Don't Miss!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
16 ವರ್ಷಗಳ ನಂತರ ಎಸ್ ನಾರಾಯಣ್ ನಿರ್ದೇಶನದಲ್ಲಿ ರವಿಮಾಮ
ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಲವರ್ ಬಾಯ್ ಆಗಿ ಕ್ರೇಜಿ ಸ್ಟಾರ್ ಅಂತಾನೇ ಫೇಮಸ್ ಆಗಿದ್ದ ನಟ ರವಿಚಂದ್ರನ್ ಅವರು ಇತ್ತೀಚೆಗೆ ತಂದೆಯ ಪಾತ್ರಗಳನ್ನು ಮಾಡುವ ಮೂಲಕ ಮತ್ತೆ ಮರುಹುಟ್ಟು ಪಡೆದುಕೊಂಡವರು.
ಇದೀಗ ನಿರ್ದೇಶಕ-ನಟ ಎಸ್ ನಾರಾಯಣ್ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಆಕ್ಷನ್-ಕಟ್ ಹೇಳಲಿದ್ದಾರೆ. ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಎಸ್ ನಾರಾಯಣ್ ಹಾಗೂ ನಟ ರವಿಚಂದ್ರನ್ ಅವರು ಸುಮಾರು 16 ವರ್ಷಗಳ ನಂತರ ಮತ್ತೆ ಒಂದಾಗಿ ಕೆಲಸ ಮಾಡಲು ನಿರ್ಧರಿಸಿದ್ದು, ಇವರಿಬ್ಬರ ಜುಗಲ್ ಬಂದಿಯಲ್ಲಿ ಪ್ರೇಕ್ಷಕರಿಗೆ ಮತ್ತೊಮ್ಮೆ ಎಂರ್ಟಟೈನ್ ಗ್ಯಾರಂಟಿ.
ಇನ್ನು ಈಗಲೂ ನಾಯಕ ನಟನ ಪಾತ್ರಗಳನ್ನು ಮಾಡಲು ಅವಕಾಶ ಪಡೆಯುವಲ್ಲಿ ಮುಂಚೂಣಿ ಸ್ಥಾನದಲ್ಲಿರುವ ನಟ ರವಿಚಂದ್ರನ್ ಅವರ ಹುಮ್ಮಸ್ಸು ಹಾಗು ಖದರ್ ಗೆ ನಾವು ಮೆಚ್ಚಲೇಬೇಕು.
ವಿಜಯವಾಡ ಮೂಲದ ನಿರ್ಮಾಪಕ ಸುಬ್ರಮಣಿಯನ್ ಅವರು ಸಿನಿಮಾಕ್ಕೆ ಕಥೆ ಸಿದ್ದಪಡಿಸಿದ್ದು, ಸೋಮವಾರದಂದು ಚಿತ್ರಕ್ಕೆ ಮುಹೂರ್ತ ನೆರವೇರಿದೆ. ಸಿನಿಮಾಕ್ಕೆ ಇನ್ನು ಹೆಸರಿಡಬೇಕಿದ್ದು, ನವೆಂಬರ್ 3 ಅಥವಾ 4 ರಂದು ಚಿತ್ರೀಕರಣ ಆರಂಭವಾಗಲಿದೆ.
ಇನ್ನು ಹೆಸರಿಡದ ಚಿತ್ರದಲ್ಲಿ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ವಿಶೇಷ ಹಾಗೂ ವಿಶಿಷ್ಟ ಪಾತ್ರವಿದೆ. ಇನ್ನುಳಿದಂತೆ ಚಿತ್ರಕ್ಕೆ ಇನ್ನು ಹೆಚ್ಚಿನ ನಟ-ನಟಿಯರ ಆಯ್ಕೆ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ನಿರ್ದೇಶಕ ಎಸ್.ನಾರಾಯಣ್ ಅವರು ಹೇಳಿದ್ದಾರೆ.
ನಟ ರವಿಚಂದ್ರನ್ ಅವರು ಈ ಚಿತ್ರದಲ್ಲಿ ಮಾಡುವ ರೋಲ್ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಅವರ ಸಿನಿ ಕೆರಿಯರ್ ನಲ್ಲಿ ಇಲ್ಲಿಯವರೆಗೆ ಮಾಡದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ರವಿಮಾಮ' ಚಿತ್ರದ ನಂತರ ರವಿಚಂದ್ರನ್ ಅವರೊಂದಿಗೆ ಮತ್ತೊಮ್ಮೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ನಿರ್ದೇಶಕ ಎಸ್.ನಾರಾಯಣ್ ನುಡಿದಿದ್ದಾರೆ.[ನಿರ್ದೇಶಕ ಎಸ್.ನಾರಾಯಣ್ ಮುಂದಿನ ಚಿತ್ರ ಯಾವ್ದು?]
ಸದ್ಯಕ್ಕೆ ನಟ ರವಿಚಂದ್ರನ್ ಅವರು ತಾವೇ ನಿರ್ದೇಶಿಸಿ ನಟಿಸುತ್ತಿರುವ 'ಅಪೂರ್ವ' ಚಿತ್ರ ಕೊನೆಯ ಹಂತದಲ್ಲಿದೆ. ಇದೀಗ ಮಾಹಿತಿ ಪ್ರಕಾರ ಆದಷ್ಟು ಬೇಗನೇ ನಟ ರವಿಚಂದ್ರನ್ ಅವರು ಎಸ್ ನಾರಾಯಣ್ ಅವರ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ.