Don't Miss!
- News ಕಾಂಗ್ರೆಸ್ನಿಂದಲೇ 'ನೇಹಾ ಕೊಲೆ' ತನಿಖೆ ದಾರಿ ತಪ್ಪಿಸಲು ಯತ್ನ: ತಂದೆಯನ್ನೇ ಕೊಲ್ಲಲು ಹೋಗಿದ್ದ ಫಯಾಜ್: ನಿರಂಜನ್ ಹಿರೇಮಠ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುದ್ದು ಮಗನ ಮೊದಲ ಫೋಟೋ ಹಂಚಿಕೊಂಡ ನಿರ್ದೇಶಕ ಪವನ್ ಒಡೆಯರ್
ಸ್ಯಾಂಡಲ್ ವುಡ್ ನ ನಿರ್ದೇಶಕ ಪವನ್ ಒಡೆಯರ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಪವನ್ ಪತ್ನಿ ನಟಿ ಅಪೇಕ್ಷಾ ಪುರೋಹಿತ್ ಡಿಸೆಂಬರ್ 10 ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಗಂಡು ಮಗುವಿನ ತಂದೆಯಾದ ಸಂತಸವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಿನ್ನೆ ಬೆಳಗ್ಗೆ ಪತ್ನಿ ಮತ್ತು ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಶೇರ್ ಮಾಡಿದ್ದ ಪವನ್ ರಾತ್ರಿ ಮಗನ ಮೊದಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವಿಶೇಷ ಎಂದರೆ ಡಿಸೆಂಬರ್ 10 ಪವನ್ ಒಡೆಯರ್ ಗೆ ಹುಟ್ಟುಹಬ್ಬದ ಸಂಭ್ರಮ. ತನ್ನ ಹುಟ್ಟುಹಬ್ಬದ ದಿನವೇ ಮಗ ಜನಿಸಿರುವುದು ಡಬಲ್ ಸಂತಸಕ್ಕೆ ಕಾರಣವಾಗಿದೆ. ಅಪ್ಪನಿಗೆ ಮಗ ವಿಶ್ ಮಾಡುತ್ತಿರುವ ಟೀ ಶರ್ಟ್ ಧರಿಸಿರುವ ಮುದ್ದು ಮಗುವಿನ ಫೋಟೋವನ್ನು ಪವನ್ ಶೇರ್ ಮಾಡಿದ್ದಾರೆ.
ಜನ್ಮ ದಿನಕ್ಕೆ ಅದ್ಭುತ ಉಡುಗೊರೆ; ತಂದೆಯಾದ ಸಂಭ್ರಮದಲ್ಲಿ ನಿರ್ದೇಶಕ ಪವನ್ ಒಡೆಯರ್
ಮುದ್ದಾದ ಮಗುವಿನ ಫೋಟೋ ವೈರಲ್
ಅಪ್ಪನಿಗೆ ಹುಟ್ಟುಹಬ್ಬದ ವಿಶ್ ಮಾಡುತ್ತಿರುವ ಮಗನ ಮೊದಲ ಫೋಟೋ ವನ್ನು ಪವನ್ ಒಡಯರ್ ಹಂಚಿಕೊಂಡಿದ್ದಾರೆ. 'ಹುಟ್ಟುಹಬ್ಬದ ಶುಭಾಶಯಗಳು ಅಪ್ಪ. ನಾನು ಯಾವಾಗಲು ನಿಮಗೆ ಉತ್ತರ ಉಡುಗೊರೆಯಾಗಿರುತ್ತೇನೆ' ಎಂದು ಟೀ ಶರ್ಟ್ ಮೇಲೆ ಬರೆಯಲಾಗಿದೆ. ಈ ಫೋಟೋಗೆ ಅಭಿಮಾನಿಗಳು ಮತ್ತು ಸಿನಿತಾರೆಯರಿಂದ ಸಿಕ್ಕಾಪಟ್ಟೆ ಮೆಚ್ಚುಗೆ ವ್ಯಕ್ತವಾಗಿದೆ.
ನೀ ಆಗಮಿಸು ಕಾಯುತ್ತಿದೆ ನನ್ನ ತೋಳು; ಮುದ್ದು ಮಗುಗೆ ಪವನ್ ಒಡೆಯರ್ ಸಾಂಗ್
ವಿಶ್ವದ ಅತ್ಯಂತ ಅದ್ಭುತ ಉಡುಗೊರೆ
ಗಂಡು ಮಗುವಾದ ಸಂತಸವನ್ನು ಪವನ್ ಮೊದಲು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, 'ನನ್ನ ಜನ್ಮ ದಿನಕ್ಕೆ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ. ಜೈ ಚಾಮುಂಡೇಶ್ವರಿ' ಎಂದು ಬರೆದುಕೊಂಡಿದ್ದಾರೆ.
2018ರಲ್ಲಿ ಮದುವೆಯಾಗಿದ್ದ ಜೋಡಿ
ಪವನ್ ಒಡೆಯರ್ ಮತ್ತು ಅಪೇೆಕ್ಷ ಪುರೋಹಿತ್ ಇಬ್ಬರು 2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿ ಇಬ್ಬರ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಅಪೇಕ್ಷ ಪುರೋಹಿತ್ ಕನ್ನಡ ಕಿರುತೆರೆ ನಟಿಯಾಗಿ ಖ್ಯಾತಿಗಳಿಸಿದ್ದರು. ತ್ರಿವೇಣಿ ಸಂಗಮ, ಸೊಸೆ ತಂದ ಸೌಭಾಗ್ಯ, ಸಾಗುತಾ ದೂರ ದೂರ, ಮರಳಿ ಬಂದಳು ಸೀತೆ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕಿರುತೆರೆ ಮಾತ್ರವಲ್ಲದೆ ಕಾಫಿ ತೋಟ ಸಿನಿಮಾದಲ್ಲೂ ಬಣ್ಣ ಹಚ್ಚುವ ಮೂಲಕ ಬೆಳ್ಳಿತೆರೆ ಮೇಲು ಮಿಂಚಿದ್ದಾರೆ.
Recommended Video
ಸೀಮಂತ ಸಂಭ್ರಮದ ಫೋಟೋಗಳು ವೈರಲ್ ಆಗಿತ್ತು
ಕೆಲವು ದಿನಗಳ ಅಪೇಕ್ಷ ಸೀಮಂತ ಸಂಭ್ರಮದ ಫೋಟೋಗಳನ್ನು ಪವನ್ ಒಡೆಯರ್ ಹಂಚಿಕೊಂಡಿದ್ದರು. ಜೊತೆಗೆ ಸುಂದರ ಫೋಟೋಶೂಟ್ ಕೂಡ ಮಾಡಿಸಿದ್ದರು. ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆದ ಸೀಮಂತ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.