Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿ ಬಾಸ್ ಗೆ ಅವರೇ ಸಾಟಿ: 'ಕುರುಕ್ಷೇತ್ರ' ವಿಮರ್ಶೆ ಮಾಡಿದ ನಿರ್ದೇಶಕ ಸುನಿ
'ಕುರುಕ್ಷೇತ್ರ' ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾ. ಕೋಟಿ ಕೋಟಿ ಬಾಚಿಕೊಳ್ಳುತ್ತಿರುವ ಕುರುಕ್ಷೇತ್ರ ಕಣ್ತುಂಬಿಕೊಂಡು ಕನ್ನಡಿಗರು ಸಂತಸ ಪಡುತ್ತಿದ್ದಾರೆ.
ಮಹಾಭಾರತ ಕಥೆ, ಬಹುತಾರಾಗಣ, 3 ಡಿ ಎಫಕ್ಟ್, ಗ್ರಾಫಿಕ್ಸ್ ಹೀಗೆ ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಅದ್ದೂರಿ ಕುರುಕ್ಷೇತ್ರ ಚಿತ್ರವನ್ನು ಕನ್ನಡ ಚಿತ್ರಪ್ರಿಯರು ನೋಡಿ ಆನಂದಿಸುತ್ತಿದ್ದಾರೆ. ಸದ್ಯ ಕನ್ನಡಜ ಮತ್ತು ತೆಲುಗು ನಲ್ಲಿ ಸಿನಿಮಾ ರಿಲೀಸ್ ಆಗಿದೆ. ಆದ್ರೀಗ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರ ರಿಲೀಸ್ ಗೆ ಸಜ್ಜಾಗಿದೆ.
ದೂರದ ಕೆನಡದಲ್ಲೂ ಜೋರಾಗಿದೆ 'ಕುರುಕ್ಷೇತ್ರ' ಆರ್ಭಟ
ಸಿನಿಮಾ ನೋಡಿದ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಗೆ ಚಿತ್ರರಂಗದ ಗಣ್ಯರು ಸಹ ಕುರುಕ್ಷೇತ್ರ ನೋಡಿ ಹಾಡಿ ಹೊಗಳುತ್ತಿದ್ದಾರೆ. ಇತ್ತೀಚಿಗೆ ಸಿನಿಮಾ ನೋಡಿದ ನಿರ್ದೇಶಕ ಸಿಂಪಲ್ ಸುನಿ ಕುರುಕ್ಷೇತ್ರ ಚಿತ್ರದ ಬಗ್ಗೆ ವಿಮರ್ಶೆ ಮಾಡಿದ್ದಾರೆ.
ಡಿ ಬಾಸ್ ಅವರಿಗೆ ಅವರೇ ಸಾಟಿ
"ಚಿಕ್ಕ ಹುಡುಗನಿಂದ ನಾಟಕ ಕಥನಗಳು ನೋಡಿ ಓದಿ ಕೇಳಿದ್ದರೂ, ಮುನಿರತ್ನ ಕುರುಕ್ಷೇತ್ರದ ಚಿತ್ರಕಥೆ ಹಾಗೂ ಸಂಭಾಷಣೆ ಬರೆದ ಬರಹಗಾರರು ದುರ್ಯೋಧನನ ದೃಷ್ಠಿಕೋನದಲ್ಲಿ ತೋರಿರುವುದು ಪ್ರಶಂಸನೀಯ. ಸುಯೋಧನನಾಗಿ ಗದಾಯುದ್ಧ, ಪಾಂಚಾಲಿಯಿಂದ ಅವಮಾನವಾಗಿ ಕೊರಗುವ ದೃಶ್ಯ ಕರ್ಣ, ಸ್ನೇಹ ಹಾಗೂ ಕೃಷ್ಣ, ಶಕುನಿ ಜೊತೆ ದೃಶ್ಯಗಳಲ್ಲಿ D boss ಅವರಿಗೆ ಅವರೇ ಸಾಟಿ" ಎಂದು ಮೊದಲ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
"ನನ್ನನ್ನ ಬಿಟ್ರೆ ಕೃಷ್ಣನ ಪಾತ್ರ ಯಾರು ಮಾಡ್ತಾರೆ": ರವಿಚಂದ್ರನ್
ನಿಖಿಲ್ ವರಸೆ ಇಷ್ಟವಾಗುತ್ತದೆ
"ಅಭಿಮನ್ಯು ಯುದ್ಧದಲ್ಲಿ ನಿಖಿಲ್ ವರಸೆ ಇಷ್ಟವಾಗುತ್ತದೆ. ಕೃಷ್ಣ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಶಕುನಿ ರವಿಶಂಕರ್ ಅಮೋಘ, ಕರ್ಣ ಆಯಾಮಗಳು ಮತ್ತು ಅರ್ಜುನ್ ಸರ್ಜಾ ಚಿತ್ರದ ಹೈಲೈಟ್, ಮಿಕ್ಕೆಲ್ಲಾ ಪೋಷಕ ಪಾತ್ರಗಳು ನ್ಯಾಯಯುತವಾಗಿದೆ" ಎಂದು ಹೇಳುತ್ತ ನಿಖಿಲ್ ಅಭಿನಯವನ್ನು ಮೆಚ್ಚಿಕೊಂಡಿದ್ದಾರೆ.
