Don't Miss!
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- News BJP Big Campaign: ಏಪ್ರಿಲ್ 20 ರಿಂದ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದಂಡು! ಯಾರ್ಯಾರು ಬರಲಿದ್ದಾರೆ?
- Automobiles Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಆಪ್ ಸ್ಟೋರ್ನಿಂದ ವಾಟ್ಸಾಪ್, ಥ್ರೆಡ್ ತೆಗೆದುಹಾಕಿದ ಆಪಲ್!
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಕಾರು-ಬಸ್ಸು ಬಿಟ್ಟು ಸೈಕಲ್ನಲ್ಲಿ ಓಡಾಡಿದ್ರೆ ಒಳ್ಳೆಯದು- ಪ್ರೇಮ್
ಬೆಂಗಳೂರಿನಲ್ಲಿ ಕಾರು, ಬಸ್ಸು ಬಿಟ್ಟು ಸೈಕಲ್ನಲ್ಲಿ ಓಡಾಡಿದ್ರೆ ಆರೋಗ್ಯಕ್ಕೆ ಒಳ್ಳೆಯದು, ಏಕಂದ್ರೆ ವಾಯುಮಾಲಿನ್ಯನೂ ನಿಯಂತ್ರಣಕ್ಕೆ ಬರುತ್ತೆ ಎಂದು ಕನ್ನಡ ಸಿನಿ ನಿರ್ದೇಶಕ ಹಾಗೂ ನಟ ಪ್ರೇಮ್ ಹೇಳಿದ್ದಾರೆ.
ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯಿಂದ 'ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ನವೆಂಬರ್ 2020' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಪ್ರೇಮ್ ವಾಯುಮಾಲಿನ್ಯ ನಿಯಂತ್ರಿಸಲು ಸ್ವತಃ ಸಾರ್ವಜನಿಕರೇ ತಿಳಿದುಕೊಳ್ಳಬೇಕು ಎಂದಿದ್ದಾರೆ.
ಓ ಓ ಓ ಪ್ರೇಮ ಕಾಶ್ಮೀರ...ಎನ್ನುತ್ತಿದ್ದಾರೆ ನಿರ್ದೇಶಕ ಪ್ರೇಮ್
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾಲ್ನಡಿಗೆ ಜಾಥಾದಲ್ಲಿ 'ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ'ಗೆ ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ ನೀಡಿದರು.
ಬಳಿಕ ವೇದಿಕೆಯಲ್ಲಿ ಮಾತನಾಡಿದ ನಿರ್ದೇಶಕ ಪ್ರೇಮ್ ''ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಡಬೇಕು. ಬಿಬಿಎಂಪಿ ಇಲಾಖೆ ಹಾಗು ಆಯುಕ್ತರು ಈ ಬಗ್ಗೆ ಗಮನ ನೀಡಬೇಕು'' ಎಂದು ಮನವಿ ಮಾಡಿಕೊಂಡರು.
ಈ ವಿಡಿಯೋ ತುಣುಕನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಪ್ರೇಮ್ ''"ನಾವ್ ಪರಿಸರನ ಉಳುಸುದ್ರೆ ಪರಿಸರ ನಮ್ಮನ್ನ ಉಳ್ಸುತ್ತೇ" ಗಿಡಗಳನ್ನ ಬೆಳೆಸಿ, ಪ್ರಕೃತಿ ಉಳಿಸಿ, ವಾಯು ಮಾಲಿನ್ಯವನ್ನ ತಡೆಗಟ್ಟಿ'' ಎಂದು ಕೇಳಿಕೊಂಡಿದ್ದಾರೆ.
Recommended Video
ಸದ್ಯ, 'ಏಕ್ ಲವ್ ಯಾ' ಸಿನಿಮಾ ಮಾಡುತ್ತಿರುವ ಪ್ರೇಮ್ ರಾಜಸ್ಥಾನ, ಜಮ್ಮು ಕಾಶ್ಮೀರ, ಶ್ರೀನಗರ ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದಾರೆ. ಅದಕ್ಕಾಗಿ ಲೋಕೇಶನ್ ಸಹ ನೋಡಿಕೊಂಡು ಬಂದಿದ್ದಾರೆ.