Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ. ರಾಜ್ ಕುಟುಂಬದಿಂದ ಐಎಎಸ್ ಆಕಾಂಕ್ಷಿಗಳಿಗೆ ವಿನೂತನ ಕೊಡುಗೆ
ಕರ್ನಾಟಕದ ಗ್ರಾಮೀಣ ಭಾಗದ ರೈತರು ಮತ್ತು ಕಾರ್ಮಿಕ ವರ್ಗದ ಬಡ ಮಕ್ಕಳು ಸಿವಿಲ್ ಸರ್ವೀಸ್ ಮತ್ತು ಯುಪಿಎಸ್ಸಿ ಪರೀಕ್ಷೆ ತರಬೇತಿಗೆಂದು ಬೇರೆ ರಾಜ್ಯಗಳಿಗೆ ಧಾವಿಸುತ್ತಿದ್ದಾರೆ. ಅಲ್ಲಿ ದುಂದು ವೆಚ್ಚ ಮಾಡಿ ತರಬೇತಿ ಪಡೆಯುವುದರ ಜೊತೆಗೆ ನಾನಾ ತರಹದ ಅನಾನುಕೂಲಗಳನ್ನು ಎದುರಿಸುತ್ತಿದ್ದಾರೆ. ಇಂತಹ ಹಲವು ಅಂಶಗಳನ್ನು ಗಮನಿಸಿ ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಕುಟುಂಬದವರು, ಕಡಿಮೆ ದರದಲ್ಲಿ ಕನ್ನಡಿಗರಿಗೆ ಗುಣಮಟ್ಟದ ತರಬೇತಿ ನೀಡಲು "ಡಾ. ರಾಜ್ ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವೀಸ್" ಎಂಬ ಸಂಸ್ಥೆಯನ್ನು ತೆರೆದಿದೆ.
ಅಂದಹಾಗೆ ಕಡಿಮೆ ದರದಲ್ಲಿ ಯುಪಿಎಸ್ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅವಕಾಶ ವಿರುವ "ಡಾ. ರಾಜ್ ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವೀಸ್" ಸಂಸ್ಥೆ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ಹತ್ತಿರವಿದ್ದು, ಫೆಬ್ರವರಿ ತಿಂಗಳ ಮೊದಲ ವಾರದಲ್ಲಿ ಅಡ್ಮಿಷನ್ ಪ್ರಕ್ರಿಯೆ ಆರಂಭವಾಗುತ್ತಿದೆ. ಆಕಾಂಕ್ಷಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಫೆಬ್ರವರಿ ಮೂರನೇ ವಾರದಿಂದ ತರಗತಿಗಳು ಪ್ರಾರಂಭವಾಗುವ ಯೋಜನೆ ಮಾಡಲಾಗಿದೆ ಅಂತೆ.
ತರಬೇತಿ ಯಾರಿಂದ ಸಿಗಲಿದೆ?
ಡಾ.ರಾಜ್ ಕುಮಾರ್ ಕುಟುಂಬದವರು ತೆರೆದಿರುವ "ಡಾ.ರಾಜ್ ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವೀಸ್" ಸಂಸ್ಥೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಯುಪಿಎಸ್ಸಿ ಯಲ್ಲಿ ತೇರ್ಗಡೆ ಹೊಂದಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಗೆಸ್ಟ್ ಫ್ಯಾಕಲ್ಟಿ ಆಗಿ ಬಂದು ಮಾರ್ಗದರ್ಶನ ನೀಡಲಿದ್ದಾರಂತೆ.
"ಡಾ.ರಾಜ್ ಕುಮಾರ್ ಅಕಾಡೆಮಿ ಫಾರ್ ಸಿವಿಲ್ ಸರ್ವೀಸ್" ಸಂಸ್ಥೆ ಉದ್ದೇಶ
ದೊಡ್ಮನೆ ಸಂಸ್ಥೆ ಇಂದ ವರನಟ ಡಾ.ರಾಜ್ ಕುಮಾರ್ ಹೆಸರಿನಲ್ಲಿ ಕರ್ನಾಟಕದವರಿಗಾಗಿ ಕನ್ನಡದ ನೆಲದಲ್ಲಿ ಗುಣಮಟ್ಟದ ಐಎಎಸ್ ತರಬೇತಿ ಸಂಸ್ಥೆ ತೆರೆದಿರುವುದು ಸಾವಿರಾರು ಐಎಎಸ್ ಆಕಾಂಕ್ಷಿಗಳಿಗೆ ಅನುಕೂಲವಾಗಲಿದೆ. ಕನ್ನಡದ ನೆಲವೇ ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕೇಂದ್ರ ಆಗಬೇಕು ಎಂಬುದೇ ಅಕಾಡೆಮಿಯ ಉದ್ದೇಶವಾಗಿದೆ.
ಪ್ರತಿ ಐದು ಅಭರ್ಥಿಗಳಿಗೆ ಮೆಂಟರ್ಶಿಪ್ ಸೇವೆ, 24*7 ಗ್ರಂಥಾಲಯ ವ್ಯವಸ್ಥೆ, ಯುಪಿಎಸ್ಸಿ ಪರೀಕ್ಷೆ ಗಳಿಗೆ ಸಬಂಧಪಟ್ಟ ಎಲ್ಲಾ ರೀತಿಯ ಸ್ಟಡಿ ಮೆಟೀರಿಯಲ್ ಗಳನ್ನು ಅಕಾಡೆಮಿಯಲ್ಲಿ ಲಭ್ಯ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಕ್ಕೆ ಮೊಬೈಲ್ ಸಂಖ್ಯೆ: 9108448444, 9108449444