"ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿದೆ.. ಕನ್ನಡಿಗರು ಮುಟ್ಟಾಳರಲ್ಲ": ಕುಟುಕಿದ ಪವನ್ ಒಡೆಯರ್
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿದ್ದು ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ಹಂಗಾಮಿ ಸಿಎಂಗೆ ಬೊಮ್ಮಾಯಿ ಸಂಜೆ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಇದೆಲ್ಲದೆ ಬೆನ್ನಲ್ಲಿ ಕನ್ನಡ ಸಿನಿಮಾ ನಿರ್ದೇಶಕ ಪವನ್ ಒಡೆಯರ್ ಸಿಎಂ ಬಸವರಾಜ ಬೊಮ್ಮಾಯಿ ಬಗ್ಗೆ ವ್ಯಂಗ್ಯವಾಡಿದ್ದಾರೆ. "ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿದೆ.. ಕನ್ನಡಿಗರು ಮುಟ್ಟಾಳರಲ್ಲ" ಎಂದು ಟ್ವೀಟ್ ಮಾಡಿದ್ದಾರೆ.
"ಕರ್ನಾಟಕದ ಪ್ರಾಚೀನ ಜಾನಪದ ಕಲೆ ಡೊಳ್ಳುಕುಣಿತದ ಕುರಿತು ನಿರ್ಮಿಸಿದ್ದ 'ಡೊಳ್ಳು' ಚಿತ್ರಕ್ಕೆ ರಾಷ್ಟೀಯ ಪ್ರಶಸ್ತಿ ಬಂದಾಗ,ಬೊಮ್ಮಾಯಿ ಮಾಮಗೆ ಚಿತ್ರ ವೀಕ್ಷಿಸಲು ಕೊರಿದ್ದೆವು.ಮಾಮ ತೋರಿದ ದುರಹಂಕಾರ ನನ್ನ ಕಣ್ಣಿನಲ್ಲಿ ಇನ್ನೂ ಹಾಗೆ ಇದೆ.ತೆಲುಗು ಚಿತ್ರದ ಕಾರ್ಯಕ್ರಮಕ್ಕೆ ಮಾಮ 3 ತಾಸು ಕುಳಿತು ಕೊಳ್ಳುವಷ್ಟು ಸಮಯ ಇದೆ.ಕನ್ನಡಿಗರು ಮುಟ್ಟಾಳರಲ್ಲ"

"ಸಿದ್ದರಾಮಯ್ಯ ಸರ್ಗೆ ಒಂದೇ ಒಂದು ಬಾರಿ ಕರೆ ಮಾಡಿದ್ದೆವು. "ಹೌದಾ, ಡೊಳ್ಳು ಕುಣಿತ ನಂಗೆ ಭಾರಿ ಇಷ್ಟ ರೀ" ಎಂದು ಕರೆಕೊಟ್ಟ ಸಂಜೆಯೇ ಬಂದು ಚಿತ್ರ ವೀಕ್ಷಿಸಿ, ಹಾರೈಸಿ, ಹಲವಾರುಕಡೆ ಹೆಮ್ಮೆ ಇಂದ ಮಾತನಾಡಿದ್ದರು. ಕನ್ನಡ ಭಾಷೆ, ಕರ್ನಾಟಕ ಸಂಸ್ಕೃತಿ, ಜಾನಪದ ಕಲೆ. ಇವೆಲ್ಲವನ್ನೂ ಜನ ಮಾರಿಕೊಳ್ಳಲ್ಲ." ಎಂದು ಟ್ವೀಟ್ ಮಾಡಿದ್ದಾರೆ.


Click it and Unblock the Notifications











