Don't Miss!
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- News 5 ವರ್ಷಗಳಲ್ಲಿ ಕರ್ನಾಟಕ ಸಂಸದರ ಸಾಧನೆ ಏನು? ಅಧ್ಯಯನ ಹೇಳೋದೇನು?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್, ಸುದೀಪ್, ಉಪೇಂದ್ರ 'ರೈ' ಸಿನಿಮಾ ಮಾಡಲು ಒಪ್ಪಲಿಲ್ಲ-ರವಿ ಶ್ರೀವತ್ಸ
ಮುತ್ತಪ್ಪ ರೈ ಬಯೋಪಿಕ್ ಸಿನಿಮಾ ಮಾತುಗಳು ಈ ಹಿಂದಿನಿಂದಲೇ ಕೇಳಿ ಬರುತ್ತಿದೆ. ಹಲವು ಭಾರಿ ಈ ಸಿನಿಮಾ ಮಾಡಲು ಮುಂದಾಗುತ್ತಿದ್ದ ನಿರ್ದೇಶಕರು ಕೈ ಬಿಡುತ್ತಿದ್ದರು. ಮೊದಲು ಮುತ್ತಪ್ಪ ರೈ ಸಿನಿಮಾ ಮಾಡಬೇಕು ಎಂದುಕೊಂಡವರು ಖ್ಯಾತ ನಿರ್ದೇಶಕ ರವಿ ಶ್ರೀವತ್ಸ ಮತ್ತು ರವಿ ಬೆಳಗೆರೆ. 'ರೈ' ಎಂಬ ಹೆಸರಲ್ಲಿ ಸಿನಿಮಾ ಸೆಟ್ಟೇರಿತ್ತಾದರೂ ಆದು ಕಾರ್ಯರೂಪಕ್ಕೆ ಬರಲಿಲ್ಲ. ಅದು ಯಾಕೆ ಎಂಬ ಬಗ್ಗೆ ಸ್ವತಃ ರವಿ ಶ್ರೀವತ್ಸ ಫಿಲ್ಮಿ ಬೀಟ್ ಕನ್ನಡ ಜೊತೆ ಎಕ್ಸಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ಹೌದು, ರೈ ಸಿನಿಮಾದ ಕೆಲಸ 2002ರಲ್ಲಿ ಆರಂಭ ಆಗುತ್ತೆ. ಮೊದಲು ನಾವು ಉಪೇಂದ್ರ ಅವರನ್ನು ಸೆಲೆಕ್ಟ್ ಮಾಡಿದ್ವಿ. ಆದರೆ ಕಥೆಯಲ್ಲಿ ಬದಲಾವಣೆ ಬಯಸಿದ್ರು ಉಪೇಂದ್ರ. ಆದರೆ ಅದು ರವಿಬೆಳಗೆರೆಯವರಿಗೆ ಇಷ್ಟವಿರಲಿಲ್ಲ. ಹೀಗಾಗಿ ಉಪೇಂದ್ರ ಅವರನ್ನು ಕೈ ಬಿಟ್ಟೆವು. ಬಳಿಕ ಸುದೀಪ್ ಅವರನ್ನು ಈ ಸಿನಿಮಾಗೆ ಕೇಳಲಾಗಿತ್ತು. ಹಾಗೇ ದರ್ಶನ್ ಬಳಿಯೂ ಈ ಸಿನಿಮಾ ಮಾಡುವ ಆಯ್ಕೆ ಇತ್ತು. ಕಾರಣಾಂತರಗಳಿಂದ ಈ ಮೂವರು ಸಿನಿಮಾ ಮಾಡಲು ಆಗಿಲ್ಲ. ಎಷ್ಟು ಬಾರಿ ಈ ಸಿನಿಮಾ ಮಾಡಲು ಸ್ಟಾರ್ಟ್ ಮಾಡಿದಾಗಲೂ ನಿಂತು ಹೋಗುತ್ತಿತ್ತು ಎಂದಿದ್ದಾರೆ.
ಅಲ್ಲದೆ 'ರೈ' ಸಿನಿಮಾದಲ್ಲಿ ಸಾಕಷ್ಟು ಕಹಿ ಘಟನೆಗಳು, ನಿಜ ಸತ್ಯಾಂಶಗಳನ್ನು ರವಿ ಬೆಳಗೆರೆ ಬಿಚ್ಚಿಡುವ ಪ್ರಯತ್ನ ಮಾಡಿದ್ರು. ಆದರೆ ಈ ಕಥೆ ಸಿನಿಮಾ ಆಗಲಿಲ್ಲಾ ಎನ್ನುವ ಬಗ್ಗೆ ರವಿ ಶ್ರೀವತ್ಸ ಬೇಸರ ವ್ಯಕ್ತಪಡಿಸಿದ್ದಾರೆ. ಅವರ ಇನ್ನಷ್ಟು ಮಾತುಗಳನ್ನು ಈ ವೀಡಿಯೋದಲ್ಲಿ ನೀವು ನೋಡಬಹುದಾಗಿದೆ.