Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ರಾಜ್ ಕುಮಾರ್ ಸಿನಿಮಾಗೆ ಹಾಡು ಬರೆಯುವ ಸುವರ್ಣಾವಕಾಶ
Recommended Video
ತುಂಬ ಜನ ಯುವ ಸಾಹಿತಿಗಳು ಈಗ ಚಿತ್ರರಂಗಕ್ಕೆ ಬರುತ್ತಿದ್ದಾರೆ. ನಮ್ಮ ಜೊತೆಗೆ ಇರುವ ಅನೇಕರು ಹಾಡು ಬರೆಯುವ ಹವ್ಯಾಸ ಹೊಂದಿರುತ್ತಾರೆ. ಒಳ್ಳೆ ಒಳ್ಳೆಯ ಸಾಲುಗಳನ್ನು ಬರೆಯುವ ಕೆಲವರಿಗೆ ಒಳ್ಳೆಯ ಅವಕಾಶಗಳು ಮಾತ್ರ ಸಿಕ್ಕಿರುವುದಿಲ್ಲ. ಆದರೆ ಈಗ ಅಂತಹ ಯುವ ಚಿತ್ರಸಾಹಿತಿಗಳಿಗೆ ಒಂದು ಸುವರ್ಣಾವಕಾಶ ಬಂದಿದೆ.
'ನಟ ಸಾರ್ವಭೌಮ' ಚಿತ್ರದ ಇಂಟ್ರೊಡಕ್ಷನ್ ಸೀನ್ ಶೂಟಿಂಗ್
ಹೌದು, ಪುನೀತ್ ರಾಜ್ ಕುಮಾರ್ ಸಿನಿಮಾಗೆ ಹಾಡು ಬರೆಯುವ ಅವಕಾಶವನ್ನು ನಿರ್ದೇಶಕ ಪವನ್ ಒಡೆಯರ್ ಮಾಡಿ ಕೊಟ್ಟಿದ್ದಾರೆ. ಪುನೀತ್ ಅಭಿನಯದ ಹೊಸ ಸಿನಿಮಾ 'ನಟ ಸಾರ್ವಭೌಮ' ಚಿತ್ರಕ್ಕೆ ಹೊಸ ಸಾಹಿತಿಗಳ ಕೈ ನಲ್ಲಿ ಹಾಡು ಬರೆಸುವ ಪ್ಲಾನ್ ಮಾಡಿರುವ ಚಿತ್ರತಂಡ ಒಂದು ವೇದಿಕೆಯನ್ನು ಸಿದ್ಧ ಮಾಡಿದೆ. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರ್ದೇಶಕ ಪವನ್ ಒಡೆಯರ್ ತಮ್ಮ ಫೇಸ್ ಬುಕ್ ಲೈವ್ ಮೂಲಕ ತಿಳಿಸಲಿದ್ದಾರೆ. ಇಂದು ರಾತ್ರಿ 8 ಗಂಟೆಗೆ ಪವನ್ ಒಡೆಯರ್ ಫೇಸ್ ಬುಕ್ ಲೈವ್ ಬರಲಿದ್ದು ಆಸಕ್ತರು ಅದನ್ನು ವೀಕ್ಷಿಸಬಹುದಾಗಿದೆ.
ಚಿತ್ರಕ್ಕೆ ರಚಿತಾ ರಾಮ್ ನಾಯಕಿ ಆಗಿದ್ದಾರೆ. 'ಚಕ್ರವ್ಯೂಹ' ಸಿನಿಮಾದ ನಂತರ ಮತ್ತೆ ಪುನೀತ್ ಹಾಗೂ ರಚಿತಾ ಈ ಸಿನಿಮಾದ ಮೂಲಕ ಒಂದಾಗಿದ್ದಾರೆ. ಸಿನಿಮಾದಲ್ಲಿ ಬಿ ಸರೋಜದೇವಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. 'ರಣವಿಕ್ರಮ' ನಂತರ ಮತ್ತೆ ಪುನೀತ್ ಗೆ ಪವನ್ ಡೈರೆಕ್ಷನ್ ಮಾಡುತ್ತಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಅಂದಹಾಗೆ, 'ನಟ ಸಾರ್ವಭೌಮ' ಸಿನಿಮಾದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿ ದೊಡ್ಡ ರೆಸ್ಪಾನ್ಸ್ ಪಡೆದಿದೆ. ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಹೊಸ ಹೇರ್ ಸ್ಟೈಲ್ ನಲ್ಲಿ ಮಿಂಚಿದ್ದು, ಅವರ ಅಭಿಮಾನಿಗಳು ಅದೇ ರೀತಿಯ ಹೇರ್ ಸ್ಟೈಲ್ ಗಳನ್ನು ಮಾಡಿಸಿಕೊಂಡಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್ ಭರ್ಜರಿಯಾಗಿ ನಡೆಯುತ್ತಿದೆ.