಡೆದಿದ್ದರಂತೆ. 'ಅಮೃತಧಾರೆ' ಸಿನಿಮಾ ಚಿತ್ರೀಕರಣವನ್ನು ಗ್ಲೊಬಲ್ ವಿಲೇಜ್ ನಲ್ಲಿ ಮಾಡಬೇಕಾಗಿತ್ತು. ಆಗ ಅದರ ವ್ಯವಸ್ಥೆಯನ್ನು ಸಿದ್ದಾರ್ಥ ಮಾಡಿಕೊಟ್ಟಿದ್ದರು.
ಸಿನಿಮಾ ಚಿತ್ರೀಕರಣಕ್ಕಾಗಿ ವ್ಯವಸ್ಥೆ ಮಾಡಿಕೊಟ್ಟಿದ್ದ ಸಿದ್ಧಾರ್ಥ ಅದಕ್ಕೆ ಯಾವುದೇ ಹಣ ತೆಗೆದುಕೊಳ್ಳಲಿಲ್ಲವಂತೆ. ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ಸಿನಿಮಾ ಮೇಲಿನ ಪ್ರೀತಿಯಿಂದ ಉಚಿತವಾಗಿ ಈ ಅವಕಾಶ ನೀಡಿದ್ದರಂತೆ.
ಕಾಫಿ ಕಿಂಗ್ ಸಿದ್ಧಾರ್ಥ ನಿಧನಕ್ಕೆ ಕಂಬನಿ ಮಿಡಿದ ಸ್ಯಾಂಡಲ್ ವುಡ್ ಸ್ಟಾರ್ಸ್
ಈ ರೀತಿ ತಮಗೆ ಸಹಾಯ ಮಾಡಿದ್ದ ಸಿದ್ಧಾರ್ಥರನ್ನು ನಾಗತಿಹಳ್ಳಿ ಚಂದ್ರಶೇಖರ್ ನೆನಪು ಮಾಡಿಕೊಳ್ಳುವ ಮೂಲಕ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.