Don't Miss!
- News Smartphone: ಮಾರುಕಟ್ಟೆಯಲ್ಲಿ ಸದ್ದು ಮಾಡಲು ಬರುತ್ತಿದೆ ಸ್ಯಾಮ್ಸಂಗ್ M35 5G
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Technology Earbuds: 2000 ರೂ. ಒಳಗೆ ಲಭ್ಯ ಇರುವ ಅತ್ಯುತ್ತಮ ಇಯರ್ಬಡ್ಸ್! ಸಖತ್ ಫೀಚರ್ಸ್...
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗಸ್ತ್ಯ ಶ್ರೀಮುರಳಿ ಜೊತೆ 'ಉಗ್ರಂ' ನಿರ್ದೇಶಕ ಪ್ರಶಾಂತ್ ನೀಲ್
ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ 'ಭರಾಟೆ' ಚಿತ್ರದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಸದ್ಯ ಕ್ಲೈಮ್ಯಾಕ್ಸ್ ದೃಶ್ಯದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.
ಚಿತ್ರದ ಬಹುನಿರೀಕ್ಷಿತ ಮತ್ತು ದುಬಾರಿ ಫೈಟಿಂಗ್ ದೃಶ್ಯವನ್ನು ಬೆಂಗಳೂರಿನ ನೆಲಮಂಗಳ ಬಳಿ ಸೆರೆ ಹಿಡಿಯುತ್ತಿದೆ ಚಿತ್ರತಂಡ. 'ಭರಾಟೆ' ಅಖಾಡದಲ್ಲಿ ಬರೋಬ್ಬರಿ 10 ಖಳನಟರ ಜೊತೆ ನಟ ಶ್ರೀಮುರುಳಿ ಕಾದಾಡುವ ಸೀನ್ ಇದಾಗಿದೆ. ಚಿತ್ರದ ಈ ರೋಚಕ ಸನ್ನಿವೇಶವನ್ನು ನೋಡಲು 'ಉಗ್ರಂ' ಹಾಗೂ 'ಕೆ ಜಿ ಎಫ್' ನಿರ್ದೇಶಕ ಪ್ರಶಾಂತ್ ನೀಲ್ ಸಹ ಭಾಗಿಯಾಗಿದ್ದರು ಎನ್ನುವುದು ವಿಶೇಷ.
'ಭರಾಟೆ' ಕ್ಲೈಮ್ಯಾಕ್ಸ್ ನಲ್ಲಿ 10 ವಿಲನ್ ಗಳ ಎದುರು ಶ್ರೀಮುರುಳಿ ಫೈಟ್
ಈ ಹೈ ವೋಲ್ಟೇಜ್ ಆಕ್ಷನ್ ಸೀನ್ ನೋಡಿ ನಿರ್ದೇಶಕ ಪ್ರಶಾಂತ್ ನೀಲ್ ಸಹ ಖುಷಿ ಪಟ್ಟಿದ್ದಾರಂತೆ. ಈ ಹಿಂದೆ ಶ್ರೀಮುರುಳಿ ಅಭಿನಯದ 'ಉಗ್ರಂ' ಚಿತ್ರವನ್ನು ನಿರ್ದೇಶನ ಮಾಡಿದ್ದ ಪ್ರಶಾಂತ್ ನೀಲ್ 'ಭರಾಟೆ' ಚಿತ್ರದ ಸೆಟ್ ಗೆ ಭೇಟಿ ನೀಡಿ ಚಿತ್ರತಂಡವನ್ನು ಮತ್ತಷ್ಟು ಹುರಿದುಂಬಿಸಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ನಟ ಶ್ರೀಮುರಳಿ ಅವರ ಸಂಬಂಧಿ ಕೂಡ ಹೌದು.
ದರ್ಶನ್ ಕ್ಲಿಕ್ ಮಾಡಿದ ಫೋಟೋ ಶ್ರೀಮುರಳಿಗೆ ಗಿಫ್ಟ್
'ಭರಾಟೆ' ನಿರ್ದೇಶಕ ಚೇತನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸಿನಿಮಾ. 'ಮಫ್ತಿ' ಸಿನಿಮಾದ ನಂತರ ನಟ ಶ್ರೀಮುರಳಿ 'ಭರಾಟೆ' ಮೂಲಕ ಬರಲು ತಯಾರಿ ನಡೆಸುತ್ತಿದ್ದಾರೆ.