ದರ್ಶನ್-ಸುದೀಪ್ ಗೆಳೆತನ-ಮುನಿಸಿನ ಬಗ್ಗೆ ದೊಡ್ಡಣ್ಣ ಹೇಳಿದ್ದು ಹೀಗೆ
ಕನ್ನಡ ಸಿನಿಮಾರಂಗದ ದೊಡ್ಡ ಸ್ಟಾರ್ ನಟರು ದರ್ಶನ್ ಹಾಗೂ ಸುದೀಪ್. ಮೊದಲು ಬಹು ಆತ್ಮೀಯ ಸ್ನೇಹಿತರಾಗಿದ್ದ ಈ ಜೋಡಿ ಇದೀಗ ಕೆಲವು ವರ್ಷಗಳಿಂದ ಪರಸ್ಪರ ಅಂತರ ಕಾಯ್ದುಕೊಂಡಿದ್ದಾರೆ.
Recommended Video
ಸಾಮಾಜಿಕ ಜಾಲತಾಣದ ಈ ಕಾಲದಲ್ಲಿ ಸ್ಟಾರ್ ವಾರ್ಗಳು ಸಹ ವಿಪರೀತ ಮಟ್ಟಕ್ಕೆ ಏರಿದ್ದು. ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ಮಧ್ಯೆ ಆಗಾಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿನಾಕಾರಣ ವಾಗ್ಯುದ್ಧಗಳು ನಡೆಯುತ್ತಲೇ ಇರುತ್ತವೆ.
ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಇನ್ನೂ ಹಲವಾರು ನಟರೊಂದಿಗೆ ಆತ್ಮೀಯ ಬಾಂಧವ್ಯ ಉಳ್ಳ. ಬಹು ವರ್ಷಗಳಿಂದ ಚಿತ್ರರಂಗವನ್ನು ನೋಡುತ್ತಾ ಬಂದಿರುವ ಹಿರಿಯ ನಟ ದೊಡ್ಡಣ್ಣ, ಇಂದು ಸುದೀಪ್ ಹಾಗೂ ದರ್ಶನ್ ನಡುವಿನ ಗೆಳೆತನದ ಬಗ್ಗೆ ಮಾತನಾಡಿದ್ದಾರೆ.

ಸ್ಟಾರ್ ವಾರ್ ಬಗ್ಗೆ ದೊಡ್ಡಣ್ಣ ಗೆ ಪ್ರಶ್ನೆ
ಬಾಗಲಕೋಟೆಯಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದ ನಟ ದೊಡ್ಡಣ್ಣ ಅವರಿಗೆ ಕನ್ನಡ ಸಿನಿಮಾರಂಗದ ಬಗ್ಗೆ ಸಾಲು-ಸಾಲು ಪ್ರಶ್ನೆಗಳು ಎದುರಾದವು. ಅದರಲ್ಲಿ ಒಂದು ಕನ್ನಡ ಚಿತ್ರರಂಗದ 'ಸ್ಟಾರ್ ವಾರ್' ಕುರಿತಾದದ್ದಾಗಿತ್ತು.

ದೊಡ್ಡಣ್ಣ ಹೇಳಿದ್ದು ಹೀಗೆ
ಈ ಪ್ರಶ್ನೆಗೆ ಉತ್ತರಿಸಿದ ನಟ ದೊಡ್ಡಣ್ಣ, 'ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ವಾರ್ ಎಂಥಹದ್ದೂ ಇಲ್ಲ. ಸುದೀಪ್-ದರ್ಶನ್ ಎಲ್ಲರೂ ಸ್ನೇಹಿತರೇ. ಸೂರ್ಯನ ಬೆಳಕಿಗೆ ಸಣ್ಣ ಮೋಡ ಅಡ್ಡಬಂದಂತೆ ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳು ಬಂದಿರಬಹುದು ಅಷ್ಟೆ' ಎಂದಿದ್ದಾರೆ.

ಇಬ್ಬರಿಗೂ ಕೋಟ್ಯಂತರ ಅಭಿಮಾನಿಗಳಿದ್ದಾರೆ
ದರ್ಶನ್ ಹಾಗೂ ಸುದೀಪ್ ಬಹುತೇಕ ಒಂದೇ ಸಮಯದಲ್ಲಿ ಚಿತ್ರರಂಗದಲ್ಲಿ ನಾಯಕರಾಗಿ ತೆರೆ ಮೇಲೆ ಬಂದವರು. ಇಬ್ಬರೂ ಬಹು ದೊಡ್ಡ ಸ್ಟಾರ್ಗಳಾಗಿ ಚಿತ್ರರಂಗದಲ್ಲಿ ಬೆಳೆದಿದ್ದಾರೆ. ಇಬ್ಬರಿಗೂ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ.

ಇತರ ಭಾಷೆಗಳಿಗೆ ಹೋಲಿಸಿದರೆ ನಮ್ಮಲ್ಲಿ ತುಸು ಕಡಿಮೆಯೇ
ತಮಿಳು, ತೆಲುಗು ಸಿನಿಮಾ ರಂಗಗಳಿಗೆ ಹೋಲಿಸಿದಲ್ಲಿ ಕನ್ನಡದಲ್ಲಿ ಸ್ಟಾರ್ ವಾರ್ಸ್ ತುಸು ಕಡಿಮೆಯೇ. ತಮಿಳಿನಲ್ಲಿ ಅಜಿತ್ ಹಾಗೂ ವಿಜಯ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮಾತ್ರವೇ ಅಲ್ಲದೆ, ಚಿತ್ರಮಂದಿರಗಳಲ್ಲಿಯೂ ಕಿತ್ತಾಡಿದ ಉದಾಹರಣೆ ಇದೆ. ಜೂ.ಎನ್ಟಿಆರ್ ಅಭಿಮಾನಿಯೊಬ್ಬ ಪವನ್ ಕಲ್ಯಾಣ್ ಅಭಿಮಾನಿಗೆ ಚಾಕು ಇರಿದು ಕೊಂದಿದ್ದ ಘಟನೆ ನೆನಪು ಇನ್ನೂ ಮಾಸಿಲ್ಲ.


Click it and Unblock the Notifications











