Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳಸಾ-ಬಂಡೂರಿ ಬಗ್ಗೆ ಸಾಕ್ಷ್ಯಚಿತ್ರ ಮಾಡಲಿದ್ದಾರೆ ಪೂಜಾಗಾಂಧಿ
'ದಂಡುಪಾಳ್ಯ' ನಟಿ ಪೂಜಾ ಗಾಂಧಿ 'ಅಭಿನೇತ್ರಿ' ಚಿತ್ರದ ಮೂಲಕ ಭಾರಿ ಸುದ್ದಿಯಾಗಿ 'ರಾವಣಿ' ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.
ಅಂದಹಾಗೆ ಇದೀಗ ಪೂಜಾ ಗಾಂಧಿ ಅವರು ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನದ ಬಗ್ಗೆ ಒಂದು ಸಾಕ್ಷ್ಯಚಿತ್ರ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ.
ನಟಿ ಪೂಜಾ ಗಾಂಧಿ ಅವರು ತಮ್ಮ ಮುಂದಿನ ಚಿತ್ರ 'ರಾವಣಿ' ಗೆ ತಾವೇ ಬಂಡವಾಳ ಹಾಕುತ್ತಿದ್ದು, ಇದೀಗ ಕಳಸಾ-ಬಂಡೂರಿ ಯೋಜನೆಯ ಸಾಕ್ಷ್ಯಚಿತ್ರಕ್ಕೂ ಇವರೇ ಬಂಡವಾಳ ಹೂಡುತ್ತಿದ್ದಾರೆ. ಇನ್ನೇನು ಕೆಲವು ತಿಂಗಳುಗಳಲ್ಲಿ ಈ ವಿಶೇಷ ಸಾಕ್ಷ್ಯಚಿತ್ರ ಹೊರಬರಲಿದೆ. [ಕಳಸಾ-ಬಂಡೂರಿಗೆ ಸ್ಯಾಂಡಲ್ ವುಡ್ ಕಿಚ್ಚು ; ಯಾರು ಏನು ಹೇಳಿದರು?]
ಉತ್ತರ ಕರ್ನಾಟಕದಲ್ಲಿ ರೈತರು ಕುಡಿಯುವ ನೀರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಡೀ ಕನ್ನಡ ಚಿತ್ರರಂಗ ಪಾಲ್ಗೊಂಡು ಎಲ್ಲಾ ರೈತ ಜನತೆ ಹಾಗೂ ಹೋರಾಟಗಾರರನ್ನು ಪ್ರೋತ್ಸಾಹಿಸಿದೆ.[ನರೇಂದ್ರ ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ]
ಇನ್ನು ಈ ವಿಶೇಷ ಸಾಕ್ಷ್ಯಚಿತ್ರವು ಇದೇ ತಿಂಗಳ ಕೊನೆಯಲ್ಲಿ ಫ್ರೊ ಎಂ.ಡಿ ನಂಜುಂಡ ಸ್ವಾಮಿ ಸ್ಮರಣಾರ್ಥ ಅಮೃತ ಭೂಮಿ ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
ಸದ್ಯಕ್ಕೆ ಅರ್ಧದಷ್ಟು ಸ್ಯಾಂಡಲ್ ವುಡ್ ತಾರೆಯರು ಉತ್ತರ ಕರ್ನಾಟಕದ ಕಳಸಾ-ಬಂಡೂರಿ ಯೋಜನೆಯ ಹೋರಾಟದಲ್ಲಿ ಭಾಗವಹಿಸಿ ಮತ್ತೊಮ್ಮೆ ಗೋಕಾಕ್ ಚಳುವಳಿಯ ನೆನಪುಗಳನ್ನು ಹೊತ್ತು ತಂದಿದ್ದಾರೆ.[ನೀರು ಹಂಚಿಕೆ ವಿವಾದಕ್ಕೆ ರಿಯಲ್ ಸ್ಟಾರ್ ಉಪ್ಪಿಯಿಂದ ಪರಿಹಾರ]
'ಮುಂಗಾರು ಮಳೆ' ಚಿತ್ರದ ಯಶಸ್ಸಿನ ನಂತರ ಬೇರೆ ಯಾವುದೇ ಚಿತ್ರಗಳಲ್ಲಿ ಅಷ್ಟಾಗಿ ಯಶಸ್ಸು ಗಳಿಸದ ಪೂಜಾ ಗಾಂಧಿ ಸದಾ ಒಂದಲ್ಲ ಒಂದು ವಿಷಯಗಳಲ್ಲೂ ಸುದ್ದಿಯಾಗುತ್ತಿದ್ದರು.
ಇದೀಗ ಸದ್ಯಕ್ಕೆ ಕಳಸಾ-ಬಂಡೂರಿ ಯೋಜನೆಯ ಮೂಲಕ ಸುದ್ದಿಯಾಗುತ್ತಿದ್ದು, ಇದೇನು, ಒಳ್ಳೆ ವಿಚಾರಕ್ಕೆ ಸುದ್ದಿಯಾಗಿದ್ದಾರೆ ಎಂದು ಸ್ವಲ್ಪ ಮಟ್ಟಿಗೆ ಪ್ರೇಕ್ಷಕರು ಖುಷಿ ಪಡಬಹುದು.