Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ ರಾಜ್ ಯೋಗ ಕೇಂದ್ರ ಸ್ಥಾಪನೆಗೆ ಮುಂದಾದ ಸಿದ್ದರಾಮಯ್ಯ ಸರ್ಕಾರ
ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಾ ರಾಜ್ ಕುಮಾರ್ ಸ್ಮಾರಕದ ಬಳಿ ಯೋಗ ಕೇಂದ್ರ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಸರ್ಕಾರ ಸ್ಮಾರಕ್ಕಾಗಿ ನೀಡಿದ್ದ ಜಾಗದಲ್ಲಿ ಡಾ ರಾಜ್ ಕುಮಾರ್ ಅವರ ವಸ್ತು ಸಂಗ್ರಹಾಲಯ ಮಾಡಬೇಕಾಗಿ ಡಾ ರಾಜ್ ಕುಟುಂಬದವರು ಯೋಚನೆ ಮಾಡಿದ್ದರು.
ಡಾ ರಾಜ್ ಕುಮಾರ್ ಪ್ರತಿನಿತ್ಯ ಯೋಗ ಮಾಡುತ್ತಿದ್ದರು ನಾಯ್ಕರ್ ಎನ್ನುವವರು ಅಣ್ಣಾವ್ರಿಗೆ ಯೋಗವನ್ನು ಕಲಿಸುತ್ತಿದ್ದರು. ತಮ್ಮ ಆತ್ಮೀಯರಿಗೂ ಯೋಗ ಕಲಿಯುವಂತೆ ತಿಳಿಸುತ್ತಿದ್ದರು. ಇದೇ ಉದ್ದೇಶವನ್ನು ಇಟ್ಟುಕೊಂಡು ಡಾ ರಾಜ್ ಸ್ಮಾರಕದ ಬಳಿ ಯೋಗ ಕೇಂದ್ರವನ್ನ ಸ್ಥಾಪಿಸಲು ನಿರ್ಧಾರ ಮಾಡಲಾಗಿದೆ.
ಈ ಬಗ್ಗೆ ಫಿಲ್ಮಿ ಬೀಟ್ ಜೊತೆ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ "ವಿಚಾರ ಕೇಳಿ ತುಂಬಾ ಖುಷಿ ಆಗಿದೆ. ಅಪ್ಪಾಜಿ ಅವರೇ ಇದನ್ನ ಮಾಡಿಸಿಕೊಳ್ಳುತ್ತಾರೆ ಅಂದರೆ ಅವರಿಗಿರುವ ಖ್ಯಾತಿ ಮತ್ತು ಅಭಿಮಾನಿಗಳಿಂದ ಅವರಿಗೆ ಸಲ್ಲಬೇಕಾದದ್ದು ಎಲ್ಲವೂ ಸಲ್ಲುತ್ತದೆ ಎನ್ನುವುದು ತಿಳಿದಿದ್ದು. ಇದಕ್ಕಾಗಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ" ಎಂದಿದ್ದಾರೆ.
ಯೋಗ ಕೇಂದ್ರ ಸ್ಥಾಪನೆ ಆದರೆ ಅಣ್ಣಾವ್ರಂತೆ ಅವರ ಅಭಿಮಾನಿಗಳು ಕೂಡ ಯೋಗವನ್ನು ಅಭ್ಯಾಸ ಮಾಡಬಹುದಾಗಿದೆ. ಕಂಠೀರವ ಸ್ಟುಡಿಯೋ ಸುತ್ತಾ ಮುತ್ತ ಇರುವ ಸಾಮಾನ್ಯ ಜನರು ಇದರ ಲಾಭ ಪಡೆದುಕೊಳ್ಳಬಹುದು.