Just In
Don't Miss!
- Automobiles
ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಿಸಲು ಹೊಸ ಯೋಜನೆ ಚಾಲನೆ ನೀಡಿದ ಕ್ರೆಡರ್
- News
ಪ್ರಶ್ನೆ ಪತ್ರಿಕೆ ಸಮೇತ ಸಿಸಿಬಿ ಬಲೆಗೆ ಬಿದ್ದ ಲೀಕಾಸುರರು !
- Sports
ಐಎಸ್ಎಲ್: ಪ್ಲೇ ಆಫ್ ಕನಸಲ್ಲಿರುವ ಜೆಮ್ಷೆಡ್ಪುರಕ್ಕೆ ಹೈದರಾಬಾದ್ ಸವಾಲು
- Lifestyle
ಮಕರ ರಾಶಿಗೆ ಶುಕ್ರನ ಸಂಚಾರ: ಯಾವೆಲ್ಲಾ ರಾಶಿಗೆ ಶುಕ್ರದೆಸೆ
- Finance
ಮೂರನೇ ತ್ರೈಮಾಸಿಕದಲ್ಲಿ ಭಾರೀ ಲಾಭಗಳಿಸಿದ ರಿಲಯನ್ಸ್ ಇಂಡಸ್ಟ್ರೀಸ್
- Education
NIT Recruitment 2021: ಜ್ಯೂನಿಯರ್ ರಿಸರ್ಚ್ ಫೆಲೋ ಜೆಆರ್ಎಫ್ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪವನ್ ಒಡೆಯರ್ ಮನೆಗೆ ಸಚಿವ ಸುಧಾಕರ್ ಭೇಟಿ; 'ಅದ್ಭುತ ವ್ಯಕ್ತಿತ್ವಕ್ಕೆ ಮೂಕನಾಗಿದ್ದೀನಿ' ಎಂದ ನಿರ್ದೇಶಕ
ನಿರ್ದೇಶಕ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್ ಇತ್ತೀಚಿಗಷ್ಟೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮನೆಗೆ ಪುತ್ರ ಆಗಮಿಸಿದ ಸಂತೋಷದಲ್ಲಿರುವ ಒಡೆಯರ್ ಮನೆಗೆ ಆರೋಗ್ಯ ಸಚಿವಾ ಸುಧಾಕರ್ ಭೇಟಿ ಮಾಡಿದ್ದಾರೆ. ಸುಧಾಕರ್ ಭೇಟಿ ಇಡೀ ಪವನ್ ಒಡೆಯರ್ ಕುಟುಂಬಕ್ಕೆ ಸಂತೋಷ ತಂದಿದೆ.
ಪವನ್ ಒಡೆಯರ್-ಅಪೇಕ್ಷ ದಂಪತಿಯ ಚೊಚ್ಚಲ ಮುದ್ದಾದ ಮಗುವಿಗೆ ಸುಧಾಕರ್ ಶುಭ ಹಾರೈಸಿದ್ದಾರೆ. ಮಗುವಿಗಾಗಿ ಉಡುಗೊರೆಯನ್ನು ಹೊತ್ತು ತಂದಿದ್ದ ಸಚಿವರು ಮಗುವಿಗೆ ಗಿಫ್ಟ್ ನೀಡಿ, ಮುದ್ದಾಡಿದ್ದಾರೆ.
ಮುದ್ದು ಮಗನ ಮೊದಲ ಫೋಟೋ ಹಂಚಿಕೊಂಡ ನಿರ್ದೇಶಕ ಪವನ್ ಒಡೆಯರ್
ಈ ಬಗ್ಗೆ ಪವನ್ ಒಡೆಯರ್ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಧಾಕರ್ ಭೇಟಿಯ ಫೋಟೋಗಳನ್ನು ಶೇರ್ ಮಾಡುವ ಜೊತೆಗೆ ಅದ್ಭುತ ವ್ಯಕ್ತತ್ವಕ್ಕೆ ಮೂಕನಾಗಿದ್ದೀನಿ ಎಂದು ಬರೆದುಕೊಂಡಿದ್ದಾರೆ.
'ನಿಮ್ಮ ಈ ಅದ್ಭುತ ವ್ಯಕ್ತಿತ್ವಕ್ಕೆ ಮೂಕನಾಗಿದ್ದೀನಿ ಸರ್. ನಿಮ್ಮೆಲ್ಲ ಕೆಲಸದ ಒತ್ತಡಗಳ ನಡುವೆಯೂ ಮನೆಗೆ ಆಗಮಿಸಿ ನನ್ನ ಮಗುವನ್ನು ಆಶೀರ್ವದಿಸಿದ ನಿಮಗೆ ನಾನು ಚಿರಋಣಿ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಅಂದಹಾಗೆ ಸುಧಾಕರ್ ಕೆಲವು ಸಮಯ ಪವನ್ ಒಡೆಯರ್ ಕುಟುಂಬದ ಜೊತೆ ಕಳೆದು, ಮಾತುಕತೆ ನಡೆಸಿ ಹೊರಟುಹೋಗಿದ್ದಾರೆ. ಒಡೆಯರ್ ಕುಟುಂಬದ ಜೊತೆ ಸುಧಾಕರ್ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಡಿಸೆಂಬರ್ 10ರಂದು ಪವನ್ ಒಡೆಯರ್ ಪತ್ನಿ ಅಪೇಕ್ಷಾ ಮುದ್ದಾದ ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಯಾದ ಸಂತಸವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು. ವಿಶೇಷ ಎಂದರೆ ಪವನ್ ಒಡೆಯರ್ ಹುಟ್ಟುಹಬ್ಬದ ದಿನವೇ ಮಗ ಜನಿಸಿದ್ದಾನೆ.
ಗಂಡು ಮಗುವಾದ ಸಂತಸವನ್ನು ಪವನ್ ಮೊದಲು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, 'ನನ್ನ ಜನ್ಮ ದಿನಕ್ಕೆ ವಿಶ್ವದ ಅತ್ಯಂತ ಅದ್ಭುತ ಉಡುಗೊರೆ ದೊರೆತಿದೆ. ಗಂಡು ಮಗುವಿನ ತಂದೆಯಾಗಿದ್ದೇನೆ. ಜೈ ಚಾಮುಂಡೇಶ್ವರಿ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.