Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ಯದಲ್ಲೇ ಗಲ್ಫ್ ದೇಶಕ್ಕೆ ಹಾರಲಿರುವ ಡಾ.ರಾಜ್ ಅವರ 'ಬಬ್ರುವಾಹನ'
ಕನ್ನಡಿಗರ ಹೆಮ್ಮೆಯ ಕಣ್ಮಣಿ ಡಾ.ರಾಜ್ ಕುಮಾರ್ ಅವರ ಸೂಪರ್ ಹಿಟ್ ಸಿನಿಮಾ 'ಬಬ್ರುವಾಹನ' ಡಾ.ರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಏಪ್ರಿಲ್ 22 ರಂದು ಆಧುನೀಕೃತಗೊಂಡು ರೀ-ರಿಲೀಸ್ ಆಗಿತ್ತು.
ಬೆಂಗಳೂರಿನ ಅನುಪಮ, ನವರಂಗ್ ಮತ್ತು ಉಮಾ ಚಿತ್ರಮಂದಿರಗಳಲ್ಲಿ ಈಗಲೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ 'ಬಬ್ರುವಾಹನ' ಸಿನಿಮಾ ಇದೀಗ ವಿದೇಶಕ್ಕೆ ಹಾರಲು ಸಜ್ಜಾಗಿದೆ.[ಅನುಪಮ, ನವರಂಗ್ ಮತ್ತು ಉಮಾ ಚಿತ್ರಮಂದಿರದಲ್ಲಿ 'ಬಬ್ರುವಾಹನ']
1977ನೇ ವರ್ಷದ 'ಬಬ್ರುವಾಹನ' ಟೆಕ್ನಿಕಲಿ ಅಪ್ ಗ್ರೇಡ್ ಆಗಿ ಹೊಸ ರೂಪದಲ್ಲಿ ಕಳೆದ ತಿಂಗಳಿನಲ್ಲಿ ಮರು ಬಿಡುಗಡೆ ಆಗಿತ್ತು. ರಾಜ್ಯದಲ್ಲಿ ಉತ್ತಮ ರೆಸ್ಪಾನ್ಸ್ ಗಿಟ್ಟಿಸಿಕೊಳ್ಳುತ್ತಿರುವ 'ಬಬ್ರುವಾಹನ' ಮಧ್ಯಪ್ರಾಚ್ಯದ ಒಂದಿಷ್ಟು ದೇಶಗಳು ಮತ್ತು ಯುಎಇಯಲ್ಲಿ ಮೇ ಕೊನೆಯ ವಾರದಲ್ಲಿ ಬಿಡುಗಡೆಯಾಗಲು ಸಿದ್ದವಾಗಿವೆ.[ಫೋಟೋ ಗ್ಯಾಲರಿ; ಡಾ.ರಾಜ್ ರವರ ಅಪರೂಪದ ಭಾವಚಿತ್ರಗಳು]
ಈಗಾಗಲೇ ದುಬೈ, ಶಾರ್ಜಾ, ಅಭುದಾಬಿ, ಓಮನ್ ನ ಸಲಾಲಾ, ಮಸ್ಕತ್ ಮತ್ತು ಸೋಹರ್ ನಲ್ಲಿ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವ 'ಬಬ್ರುವಾಹನ' ಸಿನಿಮಾ ಪ್ರದರ್ಶನ ಕಾಣಲು ತಯಾರಾಗಿ ನಿಂತಿದೆ.
ವಿದೇಶದಲ್ಲಿರುವ ಕನ್ನಡಿಗರ ಹಾಗೂ ಡಾ.ರಾಜ್ ಅವರ ಅಭಿಮಾನಿಗಳ ಒತ್ತಾಯದ ಮೇರೆಗೆ ಈ ಚಿತ್ರವನ್ನು ವಿದೇಶದಲ್ಲಿ ರೀ-ರಿಲೀಸ್ ಮಾಡಲು ಚಿತ್ರತಂಡದವರು ಯೋಜನೆ ಹಾಕಿಕೊಂಡಿದ್ದಾರೆ. ಚಿತ್ರದ ಪ್ರದರ್ಶನದ ಸಮಯ ಮತ್ತು ಸ್ಥಳಗಳನ್ನು ಇನ್ನೇನು ಕೆಲವೇ ದಿನಗಳಲ್ಲಿ ತಿಳಿಸಿಕೊಡಲಾಗುವುದು.[ಕಲಾರತ್ನ ಡಾ.ರಾಜ್ ಅಭಿನಯದ ಅತ್ಯುತ್ತಮ 10 ಚಿತ್ರಗಳು]
ಸುಮಾರು 50 ರಿಂದ 60 ಲಕ್ಷ ರೂಪಾಯಿ ಖರ್ಚು ಮಾಡಿ ಈ ಚಿತ್ರಕ್ಕೆ ಡಿಟಿಎಸ್ ಟೆಕ್ನಾಲಜಿ ಅಳವಡಿಸಿ 1977ರಲ್ಲಿ ನಿರ್ದೇಶಕ ಹುಣಸೂರು ಕೃಷ್ಣಮೂರ್ತಿ ಆಕ್ಷನ್-ಕಟ್ ಹೇಳಿದ್ದ 'ಬಬ್ರುವಾಹನ' ಚಿತ್ರಕ್ಕೆ ಹೊಸತನ ತುಂಬಲಾಗಿದೆ.
ಚಿತ್ರದಲ್ಲಿ ಡಾ.ರಾಜ್ ಕುಮಾರ್ ಅವರು ದ್ವಿಪಾತ್ರದಲ್ಲಿ ಮಿಂಚಿದ್ದು, ಇವರ ಜೊತೆ ನಾಯಕಿಯರಾಗಿ ಸರೋಜಾ ದೇವಿ, ಕಾಂಚನಾ, ಜಯಮಾಲಾ, ಖಳನಟ ವಜ್ರಮುನಿ, ತೂಗುದೀಪ ಶ್ರೀನಿವಾಸ್, ಶಕ್ತಿ ಪ್ರಸಾದ್ ಮತ್ತು ರಾಮಕೃಷ್ಣ ಮುಂತಾದವರು ಪ್ರಮುಖವಾಗಿ ಕಾಣಿಸಿಕೊಂಡಿದ್ದರು.