Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ರಾಜ್ ಕುಮಾರ್ 9 ನೇ ಪುಣ್ಯತಿಥಿಗೆ ಜನಸಾಗರ
ಕನ್ನಡ ಕಲಾಲೋಕ ಎಂದಿಗೂ ಮರೆಯದ ಹೆಸರು ಡಾ.ರಾಜ್ ಕುಮಾರ್. ಬೆಳ್ಳಿತೆರೆಯಲ್ಲಿ 5 ದಶಕಗಳ ಕಾಲ ಮಿಂಚಿದ ಈ ಮಹಾನ್ ಚೇತನ ನಮ್ಮನ್ನಗಲಿ ಇಂದಿಗೆ 9 ವರ್ಷ. ಆದ್ರೆ, ನಟಸಾರ್ವಭೌಮನ ನೆನಪು ಮಾತ್ರ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಅಜರಾಮರ.
ಡಾ.ರಾಜ್ ಕುಮಾರ್ ಪುಣ್ಯತಿಥಿಯ ಅಂಗವಾಗಿ ಇಂದು ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಜನಸಾಗರವೇ ಹರಿದು ಬಂದಿತ್ತು. ಮರೆಯದ ಮಾಣಿಕ್ಯ ಮಲಗಿರುವ ಮಣ್ಣಿಗೆ ನಮನ ಸಲ್ಲಿಸುತ್ತಾ ಅಭಿಮಾನಿ ವೃಂದ ಅಣ್ಣಾವ್ರ ಸ್ಮರಣೆ ಮಾಡಿದರು. ['ಬಂಗಾರದ ಮನುಷ್ಯ'ನ ಬಂಗಾರದಂತಹ ಚಿತ್ರಗಳು]
ಪತ್ನಿ ಪಾರ್ವತಮ್ಮ ರಾಜ್ ಕುಮಾರ್, ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಸೇರಿದಂತೆ ರಾಜ್ ಕುಟುಂಬದ ಸದಸ್ಯರು ಡಾ.ರಾಜ್ ಸಮಾಧಿಗೆ ಪೂಜೆ ಸಲ್ಲಿಸಿದರು. [ಡಾ. ರಾಜ್ ನಟಿಸಿದಂತಹ ಕೌಟುಂಬಿಕ ಚಿತ್ರಗಳು ಮರಳಿ ಬರಬಹುದೇ?]
ಇದೇ ವೇಳೆ ನಾಯಂಡಹಳ್ಳಿ-ಕಂಠೀರವ ಸ್ಟುಡಿಯೋ-ತುಮಕೂರು ರಸ್ತೆಗೆ 'ಡಾ.ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ' ಅಂತ ನಾಮಕರಣ ಮಾಡಲಾಯಿತು. ಕೇಂದ್ರ ಸಚಿವ ಅನಂತ್ ಕುಮಾರ್ ಈ ರಸ್ತೆಯನ್ನ ಉದ್ಘಾಟಿಸಿದರು. ಶಾಸಕ ಪ್ರಿಯಾಕೃಷ್ಣ ಮತ್ತು ಡಾ.ರಾಜ್ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. [ನಾವು ನೀವು ಅರಿಯದ ರಾಜ್ ಅಪರೂಪದ ಸಂಗತಿಗಳು]
ವರನಟ ಡಾ.ರಾಜ್ ಕುಮಾರ್ ಅವರಿಗೆ 'ಭಾರತ ರತ್ನ' ನೀಡಬೇಕು ಅಂತ ಇದೇ ಸಂದರ್ಭದಲ್ಲಿ ಅಭಿಮಾನಿಗಳು ಒತ್ತಾಯಿಸಿದರು. ಡಾ.ರಾಜ್ ಪುಣ್ಯತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಟ್ವಿಟ್ಟರ್ ನಲ್ಲೂ ಅಭಿಮಾನಿಗಳು ಡಾ.ರಾಜ್ ಕುಮಾರ್ ಪುಣ್ಯಸ್ಮರಣೆ ಮಾಡುತ್ತಿದ್ದಾರೆ.
<blockquote class="twitter-tweet blockquote" lang="en"><p>Dr Rajkumar fondly remembered on his 9th Death Anni. Still from Movie " Bangarada Manushya" <a href="https://twitter.com/FilmibeatKa">@FilmibeatKa</a> <a href="https://twitter.com/hashtag/%E0%B2%95%E0%B2%A8%E0%B3%8D%E0%B2%A8%E0%B2%A1?src=hash">#ಕನ್ನಡ</a> <a href="http://t.co/QD8Jf1Hcij">pic.twitter.com/QD8Jf1Hcij</a></p>— Shama Sundara S K (@shamsundar_sk) <a href="https://twitter.com/shamsundar_sk/status/587112714922672128">April 12, 2015</a></blockquote> <script async src="//platform.twitter.com/widgets.js" charset="utf-8"></script>
<blockquote class="twitter-tweet blockquote" lang="en"><p>Its 9th death anniversary of Kannada kantirava Dr. Rajkumar. Karnataka still misses him.</p>— Govind Kini (@GRKini) <a href="https://twitter.com/GRKini/status/587190921139068929">April 12, 2015</a></blockquote> <script async src="//platform.twitter.com/widgets.js" charset="utf-8"></script>