Don't Miss!
- Sports IPL 2024: ಚಿನ್ನಸ್ವಾಮಿ ಸಾಮ್ರಾಜ್ಯದಲ್ಲಿ ರಾಜ್ಯಭಾರ ಮಾಡಿದ ವಿರಾಟ್; KKRಗೆ ಸವಾಲಿನ ಗುರಿ ನೀಡಿದ RCB
- Lifestyle 10 ವರ್ಷದಿಂದ ನಿರಂತರ ರಕ್ತ ಕುಡಿಯುತ್ತಿರುವ ಯುವತಿ..! ರಕ್ತವೇ ಟೀ, ಅದರಲ್ಲೇ ಊಟ..!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಾರ್ವತಮ್ಮಗೆ ಮುಂದುವರೆದ ಚಿಕಿತ್ಸೆ: ಪ್ರತಿ 3 ಗಂಟೆಗೊಮ್ಮೆ ಡಯಾಲಿಸಿಸ್
ಕಳೆದ ಒಂದು ವಾರದಿಂದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ.ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲವೆಂದು ಎಂ.ಎಸ್ ರಾಮಯ್ಯ ಆಸ್ಪತ್ರೆಯ ವ್ಯದ್ಯರು ಸ್ಪಷ್ಟಪಡಿಸಿದ್ದಾರೆ.[ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ: ವೈದ್ಯರ ಸ್ಪಷ್ಟನೆ]
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಪಾರ್ವತಮ್ಮ ಅವರು ಸದ್ಯ, ವೆಂಟೀಲೆಟರ್ ಮೂಲಕವೇ ಉಸಿರಾಟ ಮಾಡುತ್ತಿದ್ದಾರೆ. ಯೂರಿನ್ ಔಟ್ ಪುಟ್ ಕಮ್ಮಿಯಿರುವುದರಿಂದ ಅವರಿಗೆ ಡಯಾಲಿಸಿಸ್ ಶುರು ಮಾಡಲಾಗಿದೆ. ಪಾರ್ವತಮ್ಮ ಅವರಿಗೆ ಬಿಪಿ 140, ಕ್ರಿಯೋಟಿನ್ 1.2 ಇದೆ. ಪ್ರತಿ ಮೂರು ಗಂಟೆಗೊಮ್ಮೆ ಡಯಾಲಿಸಿಸ್ ಮಾಡಲಾಗುತ್ತಿದೆ. ನಿನ್ನೆಗೆ ಹೋಲಿಸಿದರೆ ಇಂದು ಯಾವುದೇ ವ್ಯತ್ಯಾಸವಿಲ್ಲ. ಪಾರ್ವತಮ್ಮ ಅವರು ಯಥಾಸ್ಥಿತಿಯಲ್ಲಿದ್ದಾರೆ, ವೆಂಟೀಲೆಟರ್ ನಿಂದ ಹೊರಗಡೆ ಬರುವವರಿಗೂ ಸೇಪ್ ಎಂದು ಹೇಳಲು ಸಾಧ್ಯವಿಲ್ಲ ಎಂದು ಎಂ.ಎಸ್. ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸಂಜಯ್ ಕುಲಕರ್ಣಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.[ಪಾರ್ವತಮ್ಮ ರಾಜ್ ಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರು: ಅವರಿಗೆ ಏನಾಗಿದೆ.?]
ಮೇ 14 ರಂದು ಪಾರ್ವತಮ್ಮ ರಾಜ್ ಕುಮಾರ್ ಅವರು ಆಸ್ಪತ್ರೆ ಸೇರಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆಸ್ಪತ್ರೆ ಬಳಿ ಡಾ.ರಾಜ್ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಸೇರಿದಂತೆ ಡಾ.ರಾಜ್ ಕುಟುಂಬಸ್ಥರು ಇದ್ದಾರೆ.[ಪಾರ್ವತಮ್ಮ ಜೊತೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್]