Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಪ್ರಕರಣ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಾ.ವಿಷ್ಣುವರ್ಧನ್ 'ರಾಷ್ಟ್ರೀಯ ಉತ್ಸವ'ಕ್ಕೆ ಆಸ್ಟ್ರೇಲಿಯಾದಿಂದ ಅಭಿಮಾನಿಗಳ ಆಗಮನ
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮೇಲಿನ ಅಭಿಮಾನವೇ ಅಂತಹುದ್ದು. ಅವರು ಕಾಲವಾಗಿ ಎಂಟು ವರ್ಷಗಳಾಗುತ್ತಿದ್ದರೂ, ಇನ್ನೂ ಅಭಿಮಾನಿಗಳಿಗೆ ಅವರ ಮೇಲಿನ ಅಭಿಮಾನ ಎಳ್ಳಷ್ಟೂ ಕಮ್ಮಿಯಾಗಿಲ್ಲ. ಬದಲಾಗಿ ದಿನೇ ದಿನೇ ಹೆಚ್ಚಾಗುತ್ತಿದೆ.
ಇದಕ್ಕೆ ಸಾಕ್ಷಿ... ಈಗಲೂ ಡಾ.ವಿಷ್ಣುವರ್ಧನ್ ರವರ ಹೆಸರಿನಲ್ಲಿ ತೆರೆಗೆ ಬರುತ್ತಿರುವ ಚಿತ್ರಗಳು ಹಾಗೂ ಅವರ ನೆನಪಿನಲ್ಲಿ ಡಾ.ವಿಷ್ಣು ಸೇನಾ ಸಮಿತಿ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಸುತ್ತಿರುವ ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ.
ವಿಷ್ಣು ಸೇನಾ ಸಮಿತಿಯಿಂದ ದೆಹಲಿಯಲ್ಲಿ 'ಡಾ.ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ'
ಈ ರಾಷ್ಟ್ರೀಯ ಉತ್ಸವ ಈಗಾಗಲೇ ಅಭಿಮಾನಿಗಳಲ್ಲಿ ಸಂಚಲನವನ್ನು ಉಂಟು ಮಾಡಿದೆ ಎಂದರೆ ತಪ್ಪಾಗಲಾರದು. ಯಾವ ಮಟ್ಟದ ಸಂಚಲನ ಅಂದರೆ ಆಸ್ಟ್ರೇಲಿಯಾದಲ್ಲಿರುವ ಅಭಿಮಾನಿಗಳು ಈ ರಾಷ್ಟ್ರೀಯ ಉತ್ಸವದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬರುವಷ್ಟು.!
ಹೌದು.. ನೀವು ಓದಿದ್ದು ನಿಜ. ಆಸ್ಟ್ರೇಲಿಯಾದಲ್ಲಿರುವ ಉದ್ಯೋಗಿ ಬಲರಾಮ್ ಮತ್ತವರ ಗೆಳೆಯರು ಡಾ.ವಿಷ್ಣು ಅವರ ಮೇಲಿನ ಅಭಿಮಾನಕ್ಕಾಗಿ ರಾಷ್ಟ್ರೀಯ ಉತ್ಸವದಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾದಿಂದ ಆಗಮಿಸುತ್ತಿದ್ದಾರೆ. ಮೂರು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವಕ್ಕೆ ಇದೊಂದು ಹೆಮ್ಮೆಯ ವಿಚಾರ ಎಂಬುದನ್ನು ವಿ.ಎಸ್.ಎಸ್ ನ ಅಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.