Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಭರ್ಜರಿ'ಗಿದ್ದ ಭಯ ಮಾಯ: ಇನ್ನೇನಿದ್ರು 'ಘರ್ಜನೆ' ಮಾತ್ರ ಬಾಕಿ
ಧ್ರುವ ಸರ್ಜಾ ಅಭಿನಯದ 'ಭರ್ಜರಿ' ಚಿತ್ರಕ್ಕಾಗಿ ಅಭಿಮಾನಿಗಳು ಕಾದು ಕಾದು ಸುಸ್ತಾಗಿದ್ದ ಸಮಯದಲ್ಲಿ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ ಗುಡ್ ನ್ಯೂಸ್ ಕೊಟ್ಟಿದ್ದರು.
ಇನ್ನೇನೂ ಸಿನಿಮಾ ರಿಲೀಸ್ ಆಗುತ್ತೆ ಎನ್ನುವಷ್ಟರಲ್ಲಿ ಮತ್ತೊಂದು ವಿಘ್ನ ಎದರಾಗೇ ಹೋಯ್ತು. ನಿರ್ದೇಶಕ ಯೋಗರಾಜ್ ಭಟ್ ಮತ್ತು 'ಭರ್ಜರಿ' ಚಿತ್ರದ ನಿರ್ಮಾಪಕ ಶ್ರೀನಿವಾಸ್ ಅವರ ನಡುವಿನ ಸಂಭಾವನೆ ವಿವಾದದಿಂದ 'ಭರ್ಜರಿ' ಚಿತ್ರದ ಬಿಡುಗಡೆಗೆ ಕಂಟಕ ಎದುರಾಯಿತು.
ಯೋಗರಾಜ್ ಭಟ್ ಅವರು ಸಿನಿಮಾ ಬಿಡುಗಡೆ ಮಾಡಲು ಬಿಡುವುದಿಲ್ಲ ಎಂದು ಕೋರ್ಟ್ ಮೆಟ್ಟಿಲೇರಲು ಸಿದ್ದರಾಗಿದ್ದರು. ಆದ್ರೀಗ, ಈ ಎಲ್ಲ ಸಮಸ್ಯೆಗಳನ್ನ ಬಗೆಹರಿಸಿಕೊಂಡ ನಿರ್ಮಾಪಕರು ಸದ್ಯಕ್ಕೆ ನಿರಾಳವಾಗಿದ್ದಾರೆ. ಹಾಗಿದ್ರೆ, ಭಟ್ ಮತ್ತು ಶ್ರೀನಿವಾಸ್ ಅವರ ನಡುವೆ ಆದ ಒಪ್ಪಂದ ಯಾವುದು? ಎಂದು ತಿಳಿದುಕೊಳ್ಳಲು ಮುಂದೆ ಓದಿ.....
ಸೆಪ್ಟಂಬರ್ 15 ರಂದು 'ಭರ್ಜರಿ' ಪಕ್ಕಾ
ನಿರ್ಮಾಪಕ ಕನಕಪುರ ಶ್ರೀನಿವಾಸ್ ಮತ್ತು 'ದನಕಾಯೋನು' ಚಿತ್ರದ ನಿರ್ದೇಶಕ ಯೋಗರಾಜ್ ಅವರ ನಡುವಿನ ಹಣಕಾಸಿನ ವಿವಾದಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ಈ ಮೂಲಕ 'ಭರ್ಜರಿ' ಸಿನಿಮಾ ಬಿಡುಗಡೆಗೆ ಯಾವುದೇ ಸಮಸ್ಯೆ ಇಲ್ಲ. ಸೆಪ್ಟಂಬರ್ 15 ರಂದು ಭರ್ಜರಿ ಬಿಡುಗಡಯಾಗುವುದು ಪಕ್ಕಾ.
ಸಂಭಾವನೆ ಕಿರಿಕ್: ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ ಯೋಗರಾಜ್ ಭಟ್
ಸಂಧಾನದಲ್ಲಿ ಬಗೆಹರಿದ ಸಮಸ್ಯೆ
'ದನ ಕಾಯೋನು' ಚಿತ್ರಕ್ಕಾಗಿ ತಮಗೆ ಬರಬೇಕಿದ್ದ ಸಂಭಾವನೆಯನ್ನ ನಿರ್ಮಾಪಕ ಕನಕಪುರ ಶ್ರೀನಿವಾಸ್ ಇನ್ನೂ ನೀಡದ ಕಾರಣ ನಿರ್ದೇಶಕ ಯೋಗರಾಜ್ ಭಟ್ ಕೋರ್ಟ್ ಮೆಟ್ಟಿಲೇರಲು ಸಿದ್ದವಾಗಿದ್ದರು. ಆದ್ರೀಗ, ವಾಣಿಜ್ಯ ಮಂಡಳಿಯ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾಡಿಕೊಂಡಿದ್ದಾರೆ.
ಲೇಟ್ ಆದರೂ ಎಂಟ್ರಿ 'ಭರ್ಜರಿ'ಯಾಗಿದೆ: ಪರಭಾಷಾ ಚಿತ್ರಗಳು ಸೈಡಿಗ್ಹೋಗ್ಬೇಕ್ ಅಷ್ಟೆ.!
3 ಚೆಕ್ ನೀಡಿರುವ 'ಭರ್ಜರಿ' ನಿರ್ಮಾಪಕ
ನಿರ್ದೇಶಕ ಯೋಗರಾಜ್ ಭಟ್ ಅವರಿಗೆ, ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಮೂರು ಚೆಕ್ ಗಳನ್ನ ನೀಡುವ ಮೂಲಕ ಬಾಕಿ ಸಂಭಾವನೆಯನ್ನ ಪಾವತಿಸಿದ್ದಾರೆ. ಹೀಗಾಗಿ ತಡೆಯಾಜ್ಞೆ ತರುವ ನಿರ್ಧಾರವನ್ನ ಭಟ್ಟರು ಬದಲಾಯಿಸಿಕೊಂಡಿದ್ದಾರೆ.
ಸದ್ಯಕ್ಕೆ ತಾತ್ಕಾಲಿಕ ಅಂತ್ಯ
ಸದ್ಯಕ್ಕೆ ಭಟ್ ಮತ್ತು ಶ್ರೀನಿವಾಸ್ ಅವರ ನಡುವಿನ ವಿವಾದ ತಾತ್ಕಾಲಿಕವಾಗಿ ಅಂತ್ಯವಾಗಿದೆ. ಒಂದು ವೇಳೆ ಶ್ರೀನಿವಾಸ್ ಅವರು ಕೊಟ್ಟಿರುವ ಚೆಕ್ ಬೌನ್ಸ್ ಆದರೆ, ಯೋಗರಾಜ್ ಭಟ್ ಅವರು ಮತ್ತೆ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಆದ್ರೆ, 'ಭರ್ಜರಿ' ಬಿಡುಗಡೆಗೆ ಯಾವುದೇ ಸಮಸ್ಯೆ ಆಗಲ್ಲ.