Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶೇಷತೆಗಳ ಜೊತೆ ಬಂತು 2019ನೇ ವರ್ಷದ ಡಾ.ವಿಷ್ಣು ಕ್ಯಾಲೆಂಡರ್
ಡಾ.ವಿಷ್ಣುವರ್ಧನ ಅವರ ನೆನಪನ್ನು ಮನೆ ಮನಗಳಲ್ಲಿ ಹಸಿರಾಗಿಡುವ ಸಲುವಾಗಿ ಕಳೆದ 7 ವರ್ಷಗಳಂತೆ ಈ ವರ್ಷವೂ ಕೋಟಿಗೊಬ್ಬ ಕ್ಯಾಲೆಂಡರ್ ಅನ್ನು ಡಾ.ವಿಷ್ಣು ಸೇನಾ ಸಮಿತಿ ಹೊರ ತರುತ್ತಿದೆ. ಪ್ರತಿ ವರ್ಷವೂ ಹೊಸ ರೀತಿಯ ಪರಿಕಲ್ಪನೆ ಮತ್ತು ವಿನ್ಯಾಸಗಳಿಂದ ಮನಸೂರೆಗೊಳ್ಳುತ್ತಿರುವ ಕೋಟಿಗೊಬ್ಬ ಕ್ಯಾಲೆಂಡರ್ ಈ ಸಲ ಸಿಂಹಸ್ವರೂಪಿ ಡಾ.ವಿಷ್ಣುವರ್ಧನ ಎಂಬ ಪರಿಕಲ್ಪನೆ ಅಡಿಯಲ್ಲಿ ಮೂಡಿದೆ.
12 ಪುಟಗಳ ಜೊತೆಗೆ ಇನ್ನೆರೆಡು ವಿಶೇಷ ಪುಟಗಳಿವೆ. ಈ ಕ್ಯಾಲೆಂಡರ್ ಡಾ.ವಿಷ್ಣುವರ್ಧನ ಅವರ ವಿಶೇಷ ಫೋಟೋಗಳು ಮತ್ತು ಅವರು ನುಡಿದಿದ್ದ ಕೆಲವು ಸುಪ್ರಸಿದ್ದ ಹೇಳಿಕೆಗಳನ್ನು ಒಳಗೊಂಡಿದೆ. ಜೊತೆಗೆ ಡಾ.ವಿಷ್ಣುವರ್ಧನ್ ಅವರು ಸಿಂಹಸ್ವರೂಪಿ ಹೇಗೆ ಎಂಬುದರ ಬಗ್ಗೆ ಡಾ.ವಿ.ನಾಗೇಂದ್ರಪ್ರಸಾದ್, ಕೆ.ಕಲ್ಯಾಣ್ ಮತ್ತು ರವಿ ಶ್ರೀವತ್ಸ ಮುಂತಾದವರು ಮಾತನಾಡಿದ್ದಾರೆ.
ದಿಗ್ಗಜರ ಸ್ಮಾರಕ ವಿಚಾರ: ಖಡಕ್ ಎಚ್ಚರಿಕೆ ನೀಡಿದ ವೀರಕಪುತ್ರ ಶ್ರೀನಿವಾಸ
ಒಂದು ವೃತ್ತಿಪರ ಕ್ಯಾಲೆಂಡರ್ ನಲ್ಲಿ ಇರುವಂತಹ, ರಜೆ ದಿನಗಳು, ರಾಹುಕಾಲ, ಗುಳಿಕಕಾಲ, ಅಮಾವಾಸೆ, ಹುಣ್ಣಿಮೆ ಇತ್ಯಾದಿಗಳೆಲ್ಲವೂ ಈ ಕ್ಯಾಲೆಂಡರ್ ನಲ್ಲಿ ಕಾಣಬಹುದು. ವಿಷ್ಣು ಅವರ ಕ್ಯಾಲೆಂಡರ್ ಎಂದ ಮಾತ್ರಕ್ಕೆ ಬರೀ ಫೋಟೋಗಳಿಗೆ ಅಥವಾ ಅಭಿಮಾನಿಗಳಿಗೆ ಮಾತ್ರ ಸೀಮಿತವಾಗದೆ ಇಡೀ ಕುಟುಂಬದವರಿಗೆ ಅನುಕೂಲವಾಗುವಂತೆ ರೂಪುಗೊಂಡಿದೆ.
'ರಾಜ್-ವಿಷ್ಣು-ಅಂಬಿ ನಂತರ ಯಾರಿಗೂ ಸ್ಮಾರಕ ಬೇಡ' ಎಂದ ಖ್ಯಾತ ನಟ
ಸಿಂಹವೊಂದು ಮನೆಯ ಗೋಡೆ ಮೇಲೆ ನಡೆದು ಹೋಗುವ ಅನುಭವವನ್ನು ಕಟ್ಟಿಕೊಡುವಂತಹ ಆಕರ್ಷಕ ವಿನ್ಯಾಸ ಮತ್ತು ಸಾಮಾನ್ಯ ಕ್ಯಾಲೆಂಡರ್ ಗಿಂತ ದುಪ್ಟಟ್ಟು ಗಾತ್ರ ಹೊಂದಿರುವುದು ಈ ಕ್ಯಾಲೆಂಡರ್ನ ಮತ್ತೆರೆಡು ವಿಶೇಷಗಳಾಗಿವೆ. ಇಷ್ಟೆಲ್ಲಾ ವಿಶೇಷತೆಗಳ ಕ್ಯಾಲೆಂಡರ್ನ ಮುದ್ರಣ ಹತ್ತಿರಹತ್ತಿರ ನೂರೂ ರೂಪಾಯಿ ಇದ್ದರೂ, ಅದನ್ನು ಅಭಿಮಾನಿಗಳಿಗಾಗಿ ವೀರಕಪುತ್ರ ಶ್ರೀನಿವಾಸ್ ಮತ್ತವರ ಸ್ನೇಹಿತರು ಕೇವಲ ರೂ.50 ರೂಪಾಯಿಗಳಿಗೆ ನೀಡುತ್ತಿದ್ದಾರೆ.
ಏಕೆಂದರೆ ಈ ಕ್ಯಾಲೆಂಡರ್ ಪ್ರತಿಯೊಬ್ಬ ಅಭಿಮಾನಿ ಮನೆಯಲ್ಲಿರಬೇಕೆಂಬುದು ಅವರ ಉದ್ದೇಶ. ಈ ಕ್ಯಾಲೆಂಡರ್ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳ ಬಸ್ ಸ್ಟ್ಯಾಂಡ್ ಬಳಿಯ ಪುಸ್ತಕದ ಅಂಗಡಿಗಳಲ್ಲಿ ಲಭ್ಯವಿದೆ.