Don't Miss!
- Automobiles
ದ್ವಿಚಕ್ರ ವಾಹನ ಖರೀದಿಸುತ್ತಿದ್ದೀರಾ? ಇದೇ ತಿಂಗಳ ಪ್ರಮುಖ ಬಿಡುಗಡೆಗಳನ್ನು ಒಮ್ಮೆ ಪರಿಶೀಲಿಸಿ
- News
Budget 2023; ಮೋದಿ ಸರ್ಕಾರದಿಂದ ಸಾವಯವ ಕೃಷಿಗೆ ಒತ್ತು: ಸಂಸದ ಈರಣ್ಣ ಕಡಾಡಿ
- Sports
IND vs NZ 3rd T20: ಸರಣಿ ನಿರ್ಣಾಯಕ 3ನೇ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Lifestyle
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
'ದೊಡ್ಡಹಟ್ಟಿ ಬೋರೇಗೌಡ' ಕಲಾತ್ಮಕ ಚಿತ್ರ ಅಲ್ಲ.. ಕಮರ್ಷಿಯಲ್ ಚಿತ್ರ !
ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಕಂಟೆಂಟ್ ಬೇಸ್ಡ್ ಸಿನಿಮಾಗಳು ಹೆಚ್ಚಾಗಿ ಸೆಟ್ಟೇರುತ್ತಿವೆ. ಒಂದ್ಕಡೆ ಪಕ್ಕಾ ಕಮರ್ಷಿಯಲ್ ಮಾಸ್ ಸಿನಿಮಾ. ಇನ್ನೊಂದು ಕಡೆ ಕಂಟೆಂಟ್ ಸಿನಿಮಾ. ಎರಡೂ ಪ್ರಕಾರದ ಸಿನಿಮಾಗಳನ್ನು ಬ್ಯಾಲೆನ್ಸ್ ಮಾಡಿಕೊಂಡು ಸಿನಿಮಾ ಮಾಡುತ್ತಿದ್ದಾರೆ.
ಇಂತಹ ಕಂಟೆಂಟ್ ಅನ್ನೇ ನಂಬಿಕೊಂಡು ಮಾಡಿರುವ ಸಿನಿಮಾಗಳಲ್ಲಿ 'ದೊಡ್ಡಹಟ್ಟಿ ಬೋರೇಗೌಡ' ಕೂಡ ಒಂದು. ಪಕ್ಕಾ ಗ್ರಾಮೀಣ ಸೊಗಡಿನ ಈ ಸಿನಿಮಾ ತಂಡ ಸದ್ಯ ಟ್ರೈಲರ್ ಅನ್ನು ರಿಲೀಸ್ ಮಾಡಿದೆ. ಈ ಟ್ರೈಲರ್ಗೆ ಸಿನಿಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
'ದಕ್ಷಿಣಕ್ಕಿಂತ
ಬಾಲಿವುಡ್
ಹಾಡುಗಳು
ರೊಮ್ಯಾಂಟಿಕ್'
ಎಂದ
ರಶ್ಮಿಕಾ
ಫುಲ್
ಟ್ರೋಲ್!
'ದೊಡ್ಡಹಟ್ಟಿ ಬೋರೇಗೌಡ' ಸಿನಿಮಾವನ್ನು ಕೆ ಎಂ ರಘು ನಿರ್ದೇಶನ ಮಾಡಿದ್ದು, ಇದು ಪಕ್ಕಾ ಕಮರ್ಷಿಯಲ್ ಸಿನಿಮಾ, ಕಲಾತ್ಮಕ ಸಿನಿಮಾ ಅಂತ ಹೇಳುತ್ತಿದ್ದಾರೆ. " ನಾನು ಈ ಹಿಂದೆ 'ತರ್ಲೆ ವಿಲೇಜ್', 'ಪರಸಂಗ' ಸಿನಿಮಾಗಳನ್ನು ನಿರ್ದೇಶಿಸಿದ್ದೆ. ಈಗ ಗ್ರಾಮೀಣ ಸೊಗಡಿನ 'ದೊಡ್ಡಹಟ್ಟಿ ಬೋರೇಗೌಡ' ಚಿತ್ರವನ್ನು ನಿರ್ದೇಶಿಸಿದ್ದೇನೆ. ನಮ್ಮ ಚಿತ್ರ ಮನೆಯ ಸುತ್ತ ಹೆಣೆಯಲಾಗಿರುವ ಕಥೆ" ಎನ್ನುತ್ತಾರೆ ಕೆ ಎಂ ರಘು.
