Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯ ಪಕ್ಷಗಳಿಂದ ಭಟ್ರಿಗೆ ಆಗುತ್ತಿದೆಯಂತೆ ಹಿಂಸೆ
Recommended Video
ಸದ್ಯ ದೇಶದಲ್ಲಿ ರಾಜಕೀಯ ರಣರಂಗ ಕಾವೇರಿದೆ. ಅದರಲ್ಲೂ ಕರ್ನಾಟಕದ ರಾಜಕೀಯ ಕಣ ಮತ್ತಷ್ಟು ರಂಗೇರಿದೆ. ರಾಜಕೀಯ ವ್ಯಕ್ತಿಗಳೊಂದಿಗೆ ಸ್ಯಾಂಡಲ್ ವುಡ್ ನ ಕೆಲವು ಮಂದಿಯ ಹೆಸರುಗಳು ಕೇಳಿ ಬರುತ್ತಿದೆ. ಆ ಪಕ್ಷದ ಪರ, ಇವರ ಪರ.. ಅವರ ಪರ.. ಪ್ರಚಾರಕ್ಕೆ ಹೋಗುತ್ತಾರೆ ಅನ್ನೋ ಮಾತುಗಳು ಹರಿದಾಡುತ್ತಿವೆ. ಈ ವಿಚಾರವಾಗಿ ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಹೆಸರು ಕೂಡ ಕೇಳಿಬರುತ್ತಿದೆ.
ಭಟ್ಟರ ಹೆಸರನ್ನು ಮಾತ್ರವಲ್ಲದೆ ಅವರ ಕವನದ ಸಾಲುಗಳು ಮತ್ತು ಗಾದೆ ರೀತಿಯ ಬರಹಗಳನ್ನು ರಾಜಕೀಯವಾಗಿ ಬಳಕೆಯಾಗುತ್ತಿವುದನ್ನು ನೋಡಲು ಹಿಂಸೆಯಾಗುತ್ತಿದೆ ಎಂದು ಯೋಗರಾಜ್ ಭಟ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ದಯವಿಟ್ಟು ನನ್ನನ್ನ ಯಾವುದೇ ಪಕ್ಷದ ಜೊತೆ ಸೇರಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ರೇಸ್ ನಷ್ಟೇ ಕಿಕ್ ಕೊಡ್ತಿದೆ ಭಟ್ಟರ 'ಪಂಚತಂತ್ರ'
ಈ ಬಗ್ಗೆ ಒಂದು ಪತ್ರ ಬರೆದಿರುವ ಭಟ್ರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 'ಸಕಲರಿಗೂ ನಮಸ್ತೆ ಇದೊಂದು ಸಣ್ಣ ಭಿನ್ನವತ್ತಳೆ ನಾನು ಯಾವುದೇ ಥರದ ರಾಜಕಾರಣದ ಆರಾಧಕ ಅಲ್ಲ. ಎಡ ಬಲ ಮಧ್ಯ ಮೇಲೆ ಕೆಳಗೆ ಜಾತಿ ಪಾತಿ ಯಾವುದಕ್ಕೂ ನಾ ಸೇರಿಲ್ಲ. ನನ್ನ ಕೆಲವು ಕವನದ ಸಾಲುಗಳನ್ನು, ಗಾದೆ ರೀತಿಯ ಬರಹಗಳನ್ನು ರಾಜಕೀಯ ಪಕ್ಷಗಳು ಸುಮ್ಮನೇ ಬಳಸಿಕೊಳ್ಳುತ್ತಿವೆ, ಅದೊಂಥರ ಹಿಂಸೆ. ಆದರಿಂದ ಓದಗರು ಅಥವಾ ನೋಡುಗರು ನನ್ನನ್ನು ಯಾವುದೇ ಪಕ್ಷಕ್ಕು ಸೇರಿಸದೇ ಜೋಡಿಸದೇ ನನ್ನ ರಾಜಕೀಯ ನಿರ್ಲಿಪ್ತತೆಯನ್ನು ಕಾಪಾಡಬೇಕಾಗಿ ಪ್ರಾರ್ಥನೆ'. ನಿಮ್ಮವನು ಯೋಗರಾಜ್ ಭಟ್.
ಮಂಗಳೂರಿನಲ್ಲಿ ಸಾಗಿದೆ 'ಪಂಚತಂತ್ರ' ಪ್ರಚಾರ
ಚುನಾವಣೆ ಬಂದ ಸಮಯದಲ್ಲೆಲ್ಲ ಭಟ್ರು ಒಂದು ಹಾಡನ್ನು ತಯಾರಿಸುತ್ತಾರೆ. ಎಲ್ಲರೂ ಓಟ್ ಮಾಡಿ ಎಂದು ಜಾಗೃತಿ ಮೂಡಿಸುವ ಜೊತೆಗೆ ಉತ್ತಮರನ್ನು ಆಯ್ಕೆ ಮಾಡಿ ಎಂಬ ಸಂದೇಶವನ್ನು ಹಾಡಿನ ಮೂಲಕ ಜನರಿಗೆ ತಲುಪಿಸುತ್ತಾರೆ. ಆದರೆ ಇದುವರೆಗೂ ಭಟ್ರು ಯಾವುದೇ ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡಿಲ್ಲ. ಹಾಗಾಗಿ ಭಟ್ರು ಹೆಸರನ್ನು ರಾಜಕೀಯದಲ್ಲಿ ಎಳೆದು ತರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.