ಮತ್ತೊಂದು 'ಕಥೆ' ಶುರು ಮಾಡಿದ ಸುನಿ-ದಿಗಂತ್-ಪುಷ್ಕರ್
ಇಷ್ಟವಾಗದ ಅಂಶವಿದ್ದರೂ ಮನ್ನಿಸಬಹುದು
ಧರ್ಮರಾಯನಲ್ಲಿ ಮೋಸ ತೋರಿದ್ದು ಗಧಾಯುದ್ಧದಲ್ಲಿ ಭೀಮ ತುಂಬಾ ಒದೆ ತಿಂದಿದ್ದು, ವಿ.ಎಫ್.ಎಕ್ಸ್ ಈ ರೀತಿ ಕೆಲವು ಇಷ್ಟವಾಗದ ಅಂಶವಿದ್ದರೂ ಮನ್ನಿಸಬಹುದು. ಈ ರೀತಿ ಚಿತ್ರಗಳಿಗೆ ತಂಡದ ಕಲ್ಪನೆ ಹಾಗೂ ಪರಿಶ್ರಮ ಅನನ್ಯ. ಇಡೀ ತಂಡಕ್ಕೆ ಹಾಗೂ ಬೆನ್ನೆಲುಬು ಮುನಿರತ್ನರಿಗೆ ಧನ್ಯವಾದಗಳು. ಆ ಶ್ರಮಕ್ಕಾದರೂ ಒಮ್ಮೆ ನೋಡಬೇಕಾದ ಚಿತ್ರ.
ತಮಿಳು, ಮಲಯಾಳಂನಲ್ಲಿ ರಿಲೀಸ್ ಆಗುತ್ತಿದೆ
ಸದ್ಯ ಕನ್ನಡ ಮತ್ತು ತೆಲುಗು ಚಿತ್ರಪ್ರಿಯರ ಮನತಣಿಸಿರುವ 'ಕುರುಕ್ಷೇತ್ರ' ಈಗ ತಮಿಳು ಮತ್ತು ಮಲಯಾಳಂನಲ್ಲಿ ರಿಲೀಸ್ ಗೆ ಸಜ್ಜಾಗುತ್ತಿದೆ. ಈಗಾಗಲೆ ತಮಿಳಿನಲ್ಲಿ ಚಿತ್ರದ ಟ್ರೈಲರ್ ಮತ್ತು ಆಡಿಯೋವನ್ನು ರಿಲೀಸ್ ಮಾಡಲಾಗಿದೆ. ಅಂದ್ಹಾಗೆ ಕುರುಕ್ಷೇತ್ರ ತಮಿಳು ಮತ್ತು ಮಲಯಾಳಂ ವರ್ಷನ್ ಇದೆ ತಿಂಗಲು ಆಗಸ್ಟ್ 15ಕ್ಕೆ ತೆರೆಗೆ ಬರುತ್ತಿದೆ.