Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸನದಲ್ಲಿ 'ಡಾ.ರಾಜ್' ಕಪ್ ಕ್ರಿಕೆಟ್ ಪಂದ್ಯಾವಳಿ
ಸ್ಯಾಂಡಲ್ ವುಡ್ ನಲ್ಲಿ ಈಗ ಕ್ರಿಕೆಟ್ ಹಬ್ಬದ ಸಂಭ್ರಮ. ಸ್ಯಾಂಡಲ್ ವುಡ್ ಕ್ರಿಕೆಟ್ ಲೀಗ್ ಪ್ರಕಟವಾಗಿದ್ದೇ ತಡ ಸಾಲುಸಾಲು ಪಂದ್ಯಾವಳಿಗಳು ಘೋಷಣೆಯಾಗಿವೆ. ಜನವರಿಯಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಡೆದರೆ, ಇದೀಗ 'ಡಾ.ರಾಜ್ ಕಪ್' ಅನೌನ್ಸ್ ಆಗಿದೆ.
ಕಳೆದ ಮೂರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ 'ಡಾ.ರಾಜ್ ಕಪ್' ಕ್ರಿಕೆಟ್ ಪಂದ್ಯಾವಳಿ ನಾಲ್ಕನೇ ಸೀಸನ್ ಗೆ ಕಲಾವಿದರು ಮತ್ತು ತಂತ್ರಜ್ಞರು ಈಗಾಗಲೆ ಭರ್ಜರಿ ತಯಾರಿ ನಡೆಸಿದ್ದಾರೆ. ಈ ಸಲ ಹಾಸನ ಜಿಲ್ಲೆಯಲ್ಲಿ ಪಂದ್ಯಾವಳಿ ನಡೆಯಲಿದೆ. [ಜನವರಿಯಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಹೊಸ ಸೀಸನ್]
ಒಟ್ಟು ಎಂಟು ತಂಡಗಳ ನಡುವೆ ಪಂದ್ಯಾವಳಿ ನಡೆಯಲಿದೆ. ಈಗಾಗಲೆ ಏಳು ತಂಡಗಳು ರೆಡಿಯಾಗಿವೆ. ಹ್ಯಾಟ್ರಿಕ್ ಹೀರೋ ಶಿವಾರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಉಪೇಂದ್ರ, ದುನಿಯಾ ವಿಜಯ್, ಯೋಗಿ, ರಾಜು ಗೌಡ, ಶ್ರೀನಗರಕಿಟ್ಟಿ ತಂಡಗಳ ನಾಯಕತ್ವ ವಹಿಸಲಿದ್ದಾರೆ. [ಸ್ಯಾಂಡಲ್ ವುಡ್ ಕ್ರಿಕೆಟ್ ಲೀಗ್ ಒಗ್ಗಟ್ಟಿನ ಆಟಕ್ಕೆ ರೆಡಿ]
ನವೆಂಬರ್ 9ರಿಂದ ಅಭ್ಯಾಸ ಪಂದ್ಯಗಳು ನಡೆಯಲಿದ್ದು ವಸತಿ ಸಚಿವ ಅಂಬರೀಶ್ ಅವರು ರಾಜ್ ಕಪ್ ಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರ ಸಂಘ, ಛಾಯಾಗ್ರಾಹಕರ ಸಂಘ, ನಿರ್ಮಾಪಕರ ಸಂಘ ಈ ಪಂದ್ಯಾವಳಿಗೆ ಬೆಂಬಲ ಸೂಚಿಸಿವೆ' ಎನ್ನುತ್ತಾರೆ ರಾಜೇಶ್ ಬ್ರಹ್ಮಾವರ್.
ರಾಜ್ ಕಪ್ ಸೀಸನ್ 3ರ ಫೈನಲ್ ಪಂದ್ಯ ಶ್ರೀಲಂಕಾದಲ್ಲಿ ನಡೆದಿತ್ತು. ಇದೀಗ ಸೀಸನ್ ನಾಲ್ಕನ್ನು ಮಲೇಷ್ಯಾದಲ್ಲಿ ನಡೆಯಲಿದೆ. ಡಿಸೆಂಬರ್ 7ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಸುಮಾರು 240 ಕಲಾವಿದರು, ತಂತ್ರಜ್ಞರು ಮಲೇಷ್ಯಾಗೆ ಪ್ರಯಾಣ ಬೆಳಸಲಿದ್ದಾರೆ ಎನ್ನುತ್ತಾರೆ ರಾಜೇಶ್ ಬ್ರಹ್ಮಾವರ್.