Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಬಾರಿ ರಾಜ್ ಉತ್ಸವ ಇಲ್ಲ: ಮೊದಲ ಬಾರಿ ಮಿಸ್ ಆದ ಸಂಭ್ರಮ
ಏಪ್ರಿಲ್ ತಿಂಗಳು ಕನ್ನಡಿಗರಿಗೆ ವಿಶೇಷವಾದ ತಿಂಗಳು. ಈ ತಿಂಗಳನ್ನು ಕನ್ನಡಿಗರು ರಾಜ್ ತಿಂಗಳೆಂದೆ ಕರೆಯುತ್ತಾರೆ. ಏಪ್ರಿಲ್ 24 ವರನಟ ಡಾ.ರಾಜ್ ಕುಮಾರ್ ಹುಟ್ಟಿದ ದಿನ. ಏಪ್ರಿಲ್ 12 ಡಾ.ರಾಜ್ ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಅಗಲಿದ ದಿನ. ಏಪ್ರಿಲ್ ತಿಂಗಳು ಪೂರ್ತಿ ರಾಜ್ ಉತ್ಸವ ಮಾಡುತ್ತಿದ್ದರು. ಆದರೆ ಈ ಬಾರಿ ಏಪ್ರಿಲ್ ಸಂಪೂರ್ಣ ಸ್ತಬ್ಧವಾಗಿದೆ. ಲಕ್ ಡೌನ್ ಹಿನ್ನಲೆ ರಾಜ್ ಉತ್ಸವ ನಡೆಯುವುದು ಅನುಮಾನ.
ಪ್ರತಿವರ್ಷ ಏಪ್ರಿಲ್ 12ರಂದು ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಪುಣ್ಯಭೂಮಿಗೆ ಭೇಟಿ ನೀಡಿ ನೆಚ್ಚಿನ ನಟನನ್ನು ಸ್ಮರಣೆ ಮಾಡುತ್ತಿದ್ದರು. ಏಪ್ರಿಲ್ 24ರಂದು ದೊಡ್ಡ ಹಬ್ಬವನ್ನೆ ಆಚರಿಸುತ್ತಿದ್ದರು. ರಾಜ್ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿದ್ದರು. ಕುಟುಂಬದವರ ಜೊತೆ ಅಪಾರ ಸಂಖ್ಯೆಯ ಅಭಿಮಾನಿಗಳು ಸಹ ಭೇಟಿ ನೀಡಿ ರಾಜ್ ನೆನೆದು ಧನ್ಯರಾಗುತ್ತಿದ್ದರು.
ಕೇವಲ ಬೆಂಗಳೂರು ಮಾತ್ರವಲ್ಲದೆ ರಾಜ್ಯದಾದ್ಯಂತ ಅಭಿಮಾನಿಗಳು ಸಂಭ್ರಮಿಸಿ ಅನ್ನದಾನ, ರಕ್ತ ದಾನ ಸೇರಿದಂತೆ ತಮ್ಮದೆ ರೀತಿಯಲ್ಲಿ ಡಾ.ರಾಜ್ ಅವರನ್ನು ನೆನೆಯುತ್ತಾರೆ. ಈಗಾಗಲೆ ಎಲ್ಲಾ ತಯಾರಿಗಳು ನಡೆಯುತ್ತಿತ್ತು. ಆದರೆ ಈ ಬಾರಿ ಕಿಲ್ಲರ್ ಕೊರೊನಾ ರಾಜ್ ಸಂಭ್ರಮವನ್ನೂ ಕಿತ್ತುಕೊಂಡಿದೆ.
ಹೌದು, ಈ ಬಾರಿ ರಾಜ್ ಕುಮಾರ್ ಉತ್ಸವ ನಡೆಯುವುದು ಅನುಮಾನವಾಗಿದೆ. ಕೊರೊನಾ ಲಾಕ್ ಡೌನ್ ಇರುವ ಹಿನ್ನಲೆ ಇದೆ ಮೊದಲ ಬಾರಿಗೆ ರಾಜ್ ಸಂಭ್ರಮ ಮಿಸ್ ಆಗುತ್ತಿದೆ. ಈಗಾಗಲೆ ಅಭಿಮಾನಿಗಳು ರಾಜ್ ಸಂಭ್ರಮಕ್ಕೆ ಸಜ್ಜಾಗುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಇಡೀ ಏಪ್ರಿಲ್ ತಿಂಗಳು ರಾಜ್ ಗೆ ನಮನ ಸಲ್ಲಿಸುತ್ತಿದ್ದರು. ಆದರೆ ಈ ಬಾರಿ ಇದ್ಯಾವುದು ಕಾಣುತ್ತಿಲ್ಲ. ಕೊರೊನಾ ಲಾಕ್ ಡೌನ್ ಕಾರಣ ಎಲ್ಲಾ ಸಂಭ್ರಮಕ್ಕೂ ಬ್ರೇಕ್ ಬಿದ್ದಿದೆ.