TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ಕಳಸಾ-ಬಂಡೂರಿ ಬಗ್ಗೆ ಸಾಕ್ಷ್ಯಚಿತ್ರ ಮಾಡಲಿದ್ದಾರೆ ಪೂಜಾಗಾಂಧಿ
'ದಂಡುಪಾಳ್ಯ' ನಟಿ ಪೂಜಾ ಗಾಂಧಿ 'ಅಭಿನೇತ್ರಿ' ಚಿತ್ರದ ಮೂಲಕ ಭಾರಿ ಸುದ್ದಿಯಾಗಿ 'ರಾವಣಿ' ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.
ಅಂದಹಾಗೆ ಇದೀಗ ಪೂಜಾ ಗಾಂಧಿ ಅವರು ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನದ ಬಗ್ಗೆ ಒಂದು ಸಾಕ್ಷ್ಯಚಿತ್ರ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ.
ನಟಿ ಪೂಜಾ ಗಾಂಧಿ ಅವರು ತಮ್ಮ ಮುಂದಿನ ಚಿತ್ರ 'ರಾವಣಿ' ಗೆ ತಾವೇ ಬಂಡವಾಳ ಹಾಕುತ್ತಿದ್ದು, ಇದೀಗ ಕಳಸಾ-ಬಂಡೂರಿ ಯೋಜನೆಯ ಸಾಕ್ಷ್ಯಚಿತ್ರಕ್ಕೂ ಇವರೇ ಬಂಡವಾಳ ಹೂಡುತ್ತಿದ್ದಾರೆ. ಇನ್ನೇನು ಕೆಲವು ತಿಂಗಳುಗಳಲ್ಲಿ ಈ ವಿಶೇಷ ಸಾಕ್ಷ್ಯಚಿತ್ರ ಹೊರಬರಲಿದೆ. [ಕಳಸಾ-ಬಂಡೂರಿಗೆ ಸ್ಯಾಂಡಲ್ ವುಡ್ ಕಿಚ್ಚು ; ಯಾರು ಏನು ಹೇಳಿದರು?]
ಉತ್ತರ ಕರ್ನಾಟಕದಲ್ಲಿ ರೈತರು ಕುಡಿಯುವ ನೀರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಡೀ ಕನ್ನಡ ಚಿತ್ರರಂಗ ಪಾಲ್ಗೊಂಡು ಎಲ್ಲಾ ರೈತ ಜನತೆ ಹಾಗೂ ಹೋರಾಟಗಾರರನ್ನು ಪ್ರೋತ್ಸಾಹಿಸಿದೆ.[ನರೇಂದ್ರ ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ]
ಇನ್ನು ಈ ವಿಶೇಷ ಸಾಕ್ಷ್ಯಚಿತ್ರವು ಇದೇ ತಿಂಗಳ ಕೊನೆಯಲ್ಲಿ ಫ್ರೊ ಎಂ.ಡಿ ನಂಜುಂಡ ಸ್ವಾಮಿ ಸ್ಮರಣಾರ್ಥ ಅಮೃತ ಭೂಮಿ ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
ಸದ್ಯಕ್ಕೆ ಅರ್ಧದಷ್ಟು ಸ್ಯಾಂಡಲ್ ವುಡ್ ತಾರೆಯರು ಉತ್ತರ ಕರ್ನಾಟಕದ ಕಳಸಾ-ಬಂಡೂರಿ ಯೋಜನೆಯ ಹೋರಾಟದಲ್ಲಿ ಭಾಗವಹಿಸಿ ಮತ್ತೊಮ್ಮೆ ಗೋಕಾಕ್ ಚಳುವಳಿಯ ನೆನಪುಗಳನ್ನು ಹೊತ್ತು ತಂದಿದ್ದಾರೆ.[ನೀರು ಹಂಚಿಕೆ ವಿವಾದಕ್ಕೆ ರಿಯಲ್ ಸ್ಟಾರ್ ಉಪ್ಪಿಯಿಂದ ಪರಿಹಾರ]
'ಮುಂಗಾರು ಮಳೆ' ಚಿತ್ರದ ಯಶಸ್ಸಿನ ನಂತರ ಬೇರೆ ಯಾವುದೇ ಚಿತ್ರಗಳಲ್ಲಿ ಅಷ್ಟಾಗಿ ಯಶಸ್ಸು ಗಳಿಸದ ಪೂಜಾ ಗಾಂಧಿ ಸದಾ ಒಂದಲ್ಲ ಒಂದು ವಿಷಯಗಳಲ್ಲೂ ಸುದ್ದಿಯಾಗುತ್ತಿದ್ದರು.
ಇದೀಗ ಸದ್ಯಕ್ಕೆ ಕಳಸಾ-ಬಂಡೂರಿ ಯೋಜನೆಯ ಮೂಲಕ ಸುದ್ದಿಯಾಗುತ್ತಿದ್ದು, ಇದೇನು, ಒಳ್ಳೆ ವಿಚಾರಕ್ಕೆ ಸುದ್ದಿಯಾಗಿದ್ದಾರೆ ಎಂದು ಸ್ವಲ್ಪ ಮಟ್ಟಿಗೆ ಪ್ರೇಕ್ಷಕರು ಖುಷಿ ಪಡಬಹುದು.