Don't Miss!
- News Bengaluru Heat Wave: ಮುಂದಿನ ಒಂದು ವಾರ 'ರಣಬಿಸಿಲು': ಏ.2 ತನಕ 'ಶಾಖ'ದ ಅಲೆ ಮುನ್ಸೂಚನೆ
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಒಬ್ಬ ಪರಿಪೂರ್ಣ ನಟ ಎಂದವರು ಯಾರು?
ಚಂದನವನದ ಹಿರಿಯ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ತುಂಬಾ ಹೊಗಳಿದ್ದಾರೆ.
ನಟ ಕಿಚ್ಚ ಸುದೀಪ್ ಅವರ ಪರಿಪೂರ್ಣ ನಟನೆ ಹಾಗೂ ಮಾತುಗಳನ್ನು ನೋಡಿದ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು 'ಸುದೀಪ್ ಒಬ್ಬ ಪರಿಪೂರ್ಣ ನಟ ಹಾಗೂ ಮಾತಿನ ಮೋಡಿಗಾರ ಮತ್ತು ಅವರ ಭಾಷಾ ಶೈಲಿ ಎಂತಹದು, ಎಂಬುದು ಕನ್ನಡದ 'ಬಿಗ್ ಬಾಸ್ 3' ಶೋ ನೋಡುತ್ತಿದ್ದರೆ ತಿಳಿಯುತ್ತದೆ' ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[ಹೆಜ್ಜೇನು ದಾಳಿ: ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆಸ್ಪತ್ರೆಗೆ ದಾಖಲು]
'ಬಿಗ್ ಬಾಸ್ ನಲ್ಲಿ ಕಿಚ್ಚ ಸುದೀಪ್ ಅವರ ಭಾಷೆ ಮಾಗುತ್ತ ಪ್ರಬುದ್ಧವೂ, ಆಕರ್ಷಕವಾಗಿ ಆಗುತ್ತದೆ, ವಿಶೇಷವಾಗಿ ನನಗೆ ಸುದೀಪ್ ಅವರ ಆ ವಿಲಕ್ಷಣ ಸ್ವರ ತುಂಬಾ ಇಷ್ಟ' ಎಂದು ಹಿರಿಯ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ ಹೇಳಿಕೊಂಡಿದ್ದಾರೆ.
ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಮತ್ತು ನಟ ಕಿಚ್ಚ ಸುದೀಪ್ ಅವರು 'ಮಾತಾಡ್ ಮಾತಾಡ್ ಮಲ್ಲಿಗೆ' ಚಿತ್ರದಲ್ಲಿ ಒಂದಾಗಿ ಕೆಲಸ ಮಾಡಿದ್ದರು. ಈ ಚಿತ್ರದಲ್ಲಿ ನಟ ಸುದೀಪ್ ಅವರು ನಕ್ಸಲೈಟ್ ಪಾತ್ರದಲ್ಲಿ ಮಿಂಚಿದ್ದರು.[ಸ್ಟಾರ್ ನಟರ ಅಪೂರ್ವ ಮಿಲನಕ್ಕೆ, ಸಾಕ್ಷಿಯಾಗಲಿರುವ ಬಿಗ್ ವೇದಿಕೆ.! ]
ಅಂದಹಾಗೆ ನಿರ್ದೇಶಕರು ಸದ್ಯಕ್ಕೆ 'ಇಷ್ಟಕಾಮ್ಯ' ಚಿತ್ರದಲ್ಲಿ ಬ್ಯುಸಿಯಾದರೆ, ನಟ ಕಿಚ್ಚ ಸುದೀಪ್ ಅವರು ಎರಡು ಸಿನಿಮಾಗಳಲ್ಲಿ ಮತ್ತು ಕಿರುತೆರೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.