Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಂಗಾರದ ಮನುಷ್ಯ' ಸಿದ್ದಲಿಂಗಯ್ಯ ಕುರಿತು ಸಾಕ್ಷ್ಯಚಿತ್ರ: ವಾರ್ತಾ ಇಲಾಖೆ ಚಿಂತನೆ!
ಕನ್ನಡ ಚಲನಚಿತ್ರರಂಗದ 'ಬಂಗಾರದ ಮನುಷ್ಯ' ನಿರ್ದೇಶಕ ಸಿದ್ದಲಿಂಗಯ್ಯ ಕುರಿತು ಸಾಕ್ಷ್ಯಚಿತ್ರ ನಿರ್ಮಾಣ ಮಾಡಲು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಚಿಂತಿಸುತ್ತಿದೆ.
ಈಗಾಗಲೆ ಸಿದ್ದಲಿಂಗಯ್ಯನವರ ಕುರಿತು ಚಿಕ್ಕ ಸಾಕ್ಷ್ಯಚಿತ್ರ ನಿರ್ಮಾಣವಾಗಿದೆ. ಆದ್ರೀಗ ಸಿದ್ದಲಿಂಗಯ್ಯನವರ ಸಂಪೂರ್ಣ ಜೀವನ ಹಾಗೂ ಸಿನಿಮಾ ಪಯಣ ಕುರಿತು ದೊಡ್ಡ ಸಾಕ್ಷ್ಯಚಿತ್ರವನ್ನ ತಯಾರಿಸಲು ವಾರ್ತಾ ಇಲಾಖೆ ನಿರ್ಧರಿಸಿದೆ ಎಂದು ಇಲಾಖೆಯ ನಿರ್ದೇಶಕ ಎನ್ ಆರ್ ವಿಶುಕುಮಾರ್ ಅವರು ತಿಳಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಇತ್ತೀಚೆಗೆ "ಸಿದ್ದಲಿಂಗಯ್ಯ ನೆನಪು'' ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿಶುಕುಮಾರ್ ಸಿದ್ದಲಿಂಗಯ್ಯನವರ ಸಾಕ್ಷ್ಯಚಿತ್ರದ ಬಗ್ಗೆ ಸ್ವಷ್ಟಪಡಿಸಿದರು.
''ಸಿದ್ದಲಿಂಗಯ್ಯ ಅವರು ಇಲಾಖೆ ನೀಡುವ ಚಲನಚಿತ್ರ ಪ್ರಶಸ್ತಿ ಸಮಿತಿಯ ಅಧ್ಯಕ್ಷರಾಗಿ ದುಡಿದವರು, ಕನ್ನಡ ಚಲನಚಿತ್ರರಂಗಕ್ಕೆ ಗ್ರಾಮೀಣ ಬದುಕಿನ ಅನಾವರಣ ಮಾಡುವ ಮೂಲಕ ಹೊಸ ಟ್ರೆಂಡ್ ಅನ್ನು ಸೃಷ್ಟಿಸಿದರು. ಪ್ರತಿ ಚಿತ್ರದಲ್ಲೂ ನೆನಪಿಟ್ಟುಕೊಳ್ಳುವ ಪಾತ್ರಗಳನ್ನು ಕಟ್ಟಿಕೊಟ್ಟವರು ಎಂದು ಸ್ಮರಿಸಿದರು.
ಸಿದ್ದಲಿಂಗಯ್ಯ ಅವರು 1969ರಲ್ಲಿ ಬಿಡುಗಡೆಯಾದ 'ಮೇಯರ್ ಮುತ್ತಣ್ಣ' ಚಿತ್ರದ ಮೂಲಕ ನಿರ್ದೇಶಕರಾದರು. 'ಬಂಗಾರದ ಮನುಷ್ಯ', 'ಭೂತಯ್ಯನ ಮಗ ಅಯ್ಯು', 'ತಾಯಿಯೇ ದೇವರು', 'ನಮ್ಮ ಸಂಸಾರ', 'ದೂರದ ಬೆಟ್ಟ' ಚಿತ್ರಗಳು ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ.