Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಬಾಳಿನ ಜೊತೆ ಚೆಲ್ಲಾಟವಾಡಬೇಡಿ, ದುನಿಯಾ ವಿಜಯ್
ಚಿತ್ರಕ್ಕೆ ಹಾಕಿದ ದುಡ್ಡನ್ನು ಒಂದೇ ವಾರದಲ್ಲಿ ಬಾಚಿಕೊಳ್ಳಬೇಕೆಂದು ಕೆಲವೊಂದು ವಿತರಕರು ನೂರಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡುತ್ತಾರೆ. ಎರಡನೇ ವಾರಕ್ಕೆ ಅರ್ಧಕ್ಕರ್ಧ ಚಿತ್ರಮಂದಿರದಲ್ಲಿ ತೆಗೆದು ಬಿಡುತ್ತಾರೆ.
ಒಂದೇ ಚಿತ್ರವನ್ನು ಅಕ್ಕಪಕ್ಕದ ಚಿತ್ರಮಂದಿರದಲ್ಲಿ ಪ್ರದರ್ಶಿಸಿದರೆ ಚಿತ್ರ ಎಲ್ಲಿಂದ ಓಡುತ್ತೆ? ನಿಮ್ಮ ವ್ಯವಹಾರದಲ್ಲಿ ನಮ್ಮ ಬಾಳು ಅಡಗಿದೆ ಸ್ವಾಮಿ, ಒಮ್ಮೆಲೇ ದುಡ್ಡು ಬಾಚಿಕೊಳ್ಳಲು ಹೋಗಿ ನಮ್ಮನ್ನು ಮಲಗಿಸಬೇಡಿ ಎಂದು ದುನಿಯಾ ವಿಜಯ್ ಖಾರವಾಗಿ ನುಡಿದಿದ್ದಾರೆ.
ಬಿಡುಗಡೆಗೆ ಸನ್ನದ್ದವಾಗಿರುವ ದುನಿಯಾ ವಿಜಯ್, ಐಂದ್ರಿತಾ ಪ್ರಮುಖ ಭೂಮಿಕೆಯ 'ರಜನಿ ಕಾಂತ' ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವಿಜಯ್, ದಯವಿಟ್ಟು ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಬೇಡಿ. ಕಮ್ಮಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಿ. ಚಿತ್ರಕ್ಕೆ ಒಳ್ಳೆಯ ಪ್ರಮೋಷನ್ ಕೊಡಿ ಎಂದು ವಿಜಯ್ ನಿರ್ಮಾಪಕ ಕೆ ಮಂಜು ಮತ್ತು ವಿತರಕ ಪ್ರಸಾದ್ ಬಳಿ ಮನವಿ ಮಾಡಿದ್ದಾರೆ.
ಕನ್ನಡ ಚಿತ್ರರಂಗ ನಾನು ಬಿಡುತ್ತೇನೆ, ನನಗೆ ಇಲ್ಲಿ ಸಾಕಾಗಿ ಹೋಗಿದೆ ಎಂದು ಕೆಲವೇ ತಿಂಗಳಿನ ಹಿಂದೆ ವಿತರಕ ಪ್ರಸಾದ್ ಕನ್ನಡ ಚಿತ್ರರಂಗದಿಂದ ದೂರವಾಗಿದ್ದರು. ಈಗ ಸ್ನೇಹಿತ ಕೆ ಮಂಜು ಕರೆಗೆ ಓಗೊಟ್ಟು ಮತ್ತೆ ವಿತರಕರಾಗಿ ವಾಪಾಸ್ಸಾಗಿದ್ದಾರೆ.