Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇಂದ್ರದ ಹೊಸ ರೈತ ಕಾಯ್ದೆ ಬೆನ್ನಲ್ಲೆ ರೈತರ ಪರ ದನಿ ಎತ್ತಿದ ಶ್ರೀಮುರಳಿ
ಕೇಂದ್ರ ಸರ್ಕಾರ ಹೊಸ ರೈತ ಕಾಯ್ದೆಯನ್ನು ಜಾರಿಗೊಳಿಸಿದ ಮೇಲೆ ರೈತರ ಭವಿಷ್ಯದ ಬಗ್ಗೆ ತೀವ್ರತರವಾದ ಚರ್ಚೆಗಳು ಎದ್ದಿವೆ.
ಬಿಜೆಪಿ ಮತ್ತು ಅದರ ಕೆಲವು ಮಿತ್ರ ಪಕ್ಷಗಳು ಕೇಂದ್ರದ ಹೊಸ ಕಾಯ್ದೆಯನ್ನು ರೈತ ಪರವೆನ್ನುತ್ತಿದ್ದರೆ, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಹೊಸ ರೈತ ಕಾಯ್ದೆಯು ರೈತರ ಭವಿಷ್ಯ ನಿರ್ನಾಮ ಮಾಡುತ್ತದೆ ಎನ್ನುತ್ತಿವೆ.
ವಿಜಯ್ ಸೇತುಪತಿ ಅಥವಾ ಜಗಪತಿ ಬಾಬು: 'ಮದಗಜ'ನಿಗೆ ಯಾರಾಗಲಿದ್ದಾರೆ ವಿಲನ್?
ಕಾಯ್ದೆಯನ್ನು ವಿರೋಧಿಸಿ ದೇಶದ ಹಲವೆಡೆಗಳಲ್ಲಿ ಈಗಾಗಲೇ ಪ್ರತಿಭಟನೆಗಳು ನಡೆದಿವೆ. ಸಂಸತ್ತಿನಲ್ಲೂ ಪ್ರತಿಭಟನೆಗಳು ನಡೆದಿವೆ. ರಾಜ್ಯದಲ್ಲಿ ಸಹ ಸೆಪ್ಟೆಂಬರ್ 28 ಕ್ಕೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ನಡುವೆ ನಟ ಶ್ರೀಮುರಳಿ ರೈತರ ಪರವಾಗಿ ಟ್ವೀಟ್ ಒಂದನ್ನು ಮಾಡಿದ್ದಾರೆ.
ನಾವೆಲ್ಲರೂ ಕೃಷಿ ಹಿನ್ನೆಲೆಯಿಂದ ಬಂದವರು: ಶ್ರೀಮುರಳಿ
ಬುಧವಾರ ಮಧ್ಯಾಹ್ನ ಟ್ವೀಟ್ ಮಾಡಿರುವ ಶ್ರೀಮುರಳಿ, 'ಒಂದಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ, ಅದು ಯಾರೇ ಆದರೂ ಸರಿ, ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು ಬೆವರು ಹರಿಸಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲ ಅಚ್ಚುಕಟ್ಟಾಗಿ ಕುಳಿತು ಭೋಜನ ಸವಿಯುವುದು' ಎಂದಿದ್ದಾರೆ.
ರೈತರ ಬಗ್ಗೆ ಅಗೌರವ ತರವಲ್ಲ: ಶ್ರೀಮುರಳಿ
ಮುಂದುವರೆದು, 'ಯಾರೇ ಆದರೂ ಸರಿ, ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ' ಎಂದಿದ್ದಾರೆ ಶ್ರೀಮುರಳಿ. ರೈತಪರವಾದ ಶ್ರೀಮುರಳಿ ಮಾತಿಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುರಳಿ ಕೇಂದ್ರದ ಹೊಸ ಕಾಯ್ದೆಯನ್ನು ಗಮನದಲ್ಲಿಟ್ಟುಕೊಂಡೇ ಟ್ವೀಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ವಿದ್ಯಾರ್ಥಿಗಳ ಪರ ಶ್ರೀಮುರಳಿ, ಧ್ರುವ ಸರ್ಜಾ ದನಿ
ಮುರಳಿ ಟ್ವೀಟ್ನಲ್ಲಿ ಸ್ಪಷ್ಟತೆ ಇಲ್ಲ
ರೈತರ ಕುರಿತಾದ ಕೇಂದ್ರದ ಹೊಸ ಕಾಯ್ದೆಗಳ ಕುರಿತಾಗಿಯೇ ಶ್ರೀಮುರಳಿ ಟ್ವೀಟ್ ಮಾಡಿದ್ದಾದರೆ, ಅವರ ಟ್ವೀಟ್ನಲ್ಲಿ ಸ್ಪಷ್ಟತೆ ಇಲ್ಲ. ಅವರು ಕಾಯ್ದೆಗಳ ಪರವಾಗಿದ್ದಾರೆಯೇ ಅಥವಾ ಕಾಯ್ದೆಗಳು ರೈತರಿಗೆ ಅಪಾಯಕಾರಿಯಾಗಲಿವೆ ಎಂಬುದನ್ನು ಟ್ವೀಟ್ ಮೂಲಕ ಹೇಳುತ್ತಿದ್ದಾರೆಯೇ ಎಂಬುದು ಸ್ಪಷ್ಟವಿಲ್ಲ. ಆದರೆ ರೈತರ ಪರ ಕಾಳಜಿಯಂತೂ ಟ್ವೀಟ್ನಲ್ಲಿದೆ.
Recommended Video
ಮದಗಜ ಚಿತ್ರೀಕರಣದಲ್ಲಿ ಶ್ರೀಮುರಳಿ ಬ್ಯುಸಿ
ಶ್ರೀಮುರಳಿ ಪ್ರಸ್ತುತ 'ಮದಗಜ' ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಕೊರೊನಾ ಲಾಕ್ಡೌನ್ ನಿಂದಾಗಿ ನಿಂತಿದ್ದ ಚಿತ್ರೀಕರಣ ಈಗಷ್ಟೆ ಪುನರ್ಪ್ರಾರಂಭವಾಗಿದೆ. ಸಿನಿಮಾದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿದ್ದಾರೆ.