Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ಒಬ್ಬ ಪರಿಪೂರ್ಣ ನಟ ಎಂದವರು ಯಾರು?
ಚಂದನವನದ ಹಿರಿಯ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ತುಂಬಾ ಹೊಗಳಿದ್ದಾರೆ.
ನಟ ಕಿಚ್ಚ ಸುದೀಪ್ ಅವರ ಪರಿಪೂರ್ಣ ನಟನೆ ಹಾಗೂ ಮಾತುಗಳನ್ನು ನೋಡಿದ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು 'ಸುದೀಪ್ ಒಬ್ಬ ಪರಿಪೂರ್ಣ ನಟ ಹಾಗೂ ಮಾತಿನ ಮೋಡಿಗಾರ ಮತ್ತು ಅವರ ಭಾಷಾ ಶೈಲಿ ಎಂತಹದು, ಎಂಬುದು ಕನ್ನಡದ 'ಬಿಗ್ ಬಾಸ್ 3' ಶೋ ನೋಡುತ್ತಿದ್ದರೆ ತಿಳಿಯುತ್ತದೆ' ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[ಹೆಜ್ಜೇನು ದಾಳಿ: ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆಸ್ಪತ್ರೆಗೆ ದಾಖಲು]
'ಬಿಗ್ ಬಾಸ್ ನಲ್ಲಿ ಕಿಚ್ಚ ಸುದೀಪ್ ಅವರ ಭಾಷೆ ಮಾಗುತ್ತ ಪ್ರಬುದ್ಧವೂ, ಆಕರ್ಷಕವಾಗಿ ಆಗುತ್ತದೆ, ವಿಶೇಷವಾಗಿ ನನಗೆ ಸುದೀಪ್ ಅವರ ಆ ವಿಲಕ್ಷಣ ಸ್ವರ ತುಂಬಾ ಇಷ್ಟ' ಎಂದು ಹಿರಿಯ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ ಹೇಳಿಕೊಂಡಿದ್ದಾರೆ.
ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಮತ್ತು ನಟ ಕಿಚ್ಚ ಸುದೀಪ್ ಅವರು 'ಮಾತಾಡ್ ಮಾತಾಡ್ ಮಲ್ಲಿಗೆ' ಚಿತ್ರದಲ್ಲಿ ಒಂದಾಗಿ ಕೆಲಸ ಮಾಡಿದ್ದರು. ಈ ಚಿತ್ರದಲ್ಲಿ ನಟ ಸುದೀಪ್ ಅವರು ನಕ್ಸಲೈಟ್ ಪಾತ್ರದಲ್ಲಿ ಮಿಂಚಿದ್ದರು.[ಸ್ಟಾರ್ ನಟರ ಅಪೂರ್ವ ಮಿಲನಕ್ಕೆ, ಸಾಕ್ಷಿಯಾಗಲಿರುವ ಬಿಗ್ ವೇದಿಕೆ.! ]
ಅಂದಹಾಗೆ ನಿರ್ದೇಶಕರು ಸದ್ಯಕ್ಕೆ 'ಇಷ್ಟಕಾಮ್ಯ' ಚಿತ್ರದಲ್ಲಿ ಬ್ಯುಸಿಯಾದರೆ, ನಟ ಕಿಚ್ಚ ಸುದೀಪ್ ಅವರು ಎರಡು ಸಿನಿಮಾಗಳಲ್ಲಿ ಮತ್ತು ಕಿರುತೆರೆಯಲ್ಲಿ ಸಖತ್ ಬ್ಯುಸಿಯಾಗಿದ್ದಾರೆ.