Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತ್ರಿಡಿಯಲ್ಲಿ ಮೂಡಿಬರಲಿದೆ ಅಣ್ಣಾವ್ರ 'ಬಬ್ರುವಾಹನ'
ನಟ ಸಾರ್ವಭೌಮ ಡಾ.ರಾಜ್ ಕುಮಾರ್ ದ್ವಿಪಾತ್ರಾಭಿನಯದ ಅಮೋಘ 'ಬಬ್ರುವಾಹನ' (1977) ಚಿತ್ರ ತ್ರಿಡಿಯಲ್ಲಿ ಮೂಡಿಬರಲು ಸಿದ್ಧವಾಗುತ್ತಿದೆ. ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ಈ ಪೌರಾಣಿಕ ಚಿತ್ರವನ್ನು ತ್ರಿಡಿಗೆ ರೂಪಾಂತರಿಸುವ ಕೆಲಸ ಭರದಿಂದ ಸಾಗಿದೆ.
ಕೆ.ಸಿ.ಎನ್ ಚಂದ್ರಶೇಖರ್ ನಿರ್ಮಾಣದ ಈ ಚಿತ್ರದ ಪಾತ್ರವರ್ಗದಲ್ಲಿ ಅಣ್ಣಾವ್ರ ಜೊತೆಗೆ ಬಿ.ಸರೋಜಾ ದೇವಿ, ಕಾಂಚನಾ, ಜಯಮಾಲಾ, ಶನಿಮಹದೇವಪ್ಪ, ವಜ್ರಮುನಿ, ತೂಗುದೀಪ ಶ್ರೀನಿವಾಸ್, ಶಕ್ತಿ ಪ್ರಸಾದ್, ರಾಜಾನಂದ ಸೇರಿದಂತೆ ಮುಂತಾದ ಕಲಾವಿದರಿದ್ದರು. [ಅಣ್ಣಾವ್ರ 'ಕಸ್ತೂರಿ ನಿವಾಸ' ಮನಮೋಹಕ ವಿಡಿಯೋ]
ಈ ಸಮಯ ಆನಂದಮಯ, ಬರಸಿಡಿಲು ಬಡಿದಂತೆ, ಯಾರು ತಿಳಿಯರು ನಿನ್ನ ಭುಜಬಲದ, ನಿನ್ನ ಕಣ್ಣ ನೋಟದಲ್ಲಿ...ಹಾಡುಗಳು ಇಂದಿಗೂ ಚಿತ್ರರಸಿಕರ ತನುಮನಗಳನ್ನು ತಣಿಸುತ್ತಿವೆ. ಈ ಚಿತ್ರ ತ್ರಿಡಿಯಲ್ಲಿ ಮೂಡಿಬರುತ್ತಿದ್ದು ಅಣ್ಣಾವ್ರ ದ್ವಿಪಾತ್ರಾಭಿನಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಲ್ಲುವಂತಾಗಿದೆ.
ಇದೇ ನವೆಂಬರ್ 7ಕ್ಕೆ ವರ್ಣರಂಜಿತ 'ಕಸ್ತೂರಿ ನಿವಾಸ' ಚಿತ್ರ ತೆರೆಕಾಣುತ್ತಿದೆ. ಇದರ ಜೊತೆಗೆ ವೀರಕೇಸರಿ, ಶ್ರೀ ರಾಘವೇಂದ್ರ ಮಹಾತ್ಮೆ ಚಿತ್ರಗಳನ್ನು ವರ್ಣಮಯವಾಗಿಸುವ ಕೆಲಸ ಭರದಿಂದ ಸಾಗಿದೆ. ಅಣ್ಣಾವ್ರ ಕಪ್ಪುಬಿಳುಪು ಚಿತ್ರಗಳನ್ನು ಬಣ್ಣದಲ್ಲಿ ನೋಡುವ ಸೌಭಾಗ್ಯವನ್ನು ನಿರ್ಮಾಪಕ ಕೆಸಿಎನ್ ಮೋಹನ್ ಮಾಡುತ್ತಿದ್ದಾರೆ. (ಏಜೆನ್ಸೀಸ್)