ಗ್ರಾಮೀಣ ಪ್ರದೇಶದಲ್ಲಿ ಬಡವರಿಗೆ ಸರ್ಕಾರದಿಂದ ಆಶ್ರಯ ಯೋಜನೆಯಲ್ಲಿ ಮನೆಯನ್ನು ನೀಡುತ್ತಾರೆ. ವ್ಯಕ್ತಿಯೊಬ್ಬ ಆ ಮನೆಯನ್ನು ಪಡೆದುಕೊಳ್ಳಲು ಹೇಗೆಲ್ಲ ಕಷ್ಟ ಪಡುತ್ತಾನೆ ಎಂಬುದೇ ಈ ಸಿನಿಮಾದ ಕಥೆ. ಈಗಾಗಲೇ ಈ ಸಿನಿಮಾ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಂಡು, ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಗಿಟ್ಟಿಸಿಕೊಂಡಿದೆ.
ಮತ್ತೊಂದು
ದೊಡ್ಡ
ಬಾಲಿವುಡ್
ಪ್ರಾಜೆಕ್ಟ್
ಬಾಚಿಕೊಳ್ಳುವತ್ತ
ರಶ್ಮಿಕಾ!
'ದೊಡ್ಡಹಟ್ಟಿ ಬೋರೇಗೌಡ' ಸಿನಿಮಾ ಫೆಬ್ರವರಿ ತಿಂಗಳಲ್ಲಿ ತೆರೆಗೆ ಬರಲಿದೆ. ಈ ಸಿನಿಮಾ ವಿಶೇಷ ಅಂದ್ರೆ, ಈ ಕಮರ್ಷಿಯಲ್ ಸಿನಿಮಾಗಳಲ್ಲಿ ಗ್ರಾಮೀಣ ಪ್ರತಿಭೆಗಳೇ ಹೆಚ್ಚು ಅಭಿನಯಿಸಿವೆ. ಮೂರು ತಿಂಗಳ ಕಾಲ ಎಲ್ಲರಿಗೂ ತರಬೇತಿ ನೀಡಿ ಬಳಿಕ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ.

ಮೈಸೂರಿನ ಬಳಿಯ ಬೀರಹುಂಡಿ ಎಂಬ ಹಳ್ಳಿಯ ಶಿವಣ್ಣ ಎಂಬುವವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ರಿಯಲ್ ಲೈಫ್ನಲ್ಲಿ ಗ್ರಾಮ ಪಂಚಾಯತಿ ಸದಸ್ಯರನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ರಂಗಭೂಮಿಯಲ್ಲಿ ನಟಿಸಿದ ಅನುಭವವಿದ್ದು, ಇದು ಶಿವಣ್ಣ ಬೀರಹುಂಡಿಯ ಮೊದಲ ಸಿನಿಮಾ.
ಶಿವಣ್ಣ ಬೀರಹುಂಡಿ ಜೊತೆಗೆ ಗೀತಾ, ಲಾವಣ್ಯ, ಕಲಾರತಿ ಮಹದೇವ್, ಕಾತ್ಯಾಯಿನಿ, ಯೋಗೇಶ್ ಮುಂತಾದ ಕಲಾವಿದರು ನಟಿಸಿದ್ದಾರೆ. ಶಶಿಕುಮಾರ್ ಬಿ ಸಿ ಹಾಗೂ ಲೋಕೇಶ್ ಕೆ.ಎಂ ಸಿನಿಮಾವನ್ನು ನಿರ್ಮಿಸಿದ್ದಾರೆ.