Don't Miss!
- News ಹಾಸನ ಪೆನ್ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಮಹಿಳಾ ಆಯೋಗ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕಕ್ಕೆ ಅಡ್ಡಿ
ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ ಸ್ಮಾರಕದ ಬಳಿಯೇ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದರು. ಆದರೆ, ಈಗ ಇದಕ್ಕೆ ಅಡ್ಡಿ ಎದುರಾಗಿದೆ.
ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ ಮಾಡಬಾರದು ಎಂದು ವಕೀಲ ಪಿ.ಆರ್.ದೇಸಾಯಿ ಅವರು ಇಂದು ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಪಿಐಎಲ್ ಸಲ್ಲಿಸಿದ್ದಾರೆ. ಅಂಬರೀಶ್ ಅವರ ಅಂತಿಮ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ಮಾಡಬಾರದು ಎಂದು ವಕೀಲರು ತಕರಾರು ತೆಗೆದಿದ್ದಾರೆ.
ಹೀಗೆ ನಟ-ನಟಿಯರ ಅಂತಿಮ ಸಂಸ್ಕಾರವನ್ನು ಕಂಠೀರವ ಸ್ಟುಡಿಯೋದಲ್ಲಿ ಮಾಡುತ್ತಾ ಹೋದರೆ ಕೊನೆಗೆ ಅದು ರುದ್ರಭೂಮಿ ಆಗಿ ಬಿಡುತ್ತದೆ ಎಂದು ವಕೀಲರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.
ಕಂಠೀರವ ಸ್ಟುಡಿಯೋ ಇರುವುದು ಸಿನಿತಾರೆಗಳ ಅಂತಿಮ ಸಂಸ್ಕಾರಕ್ಕಲ್ಲ ಸಿನಿಮಾ ಕಾರ್ಯಕ್ಕಾಗಿ ಆ ಸ್ಟುಡಿಯೋ ಇದೆ ಅದನ್ನು ಅದೇ ಕಾರಣಕ್ಕೇ ಬಳಸಬೇಕು ಎಂದು ವಕೀಲರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹೇಳಿದ್ದಾರೆ.
ಭಾನುವಾರವಾದ
ಇಂದು
ಸಾರ್ವಜನಿಕ
ಹಿತಾಸಕ್ತಿ
ಅರ್ಜಿಯ
ಬಗ್ಗೆ
ವಕೀಲರಿಗೆ
ಮೌಖಿಕವಾಗಿ
ಸೂಚನೆ
ನೀಡಿದ
ಹೈಕೋರ್ಟ್
ನ್ಯಾಯಮೂರ್ತಿ
ಅವರು,
ಈ
ಅರ್ಜಿಯು
ಇತರೆ
ಸಾಮಾನ್ಯ
ಅರ್ಜಿಗಳಂತೆ
ವಿಚಾರಣೆಗೆ
ಬರಲಿದೆ
ಎಂದು
ಹೇಳಿದ್ದಾರೆ.
ನಾಳೆ
ಅಂಬರೀಶ್
ಅವರ
ಅಂತಿಮ
ಸಂಸ್ಕಾರ
ಮುಗಿದ
ನಂತರವೇ
ಪಿಐಎಲ್
ವಿಚಾರಣೆಗೆ
ಬರಲಿದೆ.