Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಾಜಿನಗರದಲ್ಲಿ ಡಾ.ರಾಜ್ ಕಂಚಿನ ಪ್ರತಿಮೆ ಅನಾವರಣ
ವರನಟ ಡಾ. ರಾಜ್ಕುಮಾರ್ ರವರ ಕಂಚಿನ ಪ್ರತಿಮೆಯ ಉದ್ಘಾಟನೆ ಸಮಾರಂಭ ಕೊನೆಗೂ ಅನಾವರಣ ಗೊಂಡಿದೆ. ರಾಜಾಜಿ ನಗರ ಮುಖ್ಯದ್ವಾರದ ಮೇಲ್ಸೇತುವೆ ಬಳಿ ಶ್ರೀ ಕೃಷ್ಣದೇವರಾಯ ಶೈಲಿಯಲ್ಲಿ ಡಾ. ರಾಜ್ ಕುಮಾರ್ ರವರ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲು 10 ವರ್ಷಗಳ ಹಿಂದೆಯೇ ಯೋಜನೆ ನಿರ್ಮಿಸಲಾಗಿತ್ತು. ಪ್ರತಿಮೆ ಅನಾವರಣ ಈಗ ಪೂರ್ಣಗೊಂಡಿದೆ.
'ಡಾ. ರಾಜ್ ಕುಮಾರ್' ರವರ ಕಂಚಿನ ಪ್ರತಿಮೆಯನ್ನು ಕರ್ನಾಟಕ ರಕ್ಷಣಾ ವೇದಿಕೆ, ರಾಜಾಜಿನಗರ ಪದ್ಮಭೂಷಣ ಡಾ. ರಾಜ್ ಕುಮಾರ್ ಪ್ರತಿಷ್ಠಾನ ಮಂಡಳಿ ಸಹಯೋಗದಲ್ಲಿ ನಿರ್ಮಾಣ ಮಾಡಿ ಪ್ರತಿಮೆ ಅನಾವರಣ ಮಾಡಿದೆ.
ರಾಜ್ಕುಮಾರ್ ರವರ ಪ್ರತಿಮೆಯನ್ನು ರಾಜ್ಕುಮಾರ್ ರಸ್ತೆ ಗ್ರೇಡ್ ಸೆಪೆರೇಟರ್ ಕಡೆಯ ಮೆಜೆಸ್ಟಿಕ್ ಭಾಗದ ಕಡೆಯಿಂದ ರಾಜಾಜಿನಗರ ಮುಖ್ಯದ್ವಾರದ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.
ಕಂಚಿನ ಪ್ರತಿಮೆ ಅನಾವರಣ ವೇಳೆ ರಾಜ್ಕುಮಾರ್ ರವರ ಹಿರಿಯ ಪುತ್ರಿ ಲಕ್ಷ್ಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜಾಧ್ಯಕ್ಷ ನಾರಾಯಣ ಗೌಡ, ಸ್ಥಳೀಯ ಅಭಿಮಾನಿಗಳು ಮತ್ತು ಅಭಿಮಾನಿ ಟಿ ವೆಂಕಟೇಶ್ ಮತ್ತು ಇತರರು ಉಪಸ್ಥಿತರಿದ್ದರು. ಡಾ.ರಾಜ್ಕುಮಾರ್ ರವರ ಕಂಚಿನ ಪ್ರತಿಮೆಯು ಶ್ರೀ ಕೃಷ್ಣದೇವರಾಯ ಸಿನಿಮಾ ಪಾತ್ರವನ್ನು ಹೋಲುತ್ತದೆ.