Don't Miss!
- News ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
11ನೇ ದಿನದ ಕಾರ್ಯ: ಪುನೀತ್ ರಾಜ್ಕುಮಾರ್ ಸಮಾಧಿ ಬಳಿ ಅಣ್ಣಾವ್ರ ಕುಟುಂಬ
ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ 11 ದಿನ ಆಗಿದೆ. ಇಂದು 11ನೇ ದಿನದ ಕಾರ್ಯವನ್ನು ಅಣ್ಣಾವ್ರ ಕುಟುಂಬ ಮಾಡಲಿದ್ದು, ಇಂದು ಕುಟುಂಬಸ್ಥರಿಗೆ ಮಾತ್ರವೇ ಪ್ರವೇಶಾವಕಾಶ ಕಲ್ಪಿಸಲಾಗಿದೆ.
Recommended Video
ಈಗಾಲಗೇ ರಾಘವೇಂದ್ರ ರಾಜ್ಕುಮಾರ್ ಆದಿಯಾಗಿ ದೊಡ್ಮನೆಯ ಹಲವು ಸದಸ್ಯರು ಕಂಠೀರವ ಸ್ಟುಡಿಯೋಗೆ ಆಗಮಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಮುಂದಾಳತ್ವದಲ್ಲಿ 11 ನೇ ದಿನದ ಕಾರ್ಯ ಮಾಡಲು ಸಲಕ ಸಿದ್ಧತೆ ಆರಂಭವಾಗಿದೆ. ರಾಘವೇಂದ್ರ ರಾಜ್ಕುಮಾರ್ ಅವರ ಇಬ್ಬರು ಮಕ್ಕಳು ಬಿರುಸಿನಿಂದ ಓಡಾಡುತ್ತಾ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ.
ಅಪ್ಪು ಸಮಾಧಿಯನ್ನು ಹೂವುಗಳಿಂದ ಅಲಂಕೃತಗೊಳಿಸಲಾಗಿದೆ. ಅಪ್ಪುವಿನ ಇಷ್ಟದ ಆಹಾರವನ್ನು ಸಮಾಧಿಯ ಎದುರು ಇಡಲಾಗಿದೆ. ಗುಲಾಬಿ ಪಕಳೆಗಳಿಂದ ಸಮಾಧಿಯನ್ನು ಮುಚ್ಚಿ ಸಮಾಧಿಯ ಮೇಲೆ ತುಳಸಿ ಹಾರವನ್ನು ವೃತ್ತಾಕಾರದಲ್ಲಿ ಇಟ್ಟು ಅದರ ಮಧ್ಯೆ ಮಣ್ಣಿನ ಹಣತೆಯನ್ನು ಹಚ್ಚಲಾಗಿದೆ. ಪುನೀತ್ ರಾಜ್ಕುಮಾರ್ ಸಮಾಧಿಯ ಸುತ್ತಲೂ ಬಿಳಿ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿದೆ. ಸಮಾಧಿಯ ಪಕ್ಕ ಗೋಡೆಯ ಮಾದರಿ ರಚನೆ ಮಾಡಿ ಅದರಲ್ಲಿ ಸ್ಟಾರ್ ಮಾಡಿ ಅದರ ಮಧ್ಯೆ ರಾಜಕುಮಾರ ಸಿನಿಮಾದ ಪುನೀತ್ ಚಿತ್ರವನ್ನು ಇರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಮಕ್ಕಳಾದ ವಂದಿತಾ ಹಾಗೂ ಧೃತಿ ಸಮಾಧಿ ಬಳಿ ಆಗಮಿಸಿದ್ದಾರೆ. ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿರುವ ವಂದಿತಾಗೆ ಇಂದು ಪರೀಕ್ಷೆ ಇದೆ. ಅಪ್ಪನಿಗೆ ಪೂಜೆ ಸಲ್ಲಿಸಿ ವಂದಿತಾ ಪರೀಕ್ಷೆಗೆ ತೆರಳುವ ಸಂಭವ ಇದೆ.
ಶಿವರಾಜ್ ಕುಮಾರ್ ದಂಪತಿ ಅವರ ಮಕ್ಕಳು ಸಹ ಸಮಾಧಿ ಬಳಿ ಆಗಮಿಸಿದ್ದಾರೆ. ಪಾರ್ವತಮ್ಮ ರಾಜ್ಕುಮಾರ್ ಸಹೋದರ ಚಿನ್ನೇಗೌಡ ಕುಟುಂಬ, ಅವರ ಮಕ್ಕಳಾದ ಶ್ರೀಮುರಳಿ, ರಾಘವೇಂದ್ರ ರಾಜ್ಕುಮಾರ್ ಸಹ ಸಮಾಧಿ ಬಳಿ ಆಗಮಿಸಿದ್ದಾರೆ. ರಾಮ್ಕುಮಾರ್ ಕುಟುಂಬ ಸಹ ಆಗಮಿಸಿದೆ. ಅಪ್ಪು ಅವರ ಅಭಿಮಾನಿ ಆಗಿರುವ ನಟಿ, ನಿರೂಪಕಿ, ಅನುಶ್ರೀ ಸಮಾಧಿ ಬಳಿ ಆಗಮಿಸಿದ್ದಾರೆ. ಅನುಶ್ರೀ ಮುಖದಲ್ಲಿ ದುಃಖ ಎದ್ದು ಕಾಣುತ್ತಿದೆ.
11ನೇ ದಿನ ಪೂಜಾ ಕಾರ್ಯಗಳು ಪ್ರಾರಂಭವಾಗಿದ್ದು, ಇನ್ನೂ ಹಲವಾರು ಗಣ್ಯರು, ಪುನೀತ್ ಅವರ ಆಪ್ತರು ಇಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಂಠೀರವ ಸ್ಟುಡಿಯೋಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿದೆ. ಇಂದು ಮಧ್ಯಾಹ್ನ 12 ಗಂಟೆ ವರೆಗೆ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಇನ್ಯಾರ ಪ್ರವೇಶಕ್ಕೂ ಅನುಮತಿ ಇರುವುದಿಲ್ಲ. 12 ಬಳಿಕ ಸಾರ್ವಜನಿಕರು ದರ್ಶನ ಪಡೆಯಬಹುದಾಗಿದೆ.