Don't Miss!
- Automobiles ಅದ್ಭುತ ಫೀಚರ್ಸ್ ಪಡೆದುಕೊಂಡ ಟಾಟಾ ಟಿಯಾಗೋ ಇವಿ: ಪ್ರತಿ ಕಿ.ಮೀ ಚಲಿಸಲು ಕೇವಲ 60 ಪೈಸೆ ವೆಚ್ಚ
- Sports IPL 2024: ಗಾಯದ ಕಾರಣದಿಂದ ಆಟಗಾರ ಲೀಗ್ನಿಂದ ಹೊರ ನಡೆದರೆ ಸಿಗುವ ಹಣವೆಷ್ಟು?
- News ಬೈಯಪ್ಪನಹಳ್ಳಿ 'ಮೆಟ್ರೋ' ನಿಲ್ದಾಣದಲ್ಲಿ ಪಾರ್ಕಿಂಗ್ ಸಮಸ್ಯೆ: ಪ್ರಯಾಣಿಕರಿಗೆ ತೊಂದರೆ
- Technology Airtel & Noise: ಇನ್ಮುಂದೆ ಏರ್ಟೆಲ್ ಪೇಮೆಂಟ್ ಬ್ಯಾಂಕ್ ಸ್ಮಾರ್ಟ್ವಾಚ್ನದ್ದೇ ಹವಾ! ಟ್ಯಾಪ್-ಟು-ಪೇ ಫೀಚರ್ಸ್..
- Finance ಬಾಬಾ ರಾಮ್ದೇವ್ಗೆ ಖುದ್ದು ಹಾಜರಾಗುವಂತೆ ಖಡಕ್ ಸೂಚನೆ ನೀಡಿದ ಸುಪ್ರೀಂ ಕೋರ್ಟ್
- Lifestyle ಈರುಳ್ಳಿ ಹಾಕದೆ 3 ಪದಾರ್ಥ ಹಾಕಿ 5 ನಿಮಿಷದಲ್ಲಿ ಚಟ್ನಿ ಮಾಡಬಹುದು.! ಇಲ್ಲಿದೆ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗಸ್ತ್ಯ ಶ್ರೀಮುರಳಿ ಜೊತೆ 'ಉಗ್ರಂ' ನಿರ್ದೇಶಕ ಪ್ರಶಾಂತ್ ನೀಲ್
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಭರಾಟೆ' ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಕ್ಲೈಮ್ಯಾಕ್ಸ್ ದೃಶ್ಯದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.
ಚಿತ್ರದ ಬಹುನಿರೀಕ್ಷಿತ ಮತ್ತು ದುಬಾರಿ ಫೈಟಿಂಗ್ ದೃಶ್ಯವನ್ನು ಬೆಂಗಳೂರಿನ ನೆಲಮಂಗಳ ಬಳಿ ಸೆರೆ ಹಿಡಿಯುತ್ತಿದೆ ಚಿತ್ರತಂಡ. 'ಭರಾಟೆ' ಅಖಾಡದಲ್ಲಿ ಬರೋಬ್ಬರಿ 10 ಖಳನಟರ ಜೊತೆ ನಟ ಶ್ರೀಮುರುಳಿ ಕಾದಾಡುವ ಸೀನ್ ಇದಾಗಿದೆ. ಚಿತ್ರದ ಈ ರೋಚಕ ಸನ್ನಿವೇಶವನ್ನು ನೋಡಲು 'ಉಗ್ರಂ' ಹಾಗೂ 'ಕೆ ಜಿ ಎಫ್' ನಿರ್ದೇಶಕ ಪ್ರಶಾಂತ್ ನೀಲ್ ಸಹ ಭಾಗಿಯಾಗಿದ್ದರು ಎನ್ನುವುದು ವಿಶೇಷ.
'ಭರಾಟೆ' ಕ್ಲೈಮ್ಯಾಕ್ಸ್ ನಲ್ಲಿ 10 ವಿಲನ್ ಗಳ ಎದುರು ಶ್ರೀಮುರುಳಿ ಫೈಟ್
ಈ ಹೈ ವೋಲ್ಟೇಜ್ ಆಕ್ಷನ್ ಸೀನ್ ನೋಡಿ ನಿರ್ದೇಶಕ ಪ್ರಶಾಂತ್ ನೀಲ್ ಸಹ ಖುಷಿ ಪಟ್ಟಿದ್ದಾರಂತೆ. ಈ ಹಿಂದೆ ಶ್ರೀಮುರುಳಿ ಅಭಿನಯದ 'ಉಗ್ರಂ' ಚಿತ್ರವನ್ನು ನಿರ್ದೇಶನ ಮಾಡಿದ್ದ ಪ್ರಶಾಂತ್ ನೀಲ್ 'ಭರಾಟೆ' ಚಿತ್ರದ ಸೆಟ್ ಗೆ ಭೇಟಿ ನೀಡಿ ಚಿತ್ರತಂಡವನ್ನು ಮತ್ತಷ್ಟು ಹುರಿದುಂಬಿಸಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ನಟ ಶ್ರೀಮುರಳಿ ಅವರ ಸಂಬಂಧಿ ಕೂಡ ಹೌದು.
ದರ್ಶನ್ ಕ್ಲಿಕ್ ಮಾಡಿದ ಫೋಟೋ ಶ್ರೀಮುರಳಿಗೆ ಗಿಫ್ಟ್
'ಭರಾಟೆ' ನಿರ್ದೇಶಕ ಚೇತನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ. 'ಮಫ್ತಿ' ಸಿನಿಮಾದ ನಂತರ ನಟ ಶ್ರೀಮುರಳಿ 'ಭರಾಟೆ' ಮೂಲಕ ಬರಲು ತಯಾರಿ ನಡೆಸುತ್ತಿದ್ದಾರೆ.