Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲ ಹೆಜ್ಜೆಯಲ್ಲೇ ಯಶಸ್ಸು ಗಳಿಸಿ ಅಣ್ಣಾವ್ರ ಮೊಮ್ಮಗ
ಕಲಾವಿದರ ಮಕ್ಕಳು ಚಿತ್ರರಂಗದಲ್ಲೇ ಗುರುತಿಸಿಕೊಳ್ಳಬೇಕು ಎನ್ನುವ ನಿಯಮವೇನಿಲ್ಲ. ತಮ್ಮ ತಾತ, ತಂದೆ, ದೊಡ್ಡಪ್ಪ, ಚಿಕ್ಕಪ್ಪ ಎಲ್ಲರೂ ಸಿನಿಮಾರಂಗದಲ್ಲಿ ಅದ್ಬುತ ಕಲಾವಿದರಾಗಿ ಗುರುತಿಸಿಕೊಂಡಿದ್ದರು ಡಾ ರಾಜ್ ಕುಮಾರ್ ಅವರ ಕಿರಿಯ ಮೊಮ್ಮಗ ಯುವ ರಾಜ್ಕುಮಾರ್ ಮಾತ್ರ ಆಯ್ಕೆ ಮಾಡಿಕೊಂಡಿದ್ದು ಶಿಕ್ಷಣ ಕ್ಷೇತ್ರ. ಕನ್ನಡಿಗರು ಕೆ ಎ ಎಸ್ ಹಾಗೂ ಐ ಎ ಎಸ್ ಪರೀಕ್ಷೆಗಳಿಗೆ ತರಬೇತಿ ಪಡೆಯಲು ದೆಹಲಿಗೆ ಹೋಗಬೇಕಿತ್ತು.
ನಮ್ಮದಲ್ಲದ ಊರಿನಲ್ಲಿ ಉಳಿದುಕೊಂಡು ಶಿಕ್ಷಣ ಪಡೆಯುವುದು ತುಂಬಾ ಕಷ್ಟ ಎಂದು ತಿಳಿದ ಡಾ ರಾಜ್ ಕುಟುಂಬಸ್ಥರು ಬೆಂಗಳೂರಿನಲ್ಲಿ ಅಣ್ಣಾವ್ರ ಹೆಸರಿನಲ್ಲಿ ಡಾ ರಾಜ್ ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯನ್ನು ಆರಂಭ ಮಾಡಿದರು. ಪ್ರಾರಂಭವಾದ ಒಂದೇ ವರ್ಷದಲ್ಲಿ ರಾಜ್ಯದ ಜನರು ಮೆಚ್ಚುವಂತಹ ಕೆಲಸವನ್ನ ಅಣ್ಣಾವ್ರ ಮೊಮ್ಮಗ ಯುವರಾಜ್ ಕುಮಾರ್ ಮಾಡಿದ್ದಾರೆ.
ಹೆಸರು ಬದಲಾಯಿಸಿಕೊಂಡ ಅಣ್ಣಾವ್ರ ಮೊಮ್ಮಗ ಗುರು ರಾಜ್ ಕುಮಾರ್
ಈ ವರ್ಷ ರಾಜ್ಯದಿಂದ ಐಎಎಸ್ ಗೆ ಆಯ್ಕೆ ಆಗಿರುವ 28 ಜನರ ಪೈಕಿ 16 ಜನರು ಡಾ ರಾಜ್ ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ಸಂದರ್ಶನಕ್ಕಾಗಿ ತರಬೇತಿ ಪಡೆದಿದ್ದರು ಎನ್ನುವುದು ಖುಷಿಯ ವಿಚಾರವಾಗಿದೆ. ಐಎಎಸ್ ನ ಅಂತಿಮ ಪರೀಕ್ಷೆಯಲ್ಲಿ ಆಯ್ಕೆಯಾದ ಬಳಿಕ ನಡೆಯುವ ಸಂದರ್ಶನಕ್ಕೆ ಸಿದ್ಧಗೊಳ್ಳಲು ರಾಜ್ ಕುಮಾರ್ ಅಕಾಡೆಮಿಯಲ್ಲಿ ಅಣಕು ಸಂದರ್ಶನ ನಡೆಸಲಾಗಿದೆ. ಅಣಕು ಸಂದರ್ಶನದಲ್ಲಿ ಯುಪಿಎಸ್ ಸಿ ಗೆ ಸಂದರ್ಶನದ ಸವಾಲುಗಳನ್ನ ಹೇಳಿಕೊಡಲಾಗುತ್ತದೆ.
ಇಷ್ಟು ವರ್ಷಗಳ ಕಾಲ ಸಿನಿಮಾರಂಗದಲ್ಲಿ ಯಶಸ್ಸು ಕೀರ್ತಿಗಳಿಸಿದ ಡಾ ರಾಜ್ ಕುಟುಂಬಸ್ಥರು ಈಗ ಶಿಕ್ಷಣ ಕ್ಷೇತ್ರದಲ್ಲಿಯೂ ಹೆಸರು ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ.
ಹೆಸರು ಬದಲಾವಣೆ ಗುಟ್ಟು ಬಿಚ್ಚಿಟ್ಟ ರಾಜ್ ಮೊಮ್ಮಗ