Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳಸಾ-ಬಂಡೂರಿ ಬಗ್ಗೆ ಸಾಕ್ಷ್ಯಚಿತ್ರ ಮಾಡಲಿದ್ದಾರೆ ಪೂಜಾಗಾಂಧಿ
'ದಂಡುಪಾಳ್ಯ' ನಟಿ ಪೂಜಾ ಗಾಂಧಿ 'ಅಭಿನೇತ್ರಿ' ಚಿತ್ರದ ಮೂಲಕ ಭಾರಿ ಸುದ್ದಿಯಾಗಿ 'ರಾವಣಿ' ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಕಾಲಿಡುತ್ತಿದ್ದಾರೆ.
ಅಂದಹಾಗೆ ಇದೀಗ ಪೂಜಾ ಗಾಂಧಿ ಅವರು ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನದ ಬಗ್ಗೆ ಒಂದು ಸಾಕ್ಷ್ಯಚಿತ್ರ ಮಾಡುವ ಪ್ಲಾನ್ ಮಾಡಿಕೊಂಡಿದ್ದಾರೆ.
ನಟಿ ಪೂಜಾ ಗಾಂಧಿ ಅವರು ತಮ್ಮ ಮುಂದಿನ ಚಿತ್ರ 'ರಾವಣಿ' ಗೆ ತಾವೇ ಬಂಡವಾಳ ಹಾಕುತ್ತಿದ್ದು, ಇದೀಗ ಕಳಸಾ-ಬಂಡೂರಿ ಯೋಜನೆಯ ಸಾಕ್ಷ್ಯಚಿತ್ರಕ್ಕೂ ಇವರೇ ಬಂಡವಾಳ ಹೂಡುತ್ತಿದ್ದಾರೆ. ಇನ್ನೇನು ಕೆಲವು ತಿಂಗಳುಗಳಲ್ಲಿ ಈ ವಿಶೇಷ ಸಾಕ್ಷ್ಯಚಿತ್ರ ಹೊರಬರಲಿದೆ. [ಕಳಸಾ-ಬಂಡೂರಿಗೆ ಸ್ಯಾಂಡಲ್ ವುಡ್ ಕಿಚ್ಚು ; ಯಾರು ಏನು ಹೇಳಿದರು?]
ಉತ್ತರ ಕರ್ನಾಟಕದಲ್ಲಿ ರೈತರು ಕುಡಿಯುವ ನೀರಿಗಾಗಿ ನಡೆಸುತ್ತಿರುವ ಹೋರಾಟಕ್ಕೆ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಇಡೀ ಕನ್ನಡ ಚಿತ್ರರಂಗ ಪಾಲ್ಗೊಂಡು ಎಲ್ಲಾ ರೈತ ಜನತೆ ಹಾಗೂ ಹೋರಾಟಗಾರರನ್ನು ಪ್ರೋತ್ಸಾಹಿಸಿದೆ.[ನರೇಂದ್ರ ಮೋದಿಗೆ ಕರ್ನಾಟಕದ ಕೂಗು ಕೇಳಿಸಲಿ: ಚಿತ್ರರಂಗ]
ಇನ್ನು ಈ ವಿಶೇಷ ಸಾಕ್ಷ್ಯಚಿತ್ರವು ಇದೇ ತಿಂಗಳ ಕೊನೆಯಲ್ಲಿ ಫ್ರೊ ಎಂ.ಡಿ ನಂಜುಂಡ ಸ್ವಾಮಿ ಸ್ಮರಣಾರ್ಥ ಅಮೃತ ಭೂಮಿ ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
ಸದ್ಯಕ್ಕೆ ಅರ್ಧದಷ್ಟು ಸ್ಯಾಂಡಲ್ ವುಡ್ ತಾರೆಯರು ಉತ್ತರ ಕರ್ನಾಟಕದ ಕಳಸಾ-ಬಂಡೂರಿ ಯೋಜನೆಯ ಹೋರಾಟದಲ್ಲಿ ಭಾಗವಹಿಸಿ ಮತ್ತೊಮ್ಮೆ ಗೋಕಾಕ್ ಚಳುವಳಿಯ ನೆನಪುಗಳನ್ನು ಹೊತ್ತು ತಂದಿದ್ದಾರೆ.[ನೀರು ಹಂಚಿಕೆ ವಿವಾದಕ್ಕೆ ರಿಯಲ್ ಸ್ಟಾರ್ ಉಪ್ಪಿಯಿಂದ ಪರಿಹಾರ]
'ಮುಂಗಾರು ಮಳೆ' ಚಿತ್ರದ ಯಶಸ್ಸಿನ ನಂತರ ಬೇರೆ ಯಾವುದೇ ಚಿತ್ರಗಳಲ್ಲಿ ಅಷ್ಟಾಗಿ ಯಶಸ್ಸು ಗಳಿಸದ ಪೂಜಾ ಗಾಂಧಿ ಸದಾ ಒಂದಲ್ಲ ಒಂದು ವಿಷಯಗಳಲ್ಲೂ ಸುದ್ದಿಯಾಗುತ್ತಿದ್ದರು.
ಇದೀಗ ಸದ್ಯಕ್ಕೆ ಕಳಸಾ-ಬಂಡೂರಿ ಯೋಜನೆಯ ಮೂಲಕ ಸುದ್ದಿಯಾಗುತ್ತಿದ್ದು, ಇದೇನು, ಒಳ್ಳೆ ವಿಚಾರಕ್ಕೆ ಸುದ್ದಿಯಾಗಿದ್ದಾರೆ ಎಂದು ಸ್ವಲ್ಪ ಮಟ್ಟಿಗೆ ಪ್ರೇಕ್ಷಕರು ಖುಷಿ ಪಡಬಹುದು.