Don't Miss!
- Automobiles Maruti Suzuki: 1 ವರ್ಷದಲ್ಲಿಯೇ ಹೊಸ ದಾಖಲೆ.. 134,735 ಫ್ರಾಂಕ್ಸ್ ಕಾರುಗಳು ಮಾರಾಟ, ಬೆಲೆ ರೂ.7.51 ಲಕ್ಷ
- News Water Crisis: ಜಲಕ್ಷಾಮ ತಡೆಗೆ ಜಲಸಂರಕ್ಷಣೆಯೇ ಪರಿಹಾರ: ಎಚ್ಚೆತ್ತುಕೊಳ್ಳುತ್ತಾ ಸರ್ಕಾರ?
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಠ ಗುರುಪ್ರಸಾದ್ ಹ್ಯಾಟ್ರಿಕ್ ಹೊಡೀತಾರಾ?
ಚಲನಚಿತ್ರ ನಿರ್ದೇಶನಕನೊಬ್ಬನ ಒದ್ದಾಟಗಳೇ ಈ ಚಿತ್ರದ ಕಥಾವಸ್ತು. ಆರಂಭದಲ್ಲಿ ಕೋಮಲ್ ಅವರನ್ನು ನಾಯಕ ನಟನನ್ನಾಗಿ ಆಯ್ಕೆ ಮಾಡಲಾಗಿತ್ತು. ಸಂಪೂರ್ಣ ಕಥೆ ಕೇಳಿದ ಬಳಿಕ ಅವರು ಕೈಎತ್ತಿದರು. ಪತ್ರಿಕಾಗೋಷ್ಠಿಯನ್ನೂ ಕರೆದು ನಾನು ಆ ಚಿತ್ರದಲ್ಲಿ ಅಭಿನಯಿಸುತ್ತಿಲ್ಲ ಎಂದು ಹೇಳಿದರು.
ಬಳಿಕ ಕಥೆಯಲ್ಲಿ ಒಂಚೂರು ಬದಲಾವಣೆಗಳನ್ನು ಮಾಡಿಕೊಂಡು ಹೊಸಬರಿಗೆ ಬಣ್ಣ ಹಾಕಿಸಿದರು ಗುರುಪ್ರಸಾದ್. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಸಹ ಅವರದೇ. ಅವರ ಮೆಚ್ಚಿನ ತಾಂತ್ರಿಕ ಬಳಗವಾದ ಅನೂಪಿ ಸೀಳಿನ್ (ಸಂಗೀತ), ಮಹೇಂದ್ರ ಸಿಂಹ (ಛಾಯಾಗ್ರಹಣ) ಜೊತೆಗಿದೆ.
ಸಿನಿಮಾ 'ಸಂಬಂಧ ಸುತ್ತ' ಕಥೆ ಸುತ್ತುತ್ತದೆ. ಗಾಂಧಿನಗರಕ್ಕೆ ಹತ್ತಿರವಾದ ಸಬ್ಜೆಕ್ಟ್. ಮಠ, ಎದ್ದೇಳು ಮಂಜುನಾಥ ಚಿತ್ರಗಳ ಯಶಸ್ಸಿನ ನಂತರ ನಮಗೊಂದು ಚಿತ್ರ ಮಾಡಿಕೊಡಿ ಎಂದು ಸಾಕಷ್ಟು ನಿರ್ಮಾಪಕರು ಗುರು ಬೆನ್ನಿಗೆ ಬಿದ್ದರೂ ಪ್ರಯೋಜನವಾಗಿರಲಿಲ್ಲ.
ಕಡೆಗೆ ಅಜೇಯ ಪಿಕ್ಚರ್ಸ್ ಹಾಗೂ ಗುರುಪ್ರಸಾದ್ ಇಂಕ್ ಲಾಂಛನದಲ್ಲಿ ಎಂ.ಗೋವಿಂದ ನಿರ್ಮಿಸಿರುವ ಚಿತ್ರಕ್ಕೆ ಓಕೆ ಎಂದರು. ಬಿ.ಎಸ್.ಕೆಂಪರಾಜ್ ಸಂಕಲನ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ.
ಚಿಂತಾಮಣಿಯ ಹೆಮ್ಮೆಯ ಕವಿ ಬಿ.ಆರ್.ಲಕ್ಷ್ಮಣರಾವ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಗುರುಪ್ರಸಾದ್ ಅವರೇ ಕಲಾ ನಿರ್ದೇಶನ ಮಾಡಿರುವ ಈ ಚಿತ್ರದ ತಾರಾಬಳಗದಲ್ಲಿ ಧನಂಜಯ್, ರಂಗಾಯಣರಘು, ಪೂಜಾಗಾಂಧಿ, ರಾಮ್ ಮುಂತಾದವರಿದ್ದಾರೆ. (ಏಜೆನ್ಸೀಸ್)