Don't Miss!
- News Lok Sabha Election: ಗೂಗಲ್ನಲ್ಲೂ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮ
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆರಂಭದಲ್ಲೇ ವಿಘ್ನ: 'ದಂಡುಪಾಳ್ಯ 2' ಚಿತ್ರಕ್ಕೆ ಕೋರ್ಟ್ ನೋಟಿಸ್
'ಮುಂಗಾರು ಮಳೆ' ಹುಡುಗಿ ಪೂಜಾ ಗಾಂಧಿ ಅವರು ವಿಭಿನ್ನವಾಗಿ ಕಾಣಿಸಿಕೊಂಡಿರುವ 'ದಂಡು ಪಾಳ್ಯ 2' ಸಿನಿಮಾ ಸೆಟ್ಟೇರಿ ಈಗಾಗಲೇ ಶೂಟಿಂಗ್ ಆರಂಭವಾಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.
ಅಲ್ಲದೇ ಈಗಾಗಲೇ ಚಿತ್ರದ ಫಸ್ಟ್ ಲುಕ್ ಕೂಡ ಬಿಡುಗಡೆ ಆಗಿದ್ದು, ಅದನ್ನು ನೋಡುತ್ತಿದ್ದರೆ, ಸಿನಿಮಾ ಇನ್ನೂ ಭೀಕರವಾಗಿರಬಹುದು ಅನ್ನೋ ಅನಿಸಿಕೆ ಪ್ರೇಕ್ಷಕರಲ್ಲಿ ಮೂಡುತ್ತದೆ. ಇದೆಲ್ಲಾ ಹಳೇ ಸುದ್ದಿಯಾಯ್ತು. ಹೊಸ ಸುದ್ದಿ ಏನಪ್ಪಾ ಅಂದ್ರೆ, ಚಿತ್ರ ಶುರುವಾಗುವ ಮುನ್ನವೇ ಚಿತ್ರಕ್ಕೆ ಹಲವಾರು ವಿಘ್ನಗಳು ಎದುರಾಗುತ್ತಿವೆ.
ಹೌದು 'ದಂಡುಪಾಳ್ಯ 2' ಚಿತ್ರದ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಚಿತ್ರದ ನಿರ್ಮಾಣಕ್ಕೆ ತಡೆ ಕೋರಿ ಬುಧವಾರದಂದು (ಏಪ್ರಿಲ್ 27) ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ.[ಅಸಹ್ಯ ಹುಟ್ಟಿಸುವ 'ದಂಡುಪಾಳ್ಯ 2'ರ ಚಿತ್ರಗಳು, ಛೀ!]
'ದಂಡುಪಾಳ್ಯ 2' ಚಿತ್ರದ ನಿರ್ಮಾಣಕ್ಕೆ ತಡೆಕೋರಿ ಜೈಲಿನಲ್ಲಿರುವ 6 ಕೈದಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಚಿತ್ರದ ನಿರ್ದೇಶಕ ಶ್ರೀನಿವಾಸ ರಾಜು ಮತ್ತು ನಿರ್ಮಾಪಕರಾದ ಪ್ರಶಾಂತ್ ಜಿ ಆರ್ ಹಾಗೂ ಗಿರೀಶ್ ಅವರಿಗೆ ನೋಟಿಸ್ ನೀಡಿದೆ.
'ನಮ್ಮ ಮೇಲಿರುವ ಪ್ರಕರಣಗಳ ಕುರಿತು ವಿಚಾರಣೆ ಇನ್ನೂ ಕೋರ್ಟ್ ನಲ್ಲಿ ಬಾಕಿಯಿದೆ, ಅಲ್ಲದೇ ತಮ್ಮ ಬದುಕಿನ ಘಟನೆ ಕುರಿತು ತಮ್ಮಿಂದ ಯಾವುದೇ ಹೇಳಿಕೆ ಪಡೆಯದೇ ಚಿತ್ರ ನಿರ್ಮಾಣ ಮಾಡಲಾಗುತ್ತಿದೆ' ಎಂದು ಆರೋಪಿಸಿ ಕೈದಿಗಳು ಕೋರ್ಟ್ ಮೆಟ್ಟಿಲೇರಿದ್ದರು.[ಏನು 'ದಂಡುಪಾಳ್ಯ 2' ನಲ್ಲಿ ಬಿಗ್ ಬಾಸ್ ಶ್ರುತಿನಾ?]
ಅಲ್ಲದೆ ನ್ಯಾಯಾಲಯದಲ್ಲಿ ವಿಚಾರಣೆ ಪೂರ್ಣಗೊಂಡ ಬಳಿಕ ನಮ್ಮ ಅನುಮತಿ ಪಡೆದು ಚಿತ್ರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಕೈದಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಪ್ರಿಲ್ 30ಕ್ಕೆ ಈ ಪ್ರಕರಣ ಕುರಿತಂತೆ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಮುಂದೂಡಿದೆ.[ಗೆದ್ದು ಸೋತ ಚಿತ್ರ : ಕ್ಯಾಕರಿಸಿ ನಕ್ಕ ಗಾಂಧಿನಗರ]
2012ರಲ್ಲಿ ಸ್ಯಾಂಡಲ್ ವುಡ್ ಸಿನಿರಸಿಕರನ್ನು ಬೆಚ್ಚಿ ಬೀಳಿಸಿದ 'ದಂಡುಪಾಳ್ಯ' ಚಿತ್ರ ಬಂದಾಗಲೂ ಕೂಡ ಇಂತಹ ಗೊಂದಲಗಳು ಉಂಟಾಗಿತ್ತು. ಇದೀಗ ಇದರ ಮುಂದುವರಿದ ಭಾಗಕ್ಕೆ ಕಳೆದ ತಿಂಗಳು ಚಾಲನೆ ದೊರೆತಿದ್ದು, ಇದೂ ಕೂಡ ಆರಂಭದಲ್ಲೇ ವಿಘ್ನಗಳನ್ನು ಎದುರಿಸುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಇಲ್ಲಿದೆ..